ನಮ್ಮ ರಾಷ್ಟ್ರಕೂಟರ ಇತಿಹಾಸ ನಿಮಗೆಷ್ಟು ಗೊತ್ತು?
ಬೆಂಗಳೂರು, ನವೆಂಬರ್ 10 : ನಮ್ಮ ರಾಷ್ಟ್ರಕೂಟರ ಇತಿಹಾಸ ನಿಮಗೆಷ್ಟು ಗೊತ್ತು? ಎನ್ನುವ ಸಂವಾದ ಕಾರ್ಯಕ್ರಮವನ್ನು ಮುನ್ನೋಟ ಬುಕ್ ಸ್ಟೋರ್ಸ್ ಬೆಂಗಳೂರಿನ ಬಸವನಗುಡಿಯಲ್ಲಿರುವ ತಮ್ಮ ಶಾಖೆಯಲ್ಲಿ ನವೆಂಬರ್ 12ರಂದು, ಭಾನುವಾರ ಆಯೋಜಿಸಿದೆ.
ಪ್ರತಿ ಭಾನುವಾರ ಬೆಳಿಗ್ಗೆ ವಿಭಿನ್ನ ವಸ್ತುವಿನೊಂದಿಗೆ ಕನ್ನಡಿಗರೆದಿರು ಹಾಜರಾಗುವ ಮುನ್ನೋಟ ಪುಸ್ತಕ ಮಳಿಗೆ, ಆ ವಾರ ಆಯ್ದುಕೊಂಡಿರುವುದು ಇತಿಹಾಸದ ವಿದ್ಯಾರ್ಥಿಗಳಿಗೆ, ಇತಿಹಾಸದ ಬಗ್ಗೆ ಕುತೂಹಲ ಇರುವವರಿಗೆ ಹೇಳಿ ಮಾಡಿಸಿದಂಥ ವಿಷಯ.

ಕನ್ನಡ ನಾಡಿನ ಇತಿಹಾಸದಲ್ಲಿ ರಾಷ್ಟ್ರಕೂಟ ಸಾಮ್ರಾಜ್ಯದ ಗುರುತು ಅಚ್ಚಳಿಯದ್ದು. ಮಹಾರಾಷ್ಟ್ರದಲ್ಲಿರುವ ಅಜಂತಾ, ಎಲ್ಲೋರಾದ ಅದ್ಭುತ ಶಿಲ್ಪಗಳನ್ನು ರೂಪಿಸಿದವರು ರಾಷ್ಟ್ರಕೂಟರು. ಸುಮಾರು 250 ವರ್ಷಗಳ ಕಾಲ ಇಂದಿನ ಮಾಹಾರಾಷ್ಟ್ರದ ಬಹುಭಾಗವನ್ನೂ ಸೇರಿದ ಕನ್ನಡ ನಾಡನ್ನು ಆಳಿದ ರಾಷ್ಟ್ರಕೂಟರು ನಾಡಿನ ಕಲೆ, ಸಾಹಿತ್ಯ, ವಾಸ್ತುಶಿಲ್ಪಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯಕ್ರಮವೂ ಇದಾಗಿದೆ.
ರಾಷ್ಟ್ರಕೂಟರ ಕಾಲದಲ್ಲಿ ನಮ್ಮ ಸಮಾಜ ಹೇಗಿತ್ತು? ಅವರ ಸಾಧನೆಗಳೇನು? ಆಳ್ವಿಕೆ ಹೇಗಿತ್ತು? ಸಾವಿರ ವರ್ಷಗಳ ಹಿಂದಿನ ಕನ್ನಡ ನಾಡಿನ ಇತಿಹಾಸದ ಪ್ರಮುಖ ಘಟ್ಟವೊಂದನ್ನು ಪರಿಚಯಿಸುವ ಮಾತುಕತೆ ಇದು.
ಕಾರ್ಯಕ್ರಮವನ್ನು ನಾಡಿನ ಇತಿಹಾಸ ಅಧ್ಯಯನಕಾರ, ಯುವ ಕನ್ನಡಿಗ ಆದಿತ್ಯ ಕುಲಕರ್ಣಿಯವರು ನಡೆಸಿಕೊಡಲಿದ್ದಾರೆ. ರಾಷ್ಟ್ರಕೂಟರ ಬಗ್ಗೆ ಪಠ್ಯಗಳಲ್ಲಿ ಓದಿರುವುದನ್ನು ಬಿಟ್ಟು ವಿಶೇಷ ಮಾಹಿತಿಗಳು ಜನತೆಯಲ್ಲಿರುವುದಿಲ್ಲ. ಹಾಗಾಗಿ ಈ ವಿಶಿಷ್ಟ ಸಂವಾದದ ಪ್ರಯೋಜನವನ್ನು ಬಳಸಿಕೊಳ್ಳಬಹುದಾಗಿದೆ.
ವಿಷಯ : ನಮ್ಮ ರಾಷ್ಟ್ರಕೂಟರ ಇತಿಹಾಸ ನಿಮಗೆಷ್ಟು ಗೊತ್ತು?
ನಡೆಸಿಕೊಡುವವರು : ಇತಿಹಾಸಕಾರ ಆದಿತ್ಯ ಕುಲಕರ್ಣಿ
ಎಂದು? : 12 ನವೆಂಬರ್, ಭಾನುವಾರ
ಸಮಯ : ಬೆಳಿಗ್ಗೆ 11.30
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications