ಅಮಿತ್ ಶಾ ಕೇಳಿದಾಗ ನೋ, ಈಗ ಓಕೆ ಎಂದಿದ್ಯಾಕೆ ಡಿ.ಕೆ ಶಿವಕುಮಾರ್ ?!
Amul vs Nandini: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ನಂದಿನಿಯ ಬದಲಾಗಿ ಅಮೂಲ್ಗೆ ಅವಕಾಶ ನೀಡುತ್ತಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಆಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರಸ್ತಾವನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರು ಯಾಕೆ ಈಗ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಂದಿನಿ ಉಳಿಸಿ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ. ಈ ಹಿಂದೆ ಅನ್ಯ ರಾಜ್ಯದಿಂದ ಒತ್ತಡ ಹಾಗೂ ನಂದಿನಿ ಅಸ್ಮಿತೆ ಪ್ರಶ್ನೆ ಎಂದು ಹೇಳಲಾಗುತ್ತಿತ್ತು. ಈಗ ಕರ್ನಾಟಕವೇ ಅಮೂಲ್ ಹಾಗೂ ಅಮೂಲ್ ಉತ್ಪನ್ನವನ್ನು ಶಾರ್ಟ್ ಲಿಸ್ಟ್ ಮಾಡಿರುವುದೇಕೆ ಎನ್ನುವ ಪ್ರಶ್ನೆ ಎದುರಾಗಿದೆ.
ನಮ್ಮದೇ ಆದ ನಂದಿನಿಯನ್ನು ಪ್ರಚಾರ ಮಾಡುವ ಬದಲು ಬಿಎಂಆರ್ಸಿಎಲ್ ನಂದಿನಿಯನ್ನು ಬಿಟ್ಟು ಅಮುಲ್ ಹಾಗೂ ಅಮೂಲ್ ಉತ್ಪನ್ನವನ್ನು ಆಯ್ಕೆ ಮಾಡಿಕೊಂಡಿದ್ದು ಅಥವಾ ಶಾರ್ಟ್ ಲಿಸ್ಟ್ ಮಾಡಿದೆ. ಯಾರ ಆದೇಶ ಅಥವಾ ಒತ್ತಡದ ಮೇರೆಗೆ ನಂದಿನಿಯನ್ನು ಬಿಟ್ಟು ಅಮೂಲ್ಗೆ ಅನುಮತಿ ನೀಡಲಾಗಿದೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಅಮೂಲ್ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದರು. ಆದರೆ ಅಂದು ಡಿ.ಕೆ ಶಿವಕುಮಾರ್ ಅವರು ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಕರ್ನಾಟಕದಲ್ಲಿ ನಂದಿನಿಗಿಂತ ಅಮುಲ್ಗೆ ಆದ್ಯತೆ ನೀಡುವುದು ಗೃಹ ಸಚಿವರ ಒತ್ತಡ ತಂತ್ರ ಎಂದು ಅಂದು ಕಾಂಗ್ರೆಸ್ ನಾಯಕರು ಹೇಳಿದರು. ಆದರೆ ಇದೀಗ ಅವರದ್ದೇ ಆಡಳಿತದಲ್ಲಿ ಅವರು ಅಮುಲ್ ಉತ್ಪನ್ನಗಳನ್ನು ಮೆಟ್ರೋ ನಿಲ್ದಾಣಗಳಲ್ಲಿ ಮಾರಾಟ ಮಾಡಲು ಅನುಮತಿಸಿದ್ದಾರೆ. ಈ ಆಯ್ದ ಮರೆವು ಏಕೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
10 ನಿಲ್ದಾಣಗಳಲ್ಲಿ ಅಮೂಲ್: ಇನ್ನು ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣದ 10 ಕಡೆಗಳಲ್ಲಿ ಅಮೂಲ್ ಕಿಯೋಸ್ಕ್ / ಅಮೂಲ್ ಮಳಿಗೆಯನ್ನು ಪ್ರಾರಂಭಿಸುವುದಕ್ಕೆ ಅವಕಾಶ ನೀಡಲಾಗಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದಕ್ಕೆ ಮುಂಚೆ ಹಾಗೂ ಅಧಿಕಾರಕ್ಕೆ ಬಂದ ಮೇಲೆ ಒಂದು ರೀತಿ ನಡೆದುಕೊಳ್ಳುತ್ತಿದೆ ಎಂದು ಜನಸಾಮಾನ್ಯರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಬೆಂಗಳೂರಿನ ಪ್ರತಿಷ್ಠಿತ ಮೆಟ್ರೋ ನಿಲ್ದಾಣಗಳ ಮಳಿಗೆಗಳಲ್ಲೇ ಅಮೂಲ್ಗೆ ಮಣೆಯಾಕಲಾಗಿದೆ. ಕರ್ನಾಟಕದ ನಂದಿನಿ ಉತ್ಪನ್ನಗಳಿಗೆ ಇಲ್ಲಿ ಅವಕಾಶ ನೀಡಬಹುದಾಗಿತ್ತು. ಆದರೆ ಅಮೂಲ್ಗೆ ನೀಡುವ ಮೂಲಕ ಕರ್ನಾಟಕ ಕಾಂಗ್ರೆಸ್ ಪಕ್ಷವು ಇಬ್ಭಗೆಯ ನೀತಿಯನ್ನು ಅನುಸರಿಸಿದೆ ಎನ್ನುವ ಆರೋಪ ಕೇಳಿ ಬಂದಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications