ಸ್ಥಗಿತಗೊಂಡ 'ನಮ್ಮ ಮೆಟ್ರೋ' ಸೇವೆ ಯಾವಾಗ ಆರಂಭವಾಗುತ್ತೆ?
ಮುಂಬೈ, ಜುಲೈ 7: ನಮ್ಮ ಮೆಟ್ರೋ ಬಂದ್ ಕುರಿತಂತೆ ರಾಜಧಾನಿಯಲ್ಲೀಗ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಮೆಟ್ರೋವನ್ನೇ ನಂಬಿಕೊಂಡಿದ್ದ ಲಕ್ಷಾಂತರ ಜನರು ಇಂದು ಆಟೋ, ಕ್ಯಾಬು, ಬಸ್ಸು ಎನ್ನುತ್ತ ಪರದಾಡುತ್ತಿದ್ದಾರೆ.
ಈ ಮೆಟ್ರೋ ಸೇವೆ ಇವತ್ತೇ ಶುರುವಾಗುತ್ತಾ? ಶುರುವಾದರೂ ಎಷ್ಟು ಹೊತ್ತಿಗೆ ಆರಂಭವಾಗುತ್ತೆ? ಬೆಳಗ್ಗೆಯಂತೂ ಮೆಟ್ರೋ ಇಲ್ಲದೆ ಪರದಾಡಿದ್ದಾಯ್ತು. ಇಂದು ಸಂಜೆಯಾದರೂ ಈ ಪರದಾಟ ತಪ್ಪುತ್ತಾ ಎಂದು ಜನರು ಪರಿಪರಿಯಾಗಿ ಪ್ರಶ್ನಸುತ್ತಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುವುದಕ್ಕೆ ಬಿಎಂಆರ್ ಸಿಎಲ್ ನ ಸಾರ್ವಜನಿಕ ಸಂಪರ್ಕಾಧಿಕಾರಿ ಯು.ಎ.ವಸಂತ್ ವಸಂತ ರಾವ್ ಸಂಪರ್ಕಕ್ಕೆ ಸಿಗುತ್ತಿಲ್ಲ.
Train service temporally stopped - will tweet once the issues are resolved
— BMRCL (@cpronammametro) July 7, 2017
"ನಮ್ಮ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸೇವೆ ಆರಂಭವಾಗುತ್ತಿದ್ದಂತೆಯೇ ಟ್ವೀಟ್ ಮೂಲಕ ಮಾಹಿತಿ ನೀಡುತ್ತೇವೆ" ಎಂದು ಬಿಎಂಆರ್ ಸಿಎಲ್ ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. "ಸಮಸ್ಯೆ ಬಗೆಹರಿದಿದೆ, ಮೆಟ್ರೋ ಸೇವೆ ಮತ್ತೆ ಆರಂಭವಾಗುತ್ತಿದೆ" ಎಂದು ಮತ್ತೊಮ್ಮೆ ಬಿಎಂಆರ್ ಸಿಎಲ್ ನಲ್ಲಿ ಟ್ವೀಟ್ ಬರುವವರೆಗೂ ಪ್ರಯಾಣಿಕರು ಮೆಟ್ರೋವನ್ನು ನಂಬಿಕೊಳ್ಳುವಂತಿಲ್ಲ!.
ಯಾವುದೇ ಮುನ್ಸೂಚನೆಯನ್ನೇ ನೀಡದೆ ಮೆಟ್ರೋ ಬಂದ್ ಆಗಿರುವುದು, ಸ್ವತಃ ಬಿಎಂಆರ್ ಸಿಎಲ್ ನ ಎಷ್ಟೊ ಸಿಬ್ಬಂದಿಗಳಿಗೇ ಕಾರಣ ಗೊತ್ತಿಲ್ಲ! ಸರಿಯಾಗಿ ಮಾಹಿತಿಯನ್ನೂ ನೀಡಿಲ್ಲ. ಇದರಿಂದ ಸಾರ್ವಜನಿಕರ ಆಕ್ರೋಶ ಹೆಚ್ಚಿದ್ದು, ಕೂಡಲೇ ಮೆಟ್ರೋ ಸೇವೆ ಆರಂಭಿಸಿ ಎಂಬ ಧ್ವನಿ ಸಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications