ಯಾರೀತ ತೇಜ್ ರಾಜ್ ಶರ್ಮ, ಹತಾಶೆಗೊಂಡ ದೂರುದಾರ?
Recommended Video

ಬೆಂಗಳೂರು, ಮಾರ್ಚ್ 07 : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚೂರಿ ಇರಿದ ವ್ಯಕ್ತಿ ಯಾರು? ಮೆಟಲ್ ಡಿಟೇಕ್ಟರ್ ಇದ್ದರೂ ಚಾಕು ತೆಗೆದುಕೊಂಡು ಬಂದಿದ್ದು ಏಕೆ? ತೇಜ್ ರಾಜ್ ಶರ್ಮಾ ಎಂಬ ವ್ಯಕ್ತಿಯ ವೃತ್ತಿ ಏನು? ಲೋಕಾಯುಕ್ತ ಸಂಸ್ಥೆ ಮೇಲೆ ಹತಾಶೆಗೊಂಡಿದ್ದೇಕೆ? ಎಂಬ ವಿಚಾರಕ್ಕೆ ಉತ್ತರ ಇಲ್ಲಿದೆ.
ಒಂದಲ್ಲ, ಎರಡಲ್ಲ, ಮುರ್ನಾಲ್ಕು ಬಾರಿ ಇರಿತವಾಗಿರುವ ಮಾಹಿತಿ ಲಭ್ಯವಾಗಿದೆ. ವಿಶ್ವನಾಥ್ ಶೆಟ್ಟಿ ಅವರ ದೇಹದ ಸ್ಕ್ಯಾನಿಂಗ್ ಮುಗಿದಿದ್ದು, ಆಪರೇಷನ್ ಶುರುವಾಗಿದೆ. ಇತ್ತ ಆರೋಪಿ ತೇಜ್ ರಾಜ್ ಶರ್ಮನ ವಿಚಾರಣೆಯನ್ನು ಡಿಸಿಪಿ ಚಂದ್ರಗುಪ್ತ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಕೊಲೆ ಮಾಡಲು ಯತ್ನ ಮಾಡಿರುವುದು ಕಂಡು ಬಂದಿದೆ. ಅವನನ್ನು ಅರೆಸ್ಟ್ ಮಾಡಿದ್ದಾರೆ. ತನಿಖೆ ಮಾಡ್ತಾರೆ. ಪೊಲೀಸರಿಗೆ ತನಿಖೆ ಮಾಡುವಂತೆ ಸೂಚಿಸಿದ್ದೇನೆ. ಡಾಕ್ಟರ್ ಗಳ ಜತೆ ಮಾತನಾಡಿದೆ. ಮೇಲ್ನೋಟಕ್ಕೆ ತೊಂದರೆ ಇಲ್ಲ ಎಂದು ತಿಳಿದು ಬಂದಿದೆ. ಘಟನೆ ನಡೆದಾಗ ಗನ್ ಮ್ಯಾನ್ ಹೊರಗಡೆ ಇದ್ದರು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತನಿಖೆ ಎತ್ತ ಸಾಗಿದೆ? ತೇಜ್ ರಾಜ್ ಹಿನ್ನಲೆ ಏನು?

ಹತಾಶಗೊಂಡ ದೂರುದಾರ ತೇಜ್ ರಾಜ್
ವಿವಿಧ ಸರ್ಕಾರಿ ಕಚೇರಿಗಳ ಅಧಿಕಾರಿಗಳ ಅವ್ಯವಹಾರಗಳ ವಿರುದ್ಧ ಸುಮಾರು 18 ಕೇಸುಗಳನ್ನು ಹಾಕಿದ್ದ. ಇಂದು ಲೋಕಾಯುಕ್ತ ಕೋರ್ಟಿನಲ್ಲಿ ಒಂದು ಕೇಸಿನ ವಿಚಾರಣೆಗಾಗಿ ಬಂದಿದ್ದ. ಮಧ್ಯಾಹ್ನದ ವೇಳೆಗೆ ಸಂದರ್ಶಕರ ಪುಸ್ತಕದಲ್ಲಿ ನೋಂದಾಯಿಸಿದ್ದರು. ನಂತರ ಎ.ಆರ್ ಇ. ಲಕ್ಷ್ಮಿ ಅವರನ್ನು ಭೇಟಿ ಮಾಡಿದ್ದಾರೆ. ಅದರೆ, ಅವರ ಉತ್ತರದಿಂದ ತೃಪ್ತಿಯಾಗದೆ, ಏಕಾಏಕಿ ನ್ಯಾ. ವಿಶ್ವನಾಥ್ ಶೆಟ್ಟಿ ಅವರ ಕಚೇರಿಗೆ ನುಗ್ಗಿದ್ದಾನೆ.

ನಗುತ್ತಲೇ ಉತ್ತರ ನೀಡಿದ ನ್ಯಾಯಮೂರ್ತಿ
ಬಹಮಹಡಿ ಕಟ್ಟಡ(ಎಂಎಸ್ ಕಟ್ಟಡ)ದ ಮೊದಲ ಮಹಡಿಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿದ್ದ ನ್ಯಾ. ವಿಶ್ವನಾಥ್ ಶೆಟ್ಟಿ ಅವರು ಊಟದ ಮಾಡಲು ಮುಂದಾಗಿದ್ದ ಸಮಯದಲ್ಲಿ ತೇಜ್ ರಾಜ್ ಶರ್ಮ ಒಳ ನುಗಿದ್ದಾನೆ. ಆತ ಕೇಳಿದ್ದ ಪ್ರಶ್ನೆಗಳಿಗೆ ನಗುತ್ತಲೇ ಉತ್ತರಿಸಿದ್ದಾರೆ. ಮಾತಿನ ನಡುವೆ ಸಿಟ್ಟಿಗೆದ್ದ ತೇಜ್ ರಾಜ್, ಚಾಕುವಿನಿಂದ ಇರಿದು, ಹೊರಬಂದಿದ್ದಾನೆ. ಇದಾದ ಮೇಲೆ ಚಾಕು ಇರಿತದ ಬಗ್ಗೆ ತಿಳಿದು ಬಂದಿದೆ.

ಯಾರೀತ ತೇಜ್ ರಾಜ್ ಶರ್ಮಾ
ರಾಜಸ್ಥಾನ ಮೂಲದವನಾದ ತೇಜ್ ರಾಜ್ ಶರ್ಮ ಮೂಲತಃ ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿ. ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ. ಪೀಠೋಪಕರಣದ ಮಳಿಗೆ ಹೊಂದಿದ್ದಾನೆ. ಸರ್ಕಾರಿ ಕಚೇರಿಗಳಿಗೆ ಕಚೇರಿಗಳಿಗೆ ಪೀಠೋಪಕರಣ ಒದಗಿಸುತ್ತಿದ್ದ. ಸರ್ಕಾರಿ ಅಧಿಕಾರಿಗಳ ವಿರುದ್ಧ ದೂರು ನೀಡುವುದು ಈತನ ಕಾಯಕವಾಗಿತ್ತು. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಾ ಬಂದಿದ್ದ.

ವಾಸಂತಿ ಉಪ್ಪರ್ ಅವರ ವಿರುದ್ಧ ಕೇಸ್
ತುಮಕೂರಿನ ಅಧಿಕಾರಿ ವಾಸಂತಿ ಉಪ್ಪರ್ ಅವರ ವಿರುದ್ಧ ಕೇಸ್ ದಾಖಲಿಸಿದ್ದ, ಬಾಲಕಿಯರ ಬಾಲಮಂದಿರಕ್ಕೆ ಮಂಚ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ತುಮಕೂರಿನ ಲೋಕಾಯುಕ್ತ ಕೋರ್ಟಿನಲ್ಲಿ ಅರ್ಜಿ ಹಾಕಿದ್ದ. ಆದರೆ, ಅರ್ಜಿ ವಜಾಗೊಂಡಿತ್ತು.
ಇದೇ ರೀತಿ ಸುಮಾರು 18 ಕೇಸುಗಳನ್ನು ಹಾಕಿದ್ದಾನೆ. ವಿಚಾರಣೆಗೆ ಹಾಜರಾಗುತ್ತಾನೆ. ಆದರೆ, ಸರಿಯಾದ ಸಾಕ್ಷ್ಯ, ಆಧಾರ ಒದಗಿಸುವುದರಲ್ಲಿ ವಿಫಲನಾಗುತ್ತಾನೆ. ಹೀಗಾಗಿ, ಕೇಸು ಖುಲಾಸೆಯಾಗುತ್ತದೆ.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications