ಬೆಂಗಳೂರು ಉಪಮೇಯರ್ ಯಾರಾಗ್ತಾರೆ? ಚುನಾವಣೆಗೆ ಕ್ಷಣಗಣನೆ
ಬೆಂಗಳೂರು, ಡಿಸೆಂಬರ್ 5: ಬಿಬಿಎಂಪಿ ಉಪಮೇಯರ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಮುಂದಿನ ಉಪ ಮೇಯರ್ ಯಾರಾಗ್ತಾರೆ ಎನ್ನುವ ಕುತೂಹಲ ಕೂಡ ಎಲ್ಲರಲ್ಲಿ ಆರಂಭವಾಗಿದೆ. ಕೇವಲ ಉಪ ಮೇಯರ್ ಚುನಾವಣೆ ಮಾತ್ರವಲ್ಲದೆ ಸ್ಥಾಯಿ ಸಮಿತಿ ಚುನಾವಣೆ ಕೂಡ ನಡೆಯಲಿದೆ.
ಅವಧಿ ಮುಗಿದು ಒಂದೂವರೆ ತಿಂಗಳು ತಡವಾಗಿ ಬಿಬಿಎಂಪಿ 12 ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಪ್ರತಿ ಸ್ಥಾಯಿ ಸಮಿತಿಗೆ 12 ಸದಸ್ಯರಂತೆ ಒಟ್ಟು 132 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗುತ್ತದೆ.
ಪ್ರತಿ ಸದಸ್ಯರ ಆಯ್ಕೆಯನ್ನು ಕೈ ಎತ್ತುವ ಮೂಲಕ ನಡೆಸಲಾಗುತ್ತದೆ. ನಿಗದಿತ ಪ್ರಮಾಣದಲ್ಲಿ ನಾಮಪತ್ರ ಸಲ್ಲಿಕೆಯಾದರೆ ಅವಿರೋಧ ಆಯ್ಕೆ ಎಂದು ಘೋಷಿಸಲಾಗುತ್ತದೆ. ಬಿಬಿಎಂಪಿಯಲ್ಲಿ ನಾಲ್ಕನೇ ಅವಧಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರ ಹಿಡಿಯಲು ಸಹಕರಿಸಿದ 6 ಪಕ್ಷೇತರರಲ್ಲಿ ಮೂವರಿಗೆ ಅಧ್ಯಕ್ಷ ಸ್ಥಾನ ನೀಡಲಾಗುತ್ತದೆ. ಚಂದ್ರಪ್ಪರೆಡ್ಡಿ, ಲಕ್ಷ್ಮೀನಾರಾಯಣ್ ಮತ್ತು ಮುಜಾಹಿದ್ ಪಾಷಾಗೆ ಅಧ್ಯಕ್ಷ ಸ್ಥಾನ ದೊರೆಯಲಿದೆ.

ಬಿಬಿಎಂಪಿ ಉಪಮೇಯರ್ ರಮೀಳಾ ಶಂಕರ್ ನಿಧನದಿಂದ ತೆರವಾಗಿದ್ದ ಬಿಬಿಎಂಪಿ ಉಪ ಮೇಯರ್ ಹುದ್ದೆಗೆ ಜೆಡಿಎಸ್ನ ಭದ್ರೇಗೌಡ ಹಾಗೂ ಇಮ್ರಾನ್ ಪಾಷಾ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ.
ಬುಧವಾರ ಮಧ್ಯಾಹ್ನ 1 ಗಂಟೆಗೆ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನಡುವೆ ಮೇಯರ್ ಹಾಗೂ ಉಪಮೇಯರ್ ಪಟ್ಟ ಹಂಚಿಕೆಯಾಗಿರುವುದರಿಂದ ಉಪ ಮೇಯರ್ ಹುದ್ದೆ ಜೆಡಿಎಸ್ ಪಾಲಾಗಿದೆ.
ಕಳೆದ ಸೆಪ್ಟೆಂಬರ್ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಗಂಗಾಂಬಿಕೆ ಮಲ್ಲಿಕಾರ್ಜು ಹಾಗೂ ಉಪ ಮೇಯರ್ ಆಗಿ ರಮೀಳಾ ಉಮಾಶಂಕರ್ ಆಯ್ಕೆಯಾಗಿದ್ದರು. ಆದರೆ ಉಪ ಮೇಯರ್ ಆಗಿ ಆಯ್ಕೆಯಾದ ಆರೇ ದಿನಗಳಲ್ಲಿ ರಮೀಳಾ ನಿಧನ ಹೊಂದಿದ್ದರು. ಹೀಗಾಗಿ ಉಪಮೇಯರ್ ಸ್ಥಾನ ತೆರವಾಗಿದ್ದು, ಬುಧವಾರ ಹೊಸ ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಈಗಾಗಲೇ ಶನಿವಾರ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಪಕ್ಷದ ವರಿಷ್ಠರು ಸಭೆ ನಡೆಸಿದ್ದು, ಇಮ್ರಾನ್ ಪಾಷಾ ಹಾಗೂ ಭದ್ರೇಗೌಡ ಇಬ್ಬರು ಆಕಾಂಕ್ಷಿಗಳಾಗಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications