ಬೆಂಗಳೂರು ಉಪಮೇಯರ್ ಯಾರಾಗ್ತಾರೆ? ಚುನಾವಣೆಗೆ ಕ್ಷಣಗಣನೆ
ಬೆಂಗಳೂರು, ಡಿಸೆಂಬರ್ 5: ಬಿಬಿಎಂಪಿ ಉಪಮೇಯರ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಮುಂದಿನ ಉಪ ಮೇಯರ್ ಯಾರಾಗ್ತಾರೆ ಎನ್ನುವ ಕುತೂಹಲ ಕೂಡ ಎಲ್ಲರಲ್ಲಿ ಆರಂಭವಾಗಿದೆ. ಕೇವಲ ಉಪ ಮೇಯರ್ ಚುನಾವಣೆ ಮಾತ್ರವಲ್ಲದೆ ಸ್ಥಾಯಿ ಸಮಿತಿ ಚುನಾವಣೆ ಕೂಡ ನಡೆಯಲಿದೆ.
ಅವಧಿ ಮುಗಿದು ಒಂದೂವರೆ ತಿಂಗಳು ತಡವಾಗಿ ಬಿಬಿಎಂಪಿ 12 ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಪ್ರತಿ ಸ್ಥಾಯಿ ಸಮಿತಿಗೆ 12 ಸದಸ್ಯರಂತೆ ಒಟ್ಟು 132 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗುತ್ತದೆ.
ಪ್ರತಿ ಸದಸ್ಯರ ಆಯ್ಕೆಯನ್ನು ಕೈ ಎತ್ತುವ ಮೂಲಕ ನಡೆಸಲಾಗುತ್ತದೆ. ನಿಗದಿತ ಪ್ರಮಾಣದಲ್ಲಿ ನಾಮಪತ್ರ ಸಲ್ಲಿಕೆಯಾದರೆ ಅವಿರೋಧ ಆಯ್ಕೆ ಎಂದು ಘೋಷಿಸಲಾಗುತ್ತದೆ. ಬಿಬಿಎಂಪಿಯಲ್ಲಿ ನಾಲ್ಕನೇ ಅವಧಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರ ಹಿಡಿಯಲು ಸಹಕರಿಸಿದ 6 ಪಕ್ಷೇತರರಲ್ಲಿ ಮೂವರಿಗೆ ಅಧ್ಯಕ್ಷ ಸ್ಥಾನ ನೀಡಲಾಗುತ್ತದೆ. ಚಂದ್ರಪ್ಪರೆಡ್ಡಿ, ಲಕ್ಷ್ಮೀನಾರಾಯಣ್ ಮತ್ತು ಮುಜಾಹಿದ್ ಪಾಷಾಗೆ ಅಧ್ಯಕ್ಷ ಸ್ಥಾನ ದೊರೆಯಲಿದೆ.

ಬಿಬಿಎಂಪಿ ಉಪಮೇಯರ್ ರಮೀಳಾ ಶಂಕರ್ ನಿಧನದಿಂದ ತೆರವಾಗಿದ್ದ ಬಿಬಿಎಂಪಿ ಉಪ ಮೇಯರ್ ಹುದ್ದೆಗೆ ಜೆಡಿಎಸ್ನ ಭದ್ರೇಗೌಡ ಹಾಗೂ ಇಮ್ರಾನ್ ಪಾಷಾ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ.
ಬುಧವಾರ ಮಧ್ಯಾಹ್ನ 1 ಗಂಟೆಗೆ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನಡುವೆ ಮೇಯರ್ ಹಾಗೂ ಉಪಮೇಯರ್ ಪಟ್ಟ ಹಂಚಿಕೆಯಾಗಿರುವುದರಿಂದ ಉಪ ಮೇಯರ್ ಹುದ್ದೆ ಜೆಡಿಎಸ್ ಪಾಲಾಗಿದೆ.
ಕಳೆದ ಸೆಪ್ಟೆಂಬರ್ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಗಂಗಾಂಬಿಕೆ ಮಲ್ಲಿಕಾರ್ಜು ಹಾಗೂ ಉಪ ಮೇಯರ್ ಆಗಿ ರಮೀಳಾ ಉಮಾಶಂಕರ್ ಆಯ್ಕೆಯಾಗಿದ್ದರು. ಆದರೆ ಉಪ ಮೇಯರ್ ಆಗಿ ಆಯ್ಕೆಯಾದ ಆರೇ ದಿನಗಳಲ್ಲಿ ರಮೀಳಾ ನಿಧನ ಹೊಂದಿದ್ದರು. ಹೀಗಾಗಿ ಉಪಮೇಯರ್ ಸ್ಥಾನ ತೆರವಾಗಿದ್ದು, ಬುಧವಾರ ಹೊಸ ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಈಗಾಗಲೇ ಶನಿವಾರ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಪಕ್ಷದ ವರಿಷ್ಠರು ಸಭೆ ನಡೆಸಿದ್ದು, ಇಮ್ರಾನ್ ಪಾಷಾ ಹಾಗೂ ಭದ್ರೇಗೌಡ ಇಬ್ಬರು ಆಕಾಂಕ್ಷಿಗಳಾಗಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications