ಕಾಂಗ್ರೆಸ್ಸಿನಿಂದ ಮೇಯರ್ ಗೌನ್ ಯಾರ ಹೆಗಲಿಗೆ?
ಬೆಂಗಳೂರು, ಸೆ. 10: ರೆಸಾರ್ಟ್ ವಾಸ್ತವ್ಯ ಮುಗಿಸಿಕೊಂಡು ಬಿಬಿಎಂಪಿ ಸದಸ್ಯರು ಬೆಂಗಳೂರಿಗೆ ಆಗಮಿಸಿದ್ದಾರೆ. ಭಾರೀ ಕುತೂಹಲ ಕೆರಳಿಸಿರುವ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಶುಕ್ರವಾರ ಚುನಾವಣೆ ನಡೆಯಲಿದೆ. ಈ ನಡುವೆ ಮೇಯರ್ ರೇಸಿನಲ್ಲಿ ಯಾರು ಯಾರು ಇದ್ದಾರೆ ಮುಂದೆ ಓದಿ...
ಯಾರಿಗೆ ಮೇಯರ್ ಗದ್ದುಗೆ? ಯಾರಿಗೆ ಉಪ ಮೇಯರ್ ಗೌನ್ ಎಂಬ ಪ್ರಶ್ನೆಗೆ ಗುರುವಾರ ಮಧ್ಯಾಹ್ನದ ವೇಳೆಗೆ ಉತ್ತರ ದೊರೆಯಲಿದೆ. ಮೈತ್ರಿಕೂಟದ ಬಣದ ಸದಸ್ಯ ಬಲ 132 ಮತ್ತು ಬಿಜೆಪಿಯ ಬಲ 128. ಬಿಬಿಎಂಪಿ ಮೇಯರ್ ಗದ್ದುಗೆ ಏರಲು ಮ್ಯಾಜಿಕ್ ನಂಬರ್ 131 ಬೇಕಾಗಿದೆ.[ಮೇಯರ್ ಎಲೆಕ್ಷನ್ ಹೇಗೆ ನಡೆಯುತ್ತೆ?]
ಮೇಯರ್ ಪಟ್ಟಕ್ಕೆ ಕಾಂಗ್ರೆಸ್ನಿಂದ ಬಿ.ಎನ್. ಮಂಜುನಾಥ್ ರೆಡ್ಡಿ, ಆರ್.ಎಸ್. ಸತ್ಯನಾರಾಯಣ ಅವರ ಹೆಸರು ಕೇಳಿಬರುತ್ತಿದೆ. ಬಿಜೆಪಿ ಪರವಾಗಿ ಪದ್ಮನಾಭ ರೆಡ್ಡಿ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಜೆಡಿಎಸ್ ಪರವಾಗಿ ಜೆಡಿಎಸ್ ಶಾಸಕ ಗೋಪಾಲಯ್ಯ ಪತ್ನಿ ಹೇಮಾವತಿ ಅವರು ಉಪ ಮೇಯರ್ ಅಭ್ಯರ್ಥಿಯಾಗಲಿದ್ದಾರೆ.[ಮೇಯರ್ ಆಯ್ಕೆಗೆ ಮತ ಹಾಕುವವರು ಯಾರು?]
ಒಟ್ಟು 260 ಜನ ಸದಸ್ಯರು ಮೇಯರ್, ಉಪಮೇಯರ್ ಆಯ್ಕೆ ಮಾಡಲಿದ್ದಾರೆ. ಬಳಿಕ 12 ಸ್ಥಾಯಿ ಸಮಿತಿಗಳ 11 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. [ಬಿಜೆಪಿಯಿಂದ ರೇಸಿನಲ್ಲಿರುವವರು?]
ಬಿಬಿಎಂಪಿಯನ್ನು ವಿಸರ್ಜನೆ ಮಾಡಿದ ಬಳಿಕ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಟಿ.ಎಂ. ವಿಜಯ ಭಾಸ್ಕರ ಅವರ ಅಧಿಕಾರ ಅವಧಿ ಮುಕ್ತಾಯಗೊಂಡಿದೆ. [ಬಿಜೆಪಿಯಿಂದ ಮಹಿಳಾ ಉಪಮೇಯರ್ ಆಕಾಂಕ್ಷಿಗಳು]

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು
* ಬಿ.ಎನ್ ಮಂಜುನಾಥ್ ರೆಡ್ಡಿ (ಮಡಿವಾಳ ವಾರ್ಡ್) ಈ ಹಿಂದಿನ ಅವಧಿಯಲ್ಲಿ ಕೌನ್ಸಿಲ್ ನಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು.1991ರಿಂದ ಬಿಬಿಎಂಪಿ ಅಂಗಳದಲ್ಲಿ ಓಡಾಡಿಕೊಂಡಿದ್ದಾರೆ. ಅಭ್ಯರ್ಥಿಗಳ ಅಂತಿಮ ಪಟ್ಟಿ ಬಗ್ಗೆ ನಿರ್ಧಾರ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಭೆಯಲ್ಲಿ ನಿರ್ಣಯವಾಗಲಿದೆ.
* ಆರ್. ಎಸ್ ಸತ್ಯನಾರಾಯಣ ( ದತ್ತಾತ್ರೇಯ ದೇವಸ್ಥಾನ)
* ಎಸ್ ಉದಯ ಕುಮಾರ್ (ಹಗದೂರು)
* ಎಂ.ಕೆ ಗುಣ ಶೇಖರ್ (ಜಯಮಹಲ್)

ಬಿಜೆಪಿಯಿಂದ ಮೇಯರ್ ಅಭ್ಯರ್ಥಿಗಳು
* ಪದ್ಮನಾಭರೆಡ್ಡಿ (ಕಾಚರಕನಹಳ್ಳಿ)
* ಎಲ್ ಶ್ರೀನಿವಾಸ್ (ಕುಮಾರಸ್ವಾಮಿ ಲೇಔಟ್)
* ಎನ್ ನಾಗಾರಾಜ್ (ಭೈರಸಂದ್ರ)
* ಮಂಜುನಾಥ್ ರಾಜು (ಕಾಡು ಮಲ್ಲೇಶ್ವರ)

ಉಪಮೇಯರ್ ಸ್ಥಾನಕ್ಕೆ
ಉಪಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದೆ. ಈ ಬಾರಿ ಹೊಸದಾಗಿ ಆಯ್ಕೆಯಾದವರು ಉಪ ಮೇಯರ್ ಸ್ಥಾನ ಅಲಂಕರಿಸಲಿದ್ದಾರೆ.
* ಜೆಡಿಎಸ್ : ಹೇಮಲತಾ ಗೋಪಾಲಯ್ಯ (ವೃಷಭಾವತಿನಗರ)
* ಬಿಜೆಪಿ : ಎಚ್. ಸಿ ನಾಗರತ್ನ (ಪಟ್ಟಾಭಿರಾಮನಗರ)

ಲೆಕ್ಕಾಚಾರ ಉಲ್ಟಾ ಪಲ್ಟಾವಾದರೂ ಅಚ್ಚರಿ ಏನಿಲ್ಲ
ಮೇಲ್ನೋಟಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಮೇಯರ್ ಹಾಗೂ ಉಪಮೇಯರ್ ಪಟ್ಟ ಲಭಿಸುವ ಸಾಧ್ಯತೆ ನಿಚ್ಚಳವಾಗಿದ್ದರೂ ಬಿಜೆಪಿ ಏನಾದರೂ ಪ್ರತಿತಂತ್ರ ಹೆಣೆದು ಹಲವು ಸದಸ್ಯರು ಮತ ಹಾಕದೆ ತಟಸ್ಥವಾಗಿ ಉಳಿದರೆ ಅಥವಾ ನಾಳೆ ಚುನಾವಣೆಗೆ ಗೈರು ಹಾಜರಾದರೆ ಎಲ್ಲಾ ಉಲ್ಟಾ ಪಲ್ಟಾವಾಗಲಿದೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications