ಚಿದಂಬರ ರಹಸ್ಯ ಬೇಧಿಸುವರ್ಯಾರು? ಚಿದಂಬರಂ ಎಲ್ಲಿದ್ದೀರಪ್ಪಾ?: ಮಾಳವಿಕಾ ಪ್ರಶ್ನೆ
Recommended Video
ಬೆಂಗಳೂರು, ಆಗಸ್ಟ್ 21: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಬಂಧನ ಭೀತಿಯಿಂದ ಕಾಣೆಯಾಗಿದ್ದಾರೆ. ಈ ಕುರಿತು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಟ್ವೀಟ್ ಮಾಡಿದ್ದಾರೆ.
ಚಿದಂಬರ ರಹಸ್ಯವನ್ನು ಬೇಧಿಸುವವರಾರು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಕೇಳಿದಂತೆ ಹ್ಯಾಶ್ ಟ್ಯಾಗ್ ಹಾಕಿ 'ಚಿದಂಬರಂ ಎಲ್ಲಿದ್ದೀರಪ್ಪ' ಎಂದು ಪ್ರಶ್ನಿಸಿದ್ದಾರೆ.
ಈ ಚಿದಂಬರಂ ಎಲ್ಲಿದ್ದಿಯಪ್ಪಾ ಎನ್ನುವ ರೀತಿಯಲ್ಲೇ ನಿಖಿಲ್ ಎಲ್ಲಿದ್ದಿಯಪ್ಪಾ ಎನ್ನುವ ಘೋಷಣೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಷ್ ವಿರುದ್ಧ ಸ್ಪರ್ಧಿಸಿದ್ದರು.

ಆಗ ಕುಮಾರಸ್ವಾಮಿ ಅಥವಾ ನಿಖಿಲ್ ಅವರ ಪ್ರತಿ ವಿಷಯಕ್ಕೂ ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದರು.
ಮಂಗಳವಾರದಿಂದಲೂ ಸಹ ಚಿದಂಬರಂ ಅವರು ತಮ್ಮ ಮನೆಗೆ ಆಗಮಿಸಿಲ್ಲ. ಹೀಗಾಗಿ ಇಡಿ ಹಾಗೂ ಸಿಬಿಐ ಅದಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಚಿದಂಬರಂ ಕಾಣೆಯಾಗಿದ್ದನ್ನು ಸಹ ಇದೀಗ ಅದೇ ಧಾಟಿಯಲ್ಲಿ ಟ್ರೋಲ್ ಮಾಡಲಾಗುತ್ತಿದೆ.
ನೋಟಿಸಿನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಿದ್ದೀರಿ. 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಕಾನೂನಿನ ಯಾವ ನಿಬಂಧನೆ ಅಡಿ ಇದೆ ಎಂದು ಪ್ರಶ್ನೆ ಮಾಡಿದ್ದರು.
ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಸಹ ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಸಿಬಿಐ ಅಧಿಕಾರಿಗಳು ಮಂಗಳವಾರ ಮಧ್ಯ ರಾತ್ರಿಯೇ ನೋಟಿಸ್ ನೀಡಿದ್ದು, ಇದೀಗ ಜಾರಿ ನಿರ್ದೇಶನಾಲಯ ಲುಕೌಟ್ ನೋಟಿಸ್ ಜಾರಿ ಮಾಡಿದೆ. ಮಾತ್ರವಲ್ಲದೆ ಸಿಬಿಐ ಅಧಿಕಾರಿಗಳು ಸಹ ಚಿದಂಬರಂ ಅವರ ಮನೆಗೆ ಮೂರು ಬಾರಿ ಭೇಟಿ ನೀಡಿದ್ದಾರೆ. ಆದರೆ ಚಿದಂಬರಂ ಅವರು ಮನೆಯಲ್ಲಿರಲಿಲ್ಲ, ಎಲ್ಲಿ ಹೋಗಿದ್ದಾರೆ ಎಂಬುದು ತಿಳಿದಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications