ಚಿದಂಬರ ರಹಸ್ಯ ಬೇಧಿಸುವರ್ಯಾರು? ಚಿದಂಬರಂ ಎಲ್ಲಿದ್ದೀರಪ್ಪಾ?: ಮಾಳವಿಕಾ ಪ್ರಶ್ನೆ
Recommended Video
ಬೆಂಗಳೂರು, ಆಗಸ್ಟ್ 21: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಬಂಧನ ಭೀತಿಯಿಂದ ಕಾಣೆಯಾಗಿದ್ದಾರೆ. ಈ ಕುರಿತು ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಟ್ವೀಟ್ ಮಾಡಿದ್ದಾರೆ.
ಚಿದಂಬರ ರಹಸ್ಯವನ್ನು ಬೇಧಿಸುವವರಾರು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಕೇಳಿದಂತೆ ಹ್ಯಾಶ್ ಟ್ಯಾಗ್ ಹಾಕಿ 'ಚಿದಂಬರಂ ಎಲ್ಲಿದ್ದೀರಪ್ಪ' ಎಂದು ಪ್ರಶ್ನಿಸಿದ್ದಾರೆ.
ಈ ಚಿದಂಬರಂ ಎಲ್ಲಿದ್ದಿಯಪ್ಪಾ ಎನ್ನುವ ರೀತಿಯಲ್ಲೇ ನಿಖಿಲ್ ಎಲ್ಲಿದ್ದಿಯಪ್ಪಾ ಎನ್ನುವ ಘೋಷಣೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಷ್ ವಿರುದ್ಧ ಸ್ಪರ್ಧಿಸಿದ್ದರು.

ಆಗ ಕುಮಾರಸ್ವಾಮಿ ಅಥವಾ ನಿಖಿಲ್ ಅವರ ಪ್ರತಿ ವಿಷಯಕ್ಕೂ ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದರು.
ಮಂಗಳವಾರದಿಂದಲೂ ಸಹ ಚಿದಂಬರಂ ಅವರು ತಮ್ಮ ಮನೆಗೆ ಆಗಮಿಸಿಲ್ಲ. ಹೀಗಾಗಿ ಇಡಿ ಹಾಗೂ ಸಿಬಿಐ ಅದಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಚಿದಂಬರಂ ಕಾಣೆಯಾಗಿದ್ದನ್ನು ಸಹ ಇದೀಗ ಅದೇ ಧಾಟಿಯಲ್ಲಿ ಟ್ರೋಲ್ ಮಾಡಲಾಗುತ್ತಿದೆ.
ನೋಟಿಸಿನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಿದ್ದೀರಿ. 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಕಾನೂನಿನ ಯಾವ ನಿಬಂಧನೆ ಅಡಿ ಇದೆ ಎಂದು ಪ್ರಶ್ನೆ ಮಾಡಿದ್ದರು.
ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಸಹ ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಸಿಬಿಐ ಅಧಿಕಾರಿಗಳು ಮಂಗಳವಾರ ಮಧ್ಯ ರಾತ್ರಿಯೇ ನೋಟಿಸ್ ನೀಡಿದ್ದು, ಇದೀಗ ಜಾರಿ ನಿರ್ದೇಶನಾಲಯ ಲುಕೌಟ್ ನೋಟಿಸ್ ಜಾರಿ ಮಾಡಿದೆ. ಮಾತ್ರವಲ್ಲದೆ ಸಿಬಿಐ ಅಧಿಕಾರಿಗಳು ಸಹ ಚಿದಂಬರಂ ಅವರ ಮನೆಗೆ ಮೂರು ಬಾರಿ ಭೇಟಿ ನೀಡಿದ್ದಾರೆ. ಆದರೆ ಚಿದಂಬರಂ ಅವರು ಮನೆಯಲ್ಲಿರಲಿಲ್ಲ, ಎಲ್ಲಿ ಹೋಗಿದ್ದಾರೆ ಎಂಬುದು ತಿಳಿದಿಲ್ಲ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications