ನಮ್ಮ ಮೆಟ್ರೋ ಮೇಲೆ ಹಿಂದಿ ಹೇರಿಕೆ ಏಕೆ?
ಬೆಂಗಳೂರಿನ ಮೆಟ್ರೋದಲ್ಲಿ ಹಿಂದಿ ಹೇರಿಕೆ ಯಾಕೆ ಮಾಡುತ್ತಿದ್ದೀರಾ? ಯಾವ ಆಧಾರದ ಮೇಲೆ ಭಾಷಾ ನೀತಿ ನಿರ್ಧರಿಸಿದ್ದೀರಾ ಅಂತ ಮೆಟ್ರೋಗೆ ನಮ್ಮ ಗೆಳೆಯರು ಆರ್.ಟಿ.ಐ ಹಾಕಿದಾಗ, ಉತ್ತರ ಕೊಡಲು 6 ತಿಂಗಳಿಗೂ ಹೆಚ್ಚು ಕಾಲ ಸತಾಯಿಸಿದ ಮೇಲೆ ಮೊದಲು ಕೇಂದ್ರ ಸರ್ಕಾರ ರಸ್ತೆ ನಿಯಮಗಳ ಅನ್ವಯ ಹಿಂದಿ ಹಾಕಿದೀವಿ ಅಂದ್ರು.
ಆದ್ರೆ ನಗರದೊಳಗಿನ ಮೆಟ್ರೋಗೆ ಈ ನಿಯಮ ಅನ್ವಯ ಆಗಲ್ವಲ್ಲ ಅಂದಾಗ ಕೆಲ ದಿನದಲ್ಲಿ ಇಲ್ಲ, ರಾಜ್ಯ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಪ್ರಕಾರ ಹಿಂದಿ ಹಾಕಿದೀವಿ ಅಂದ್ರು. ಹೌದಾ, ಎಲ್ಲಿ ಯಾವ ಗೆಜೆಟ್ ನೋಟಿಫಿಕೇಶನ್ ಸ್ವಲ್ಪ ಕೊಡಿ ಅಂದಾಗ ಮತ್ತೆ ಉತ್ತರ ಬದಲಾಯಿಸಿ, ಇಲ್ಲ ಇದು ಮೆಟ್ರೋದ ಬೋರ್ಡಿನ ನಿರ್ಧಾರ ಅಂದ್ರು.
ಮೆಟ್ರೋ ಬೋರ್ಡಿನ ನಿರ್ಧಾರಗಳ ವಿವರ ಆರ್.ಟಿ.ಐ ವ್ಯಾಪ್ತಿಗೆ ಬರಲ್ಲ ಅಂತ ಗೊತ್ತಾದ ಮೇಲೆ ಆ ಉತ್ತರ ಕೊಟ್ಟಿದ್ದು. ರಾಜ್ಯ ಸರ್ಕಾರದ ಸಾರಿಗೆ ವ್ಯವಸ್ಥೆಯೊಂದು ರಾಜ್ಯ ಸರ್ಕಾರದ ಭಾಶಾ ನೀತಿ ಬಳಸದೇ ತನ್ನ ಮನಸಿಗೆ ಬಂದ ಭಾಷಾ ನೀತಿ ಜಾರಿಗೆ ತಂದಿದ್ದು ಹೀಗೆ. ಪ್ರಯಾಣಿಕರ ಅನುಕೂಲಕ್ಕೆ ಹಿಂದಿ ಹಾಕಿದೀವಿ ಅಂತಲೂ ಅಂದ್ರು. ಆದರೆ ಬೆಂಗಳೂರಿನಲ್ಲಿ ಕನ್ನಡಿಗರ ನಂತರ ಹೆಚ್ಚಿನ ಸಂಖ್ಯಯಲ್ಲಿರುವುದು ತಮಿಳು, ತೆಲುಗು, ಉರ್ದು ಭಾಷಿಕರು. ಆ ನುಡಿಯಲ್ಲಿ ಹಾಕದೇ ಹಿಂದಿ ಹಾಕಿದ್ದು ಹೇರಿಕೆಯಲ್ಲದೇ ಇನ್ನೇನು? ಚೆನ್ನೈ, ಕೊಲ್ಕತಾ, ದೆಹಲಿ ಎಲ್ಲ ಕಡೆ ಮೆಟ್ರೊದಲ್ಲಿ ಎರಡು ಭಾಷೆಯ ನೀತಿ ಇರುವಾಗ ಇಲ್ಲಿ ಮಾತ್ರ ಮೂರು ಸೇರಿಸುವುದು ಹೇರಿಕೆಯಲ್ಲದೇ ಇನ್ನೇನು?

ಯಾವುದೇ ಊರಿನ ಸಾರಿಗೆ ವ್ಯವಸ್ಥೆ ಒಂದು ರೀತಿಯಲ್ಲಿ ಆ ಊರಿನ ಮುಖವಾಣಿಯಂತೆ ಇರುತ್ತೆ. ಅಲ್ಲಿಗೆ ಬರುವ ಪ್ರಯಾಣಿಕನಿಗೆ, ಪ್ರವಾಸಿಗನಿಗೆ ಆ ಊರು, ಅಲ್ಲಿನ ಜನರ ಭಾಷೆ, ಅಲ್ಲಿನ ಜನ ಜೀವನ ಎಲ್ಲವನ್ನು ಒಂದು ರೀತಿಯಲ್ಲಿ ಪರಿಚಯಿಸುವ ಕನ್ನಡಿಯಾಗಿರುತ್ತೆ. ಬಿ.ಎಂ.ಟಿ.ಸಿಯ ನಂತರ ಈಗ ಬೆಂಗಳೂರಿನ ಸಾರಿಗೆ ಮೂಲಭೂತ ಸೌಕರ್ಯದ ಚಹರೆಯನ್ನೇ ಬದಲಾಯಿಸುವ ಹೊಸ ವ್ಯವಸ್ಥೆಯಾಗಿ ನಮ್ಮ ಮೆಟ್ರೋ ನಗರ ರೈಲು ಸಾರಿಗೆ ಶುರುವಾಗಿ ವರ್ಷಗಳೆ ಕಳೆದಿದೆ.
ಹೆಚ್ಚು ಕಡಿಮೆ 30 ವರ್ಷಗಳ ಕಾಲದಿಂದ ಇಂತಹದೊಂದು ವ್ಯವಸ್ಥೆಯ ಬಗ್ಗೆ ಹಲವಾರು ನಾಯಕರು, ಸರ್ಕಾರಗಳು, ನಟ ಶಂಕರ್ ನಾಗ್ ನಂತಹ ಕನಸುಗಾರ ಕನ್ನಡಿಗರು ಕಂಡ ಕನಸು ನನಸಾಗುವ ಮೊದಲ ಹಂತವಾಗಿ ಇದು ಬಂದಿದೆ. ತುಂಬಾ ಸಂತಸದ ವಿಚಾರವೇ ಸರಿ. ನಮ್ಮ ಮೆಟ್ರೋದಲ್ಲಿ ನಮ್ಮತನದ ಅಚ್ಚು ಒತ್ತಿರಬೇಕು ಎಂದುಕೊಂಡು ನೋಡಲು ಹೋದರೆ ಅಚ್ಚರಿ ಕಾದಿದೆ. ಅಲ್ಲಿನ ನಾಮ ಫಲಕ, ಘೋಷಣೆ, ಸುರಕ್ಷೆಯ ಸಂದೇಶ, ಹೀಗೆ ಎಲ್ಲ ವ್ಯವಸ್ಥೆಯಲ್ಲೂ ಯಾರದೋ ಒತ್ತಾಯಕ್ಕೆ ಸಿಲುಕಿಯೋ ಅಥವಾ ಯಾರನ್ನೋ ಒಲೈಸಲೋ ಎಂಬಂತೆ ಕನ್ನಡ, ಇಂಗ್ಲಿಶ್ ಜೊತೆ ಅನಾವಶ್ಯಕವಾಗಿ ಹಿಂದಿಯನ್ನೂ ಬಳಸಿರುವುದು ಕಂಡಾಗ ಹಿಂದಿ ಮೂಲಭೂತವಾದಿಗಳ ಕೈಗೆ ಹಿಂದಿ ಹೇರಿಕೆಯ ಹೊಸ ಅಸ್ತ್ರವಾಗಿ ನಮ್ಮ ಮೆಟ್ರೋ ಕಂಡಿದೆ ಅಂದರೆ ತಪ್ಪಾಗದು.
ನೀವು ಬರೆಯಬೇಕಾದ ಮೆಟ್ರೋ ಅಧಿಕಾರಿಗಳ ವಿಳಾಸ: [email protected]; [email protected]; [email protected]; [email protected]
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications