Your Time Matters ಎಂದಿದ್ಯಾಕೆ ಡಿ.ಕೆ ಶಿವಕುಮಾರ್, ನೆಟ್ಟಿಗರು ಹೇಳಿದ್ದೇನು ?
Hebbal Silk Board Tunnel: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮಾಡಿರುವ ಟ್ವೀಟ್ವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಡಿ.ಕೆ ಶಿವಕುಮಾರ್ ಅವರು, Your Time Matters ಎನ್ನುವ ಸಾಲುಗಳೊಂದಿಗೆ ಅವರು ಮಾಡಿರುವ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ. ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ, ಅವರು ಈ ರೀತಿ ರಿಯಾಕ್ಟ್ ಮಾಡಿದ ಮೇಲೆ ಅವರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟೆ ಟ್ವೀಟ್ ಮಾಡಿದ್ದಾರೆ ಎಂದು ಅನಿಸಿದರೆ ಅದು ತಪ್ಪು. ಆದರೆ, ಅವರು ಟ್ವೀಟ್ ಮಾಡಿರುವ ವಿಚಾರವೇ ಬೇರೆ ಇದೆ. ಅದೇನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ವಿಚಾರ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಡಿ.ಕೆ ಶಿವಕುಮಾರ್ ಅವರು ಹೊಸದೊಂದು ಟ್ವೀಟ್ ಮಾಡಿದ್ದಾರೆ. ಆದರೆ, ಇದು ರಾಜಕೀಯಕ್ಕೆ ಸಂಬಂಧಿಸಿದ ವಿಚಾರವಲ್ಲ. ಬೆಂಗಳೂರಿಗೆ ಸಂಬಂಧಿಸಿದ ವಿಚಾರವಾಗಿದ್ದು. ಪರ - ವಿರೋಧ ಚರ್ಚೆ ಶುರುವಾಗಿದೆ. ಬೆಂಗಳೂರಿನ ವಿಚಾರವಾಗಿ ನಿಮ್ಮ ಸಮಯ ನಮಗೆ ಮುಖ್ಯ ಅಂತ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

ನಿಮ್ಮ ಸಮಯ ಮುಖ್ಯ. ನಿಮ್ಮನ್ನು ಗಮನದಲ್ಲಿಟ್ಟುಕೊಂಡು ನಾವು ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಹೆಬ್ಬಾಳ ಮತ್ತು ಸಿಲ್ಕ್ಬೋರ್ಡ್ ಸುರಂಗ ಮಾರ್ಗದ ಬಗ್ಗೆ ಅವರು ಮಾತನಾಡಿದ್ದಾರೆ. ಈ ಸುರಂಗ ಮಾರ್ಗವು ನಿಮ್ಮ ದೈನಂದಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
✔ 25+ ಸಂಚಾರ ಅಡಚಣೆಗಳನ್ನು ತಪ್ಪಿಸಲಿದೆ / ಟ್ರಾಫಿಕ್ ಸಿಗ್ನಲ್ ಮುಕ್ತ ಸಂಚಾರ
✔ ಪ್ರತಿದಿನ 45+ ನಿಮಿಷಗಳನ್ನು ಉಳಿಸಬಹುದು.
✔ 16.75 ಕಿಮೀ ತಡೆರಹಿತ, ಸಿಗ್ನಲ್-ಮುಕ್ತ ಪ್ರಯಾಣ
✔ ಐಟಿ ಕಾರಿಡಾರ್ಗೆ ನೇರ ಪ್ರವೇಶ
ಬೆಂಗಳೂರು ತನ್ನ ವೇಗ ಹಾಗೂ ಸ್ಮಾರ್ಟ್ ಹಾದಿಯಲ್ಲಿದೆ. ಏಕೆಂದರೆ ನೀವು ಉತ್ತಮ ಪ್ರಯಾಣಕ್ಕೆ ಅರ್ಹರು ಎಂದು ಅವರು ಹೇಳಿದ್ದಾರೆ. ಆದರೆ ಸುರಂಗ ಮಾರ್ಗದ ಬಗ್ಗೆ ಕೆಲವರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬೆಂಗಳೂರು ಮಾತ್ರ ಅಭಿವೃದ್ಧಿಯಾದರೆ ಸಾಕೇ ಎಂದು ಕೆಲವರು ಪ್ರಶ್ನಿಸಿದ್ದಾರೆ.
ಜಗದೀಶ್ ಕುಮಾರ್ ಎನ್ನುವವರು, ಸೂಪರ್ ಕೆಲಸ, ಇದು ವಾರ್ಷಿಕವಾಗಿ 45 ನಿಮಿಷಗಳ ಪ್ರಯಾಣದ ಸಮಯವನ್ನು ಉಳಿಸುತ್ತದೆ ಮತ್ತು ಸಾಧಾರಣ ಮಳೆಯಲ್ಲಿ ಇದು ಪ್ರವಾಹ ನೀರು ಹೋಗುವುದಕ್ಕೆ ಚರಂಡಿಯಾಗಿ ಬದಲಾಗಲಿದೆ. ಎಂತಹ ಐಡಿಯಾ ಸರ್ಜಿ.. ಈ ಉದ್ಯಮ ಎಷ್ಟು ಲಾಭದಾಯಕವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ದೀಪಕ್ ದಿನೇಶ್ ಎನ್ನುವವರು, ಜೆ ಪಿ ನಗರದಲ್ಲಿನಂತೆಯೇ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣ ಹಂತದಲ್ಲಿರುವ ಪ್ರಸ್ತುತ ಮೆಟ್ರೋ ಮಾರ್ಗದಲ್ಲಿ ಏಕೆ ಹೂಡಿಕೆ ಮಾಡಬಾರದು. ಮೆಟ್ರೋ ಅಭಿವೃದ್ಧಿ ಮಾಡಿದರೆ ಸಮಸ್ಯೆ ಪರಿಹಾರವಾಗಲಿದೆ ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications