ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ದೇವೇಗೌಡರು ತಡೆದಿದ್ದೇಕೆ?
ಬೆಂಗಳೂರು, ಜುಲೈ 7: ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ಜೆಡಿಎಸ್ ನಿಂದ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಆದರೆ ಅದನ್ನು ಬಿಡುಗಡೆ ಮಾಡೋದು ಬೇಡ ಅಂತ ನಾನೇ ಹೇಳಿದ್ದೇನೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಅಭ್ಯರ್ಥಿಗಳ ಹೆಸರನ್ನು ಈಗಲೇ ಬಹಿರಂಗ ಮಾಡಿದರೆ ಇತರ ಪಕ್ಷದವರು ತಮ್ಮ ಕಡೆಗೆ ಸೆಳೆಯಬಹುದು. ಆದ್ದರಿಂದ ನಮ್ಮ ಪಕ್ಷದ ಸ್ಪರ್ಧಾಳುಗಳಿಗೆ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದ್ದೇವೆ. ಪಟ್ಟಿ ಬಿಡುಗಡೆಯನ್ನು ತಡೆ ಹಿಡಿದಿದ್ದೇವೆ ಎಂದು ಆವರು ತಿಳಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ನಡೆದಿದ್ದ ಆಪರೇಷನ್ ಕಮಲದ ಬಗ್ಗೆ ಪ್ರಸ್ತಾವ ಮಾಡಿರುವ ಅವರು, ಗೆದ್ದವರನ್ನೇ ಸೆಳೆದವರು ಈಗ ಬಿಡ್ತಾರಾ? ಅದಕ್ಕಂತಲೆ ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಈಗಲೇ ಮಾಡುವುದು ಬೇಡ ಎಂದು ಕುಮಾರಸ್ವಾಮಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.
ಆದರೆ, ಈ ನಿರ್ಧಾರದ ಹಿಂದೆ ಇನ್ನೂ ಕೆಲ ಕಾರಣಗಳಿವೆ ಎಂಬುದು ಸದ್ಯಕ್ಕೆ ಹರಿದಾಡುತ್ತಿರುವ ಸುದ್ದಿ. ಬಿಜೆಪಿ ಹಾಗೂ ಕಾಂಗ್ರೆಸ್ ನ ಕೆಲ ನಾಯಕರಿಗೆ ಜೆಡಿಎಸ್ ಸೇರ್ಪಡೆ ಆಗುವ ಒಲವಿದೆ. ಆ ಬಗ್ಗೆ ಅಂತಿಮ ತೀರ್ಮಾನವೊಂದು ಆಗುವವರೆಗೆ ಪಟ್ಟಿ ಬಿಡುಗಡೆ ಬೇಡ ಎಂದು ವರಿಷ್ಠರ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳಲಾಗಿದೆಯಂತೆ.
ಇನ್ನು ಈಚೆಗೆ ಜೆಡಿಎಸ್ ಗೆ ಸೇರ್ಪಡೆ ಆಗಿರುವ ಎಚ್ ವಿಶ್ವನಾಥ್ ಅವರು ಕಾಂಗ್ರೆಸ್ ನ ಕೆಲವು ನಾಯಕರಿಗೆ ಬಲೆ ಬೀಸಿದ್ದು, ಹಾಗೊಂದು ವೇಳೆ ನಾಯಕರು ಬಂದಾಗ ಗೊಂದಲ ಏರ್ಪಡಬಾರದು ಎಂಬ ಲೆಕ್ಕಾಚಾರ ಕೂಡ ಇದೆ.
ಇದರ ಜತೆಗೆ ಪಟ್ಟಿ ಬಿಡುಗಡೆ ನಂತರ ಬುಗಿಲೇಳಬಹುದಾದ ಆಸಮಾಧಾನದಿಂದ ಎದುರಾಳಿ ಪಕ್ಷಗಳು ಲಾಭ ಮಾಡಿಕೊಳ್ಳಬಹುದು ಎಂಬ ಮುಂಜಾಗ್ರತಾ ಕ್ರಮ ಕೂಡ ದೇವೇಗೌಡರ ನಿರ್ಧಾರದ ಹಿಂದೆ ಇರುವಂತಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications