ಜನರು ಬಿಎಂಟಿಸಿ ಬಸ್ ಹತ್ತದಿರಲು ಕಾರಣ: ಒಂದು ಕೊರೊನಾ ಮತ್ತೊಂದು?
ಬೆಂಗಳೂರು, ಮೇ 20: ನಗರದಲ್ಲಿ ಮೇ 19ರಿಂದಲೇ ಬಿಎಂಟಿಸಿ ಬಸ್ ಸಂಚಾರ ಆರಂಭಗೊಂಡಿದೆ. ಆದರೆ ಜನರು ಮಾತ್ರ ಬಸ್ ಹತ್ತಲು ಆಸಕ್ತಿ ತೋರುತ್ತಿಲ್ಲ.
ಹೌದು ಇಷ್ಟು ದಿನ ಲಾಕ್ಡೌನ್ ಎಂದು ಮನೆಯಲ್ಲಿಯೇ ಕುಳಿತಿದ್ದರು, ಯಾವಾಗ ಬಸ್ ಆರಂಭವಾಗುತ್ತೋ ಯಾವಾಗ ಮನೆಯಿಂದ ಹೊರಗೆ ಹೋಗ್ತೀವೋ ಎಂದು ಜನರು ಕಾಯುತ್ತಿದ್ದರು ಆದರೆ ಈಗ ಬಸ್ ಸಂಚಾರ ಆರಂಭಗೊಂಡರೂ ಬೆರಳೆಣಿಕೆಯಷ್ಟು ಜನರಿಲ್ಲ.
ಒಂದೊಡೆ ಕೊರೊನಾವೈರಸ್ ಭಯ ಇರುವುದು ನಿಜ, ಜನರು ಬಾರದಿರಲು ಅದೇ ಕಾರಣ ಎಂದು ಹೇಳಲಾಗುವುದಿಲ್ಲ. ಬಸ್ನಲ್ಲಿ ಟಿಕೆಟ್ ನೀಡುತ್ತಿಲ್ಲ ಬದಲಾಗಿ ದಿನದ ಪಾಸನ್ನು ಪಡೆಯಬೇಕು. ಅಥವಾ ಹತ್ತಿರದ ಡಿಪೋಗೆ ತೆರಳಿ ವಾರದ ಪಾಸನ್ನು ಪಡೆಯಬೇಕಿದೆ.
ಕೇವಲ 10 ರೂ ಟಿಕೆಟ್ ಪಡೆಯುವಷ್ಟು ದೂರಕ್ಕೆ ಪ್ರಯಾಣಿಕರು ತೆರಳಬೇಕಿದ್ದರೂ ದಿನದ ಬಸ್ಪಾಸ್ ಪಡೆದು 70ರೂ. ಹಣವನ್ನು ಪಾವತಿ ಮಾಡಲೇಬೇಕಿದೆ. ಹಾಗಾಗಿ ಬಸ್ನಲ್ಲಿ ಪ್ರಯಾಣಿಸುವವರ ಸಂಖ್ಯೆ ಸಧ್ಯಕ್ಕೆ ಕಡಿಮೆ ಇದೆ.
ಮತ್ತೊಂದು ವಿಚಾರ ಅಂದ್ರೆ ಲಾಕ್ ಡೌನ್ ಸಮಯದಲ್ಲಿ ಬಹುತೇಕರು ಅನಿವಾರ್ಯವಾಗಿ ಸ್ವಂತ ವಾಹನಗಳು ಸೇರಿದಂತೆ ಪರ್ಯಾಯ ಮಾರ್ಗಗಳನ್ನು ಹುಡುಕಿ ಕೊಂಡಿದ್ದಾರೆ. ಬಸ್ನಲ್ಲಿ ಪ್ರಯಾಣಿಸುವವರಲ್ಲಿ ಕೂಲಿ ಕಾರ್ಮಿಕರು ಕೂಡ ಇದ್ದರು, ಹಾಗೆಯೇ ಶಾಲಾ, ಕಾಲೇಜುಗಳು, ಕಚೇರಿಗಳು ಇನ್ನೂ ತೆರೆಯದ ಕಾರಣ ಬಸ್ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ.

ಎರಡು ತಿಂಗಳ ಬಳಿಕ ಓಲಾ, ಆಟೋಗಳ ಸಂಚಾರ
ಹೆಚ್ಚು ಕಡಿಮೆ ಎರಡು ತಿಂಗಳ ಲಾಕ್ಡೌನ್ ನಂತರ ರಾಜ್ಯ ಸರ್ಕಾರ ಬಿಎಂಟಿಸಿ, ಕೆಎಸ್ಆರ್ ಟಿಸಿ, ಆಟೋ, ಕ್ಯಾಬ್ ಓಲಾಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಆದರೆ ಜನ ಮಾತ್ರ ಸಾರ್ವಜನಿಕ ಸಾರಿಗೆ ಉಪಯೋಗಕ್ಕೆ ಹಿಂದೇಟು ಹಾಕುತ್ತಿದ್ದಾರೆ.

ತಪ್ಪಾದ ಬಿಎಂಟಿಸಿ ಆಲೋಚನೆ
ಸಾಮಾನ್ಯವಾಗಿ ಬಸ್ಸುಗಳಿಗಾಗಿ ಜನ ಕಾಯೋದನ್ನು ನೋಡಿದ್ದೇವೆ. ಒಂದರ ಹಿಂದೆ ಒಂದು ಬಸ್ ಬಂದರೂ ಕೂಡ ಜನರು ಬಸ್ ನಿಲ್ದಾಣದಲ್ಲಿಯೇ ಬಾಕಿಯಾಗುತ್ತಿದ್ದರು. ಅಷ್ಟು ರಷ್ ಇರುತ್ತಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಈ ಬಸ್ಸುಗಳೇ ಜನರಿಗೆ ಕಾಯ್ತಿರೋ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ತಿಂಗಳ ಲಾಕ್ಡೌನ್ ನಿಂದ ಯಾವುದೇ ಸಾರಿಗೆ ಸೇವೆ ಇಲ್ಲದೇ ಜನ ಒದ್ದಾಡಿ ಹೋಗಿದ್ದರು.
ಕೊರೊನಾ ವೈರಸ್ ಮಧ್ಯೆಯೂ ಜನರ ಜೀವನ ಎಂದಿನಂತಾಗಲಿ ಅಂತ ರಾಜ್ಯ ಸರ್ಕಾರ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಬಿಎಂಟಿಸಿ, ಕೆಎಸ್ಆರ್ಟಿಸಿ, ಆಟೋ, ಕ್ಯಾಬ್ ಓಲಾ ಸೇರಿದಂತೆ ಬಹುತೇಕ ಎಲ್ಲಾ ಸಾರಿಗೆಯನ್ನು ಆರಂಭ ಮಾಡಿತ್ತು. ಕುತೂಹಲದಿಂದ ಸಾರಿಗೆ ಆರಂಭ ಮಾಡಿದ ರಾಜ್ಯ ಸರ್ಕಾರಕ್ಕೆ ಜನರಿಂದ ಸಿಕ್ಕಿದ್ದು ಮಾತ್ರ ಭಾರೀ ನಿರಾಸೆ.

ಸೋಮವಾರ ಇಡೀ ದಿನ ಕ್ಯಾಬ್, ಆಟೋ, ಬಸ್ಗಳು ಖಾಲಿ ಖಾಲಿ
ಸೋಮವಾರ ಬೆಳಗ್ಗಿನ ಜಾವ ಒಂದಷ್ಟು ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ಬಂದಿದ್ದು ಬಿಟ್ರೆ, ಸಂಜೆವರೆಗೆ ಆಟೋ, ಒಲಾ, ಊಬರ್, ಬಿಎಂಟಿಸಿ, ಕೆಎಸ್ಆರ್ ಟಿಸಿ ಖಾಲಿ ಖಾಲಿಯಾಗಿದ್ದವು.

ಬಸ್ನಲ್ಲಿ ಟಿಕೆಟ್ ಇಲ್ಲ ದಿನದ ಪಾಸ್ ಮಾತ್ರ ಲಭ್ಯ
ಬಸ್ನಲ್ಲಿ ಟಿಕೆಟ್ ವ್ಯವಸ್ಥೆ ಇಲ್ಲ, ದಿನದ ಪಾಸ್ ಮಾತ್ರ ಲಭ್ಯವಿದೆ. ಅದಕ್ಕೆ 70 ರೂ. ಪಾವತಿಸಬೇಕು. ಇಲ್ಲವಾದಲ್ಲಿ ಹತ್ತಿರದ ಡಿಪೋಗೆ ತೆರಳಿ 300 ರೂ. ನೀಡಿ ವಾರದ ಪಾಸ್ ಪಡೆದುಕೊಳ್ಳಬೇಕು.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications