ರಾಜ್ಯಪಾಲರು ಹಿಂದಿಯಲ್ಲೇಕೆ ಭಾಷಣ ಮಾಡಬೇಕು?
ಬೆಂಗಳೂರು, ಜ. 29 : ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಜನವರಿ 25ರಂದು 50 ವರುಷಗಳು ಸಂದವು. ಇದರ ನೆನಪಿಗಾಗಿ ಬಸವನಗುಡಿಯ ಬಿಪಿ ವಾಡಿಯಾ ರಸ್ತೆಯಲ್ಲಿರುವ ಮನೋರಮಾ ಹಾಲ್ ನಲ್ಲಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ಆದರೆ, ಇದಾಗಿ ಕೆಲವೇ ದಿನಗಳಲ್ಲಿ ಹಿಂದಿ ಹೇರಿಕೆಯ ವಿರುದ್ಧ ಕನ್ನಡಿಗರು ಮತ್ತೆ ದನಿ ಎತ್ತುವಂತಾಗಿದೆ.
ಮೊಟ್ಟಮೊದಲ ಬಾರಿಗೆ ಕರ್ನಾಟಕದ ರಾಜ್ಯಪಾಲರೊಬ್ಬರು ಜಂಟಿ ಸದನವನ್ನು ಉದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡುತ್ತಿರುವುದು ಹಲವಾರು ಕನ್ನಡಿಗರನ್ನು ಕೆರಳಿಸಿದೆ. ರಾಜ್ಯದ ಇತಿಹಾಸದಲ್ಲಿ ಇಂಥ ವಿದ್ಯಮಾನ ನಡೆದಿರಲಿಲ್ಲ. ಆದರೆ, ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಸದನವನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಲಿದ್ದಾರೆ. ಇದಕ್ಕೆ ಸದನದ ಅನುಮೋದನೆಯೂ ದೊರಕಿದೆ.
ಕನ್ನಡೇತರ ರಾಜ್ಯಪಾಲರು ಇಲ್ಲಿಯವರೆಗೆ ಕನ್ನಡದಲ್ಲಿ ಬರೆದುಕೊಟ್ಟ ಭಾಷಣವನ್ನು ಕಷ್ಟಪಟ್ಟಾದರೂ ಓದುತ್ತಿದ್ದರು ಅಥವಾ ಇಂಗ್ಲಿಷ್ ನಲ್ಲಿ ಓದುತ್ತಿದ್ದರು. ಇದು ಅನೂಚಾನವಾಗಿ ನಡೆದುಕೊಂಡು ಬಂದಂತಹ ಸಂಪ್ರದಾಯ. ಇದು ರಾಜ್ಯದ ಮೇಲೆ ಹಿಂದಿ ಹೇರಿಕೆಯ ಒಂದು ಭಾಗ ಎಂದು ಕನ್ನಡದ ಕಟ್ಟಾಳುಗಳು ಕೆರಳಿನಿಂತಿದ್ದಾರೆ. [ಬನವಾಸಿ ಬಳಗದಿಂದ ಹಿಂದಿ ಹೇರಿಕೆ ಹೋರಾಟದ ನೆನಪು]

"ಗುಜರಾತಿ ಭಾಷೆಯಲ್ಲಿ ಮಾತನಾಡಿದ್ದರೆ, ಇನ್ನೂ ಕನ್ನಡ ಕಲಿತಿಲ್ಲ ಅಂತ ಒಂದು ಲೆಕ್ಕ; ಆದರೆ ಹಿಂದೀಲೆ ಮಾತಾಡ್ತೀನಿ ಅನ್ನೋ ಹಠ ನೋಡಿದರೆ ಇವರ ಉದ್ದೇಶ ಹಿಂದಿ ಸಾಮ್ರಾಜ್ಯ ಸ್ಥಾಪನೆ ಅಲ್ಲದೆ ಮತ್ತಿನೇನು?" ಎಂದು ಗಣೇಶ್ ಚೇತನ್ ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ಇದು ಇವರೊಬ್ಬರ ಪ್ರಶ್ನೆ ಮಾತ್ರವಲ್ಲ, ಹಿಂದಿ ಬೇಡವೆನ್ನುವವರ ಪ್ರಶ್ನೆಯೂ ಆಗಿದೆ.
ಹಿಂದಿ ಹೇರಿಕೆ ಬಗ್ಗೆ ಸಾಕಷ್ಟು ಹೋರಾಟಗಳು ನಡೆಯುತ್ತಿದ್ದರೂ ಆ ಭಾಷೆ ಬೆಂಗಳೂರಿನಲ್ಲಿ ಸಾಕಷ್ಟು ದಾಂಗುಡಿಯಿಟ್ಟಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ, ಸಾಫ್ಟ್ ವೇರ್ ಕಂಪನಿಗಳಲ್ಲಿ, ಮಾಲ್ ಗಳಲ್ಲಿ, ಮೆಟ್ರೋಗಳಲ್ಲಿ ತನ್ನ ಇರುವನ್ನು ಸ್ಥಾಪಿಸುತ್ತ ಬಂದಿದೆ. ಇನ್ನು ಕಾಲೇಜು ಹುಡುಗ ಹುಡುಗಿಯರ ಬಾಯಲ್ಲಿ ಹಿಂದಿ ಬಿಟ್ಟರೆ ಬೇರೆ ಭಾಷೆಯೇ ಇಲ್ಲವೇನೋ ಎಂಬಂತೆ ನಲಿದಾಡುತ್ತಿರುವುದು ವಿಪರ್ಯಾಸ. [ಹಿಂದಿ ಹೇರಿಕೆ. ಕರವೇ ನಾರಾಯಣ ಗೌಡ್ರ ಲೇಖನ - 1]
"ವಜುಭಾಯಿ ವಾಲಾ ಅವರು ಸರಕಾರಕ್ಕೆ ಹಿಂದಿಯಲ್ಲಿಯೇ ಭಾಷಣ ತರ್ಜುಮೆ ಮಾಡಬೇಕೆಂದು ಆದೇಶಿಸಿದ್ದರೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರಾಗಲಿ ಏಕೆ ಕನಿಷ್ಠ ಪ್ರತಿಭಟನೆ ಸಲ್ಲಿಸಿಲ್ಲ? ಕರ್ನಾಟಕವೇನು ಹಿಂದಿ ಕಾಲೋನಿಯಾ? ವಿಧಾನಸಭೆಯಲ್ಲಿಯೇ ಇದಕ್ಕೆ ಅವಕಾಶ ಮಾಡಿಕೊಟ್ಟರೆ, ಮುಂದೆ ಹಿಂದಿ ಹೇರಿಕೆಯನ್ನು ತಡೆಗಟ್ಟಲಾದರೂ ಹೇಗೆ ಸಾಧ್ಯ" ಎಂದು ವಸಂತ್ ಶೆಟ್ಟಿ ಕೆಂಡ ಕಾರಿದ್ದಾರೆ.
ಆತ್ಮಗೌರವವಿಲ್ಲದವರು ಮಾತ್ರ ಹಿಂದಿ ಭಾಷಣಕ್ಕೆ ಅವಕಾಶ ನೀಡುತ್ತಾರೆ ಎಂಬ ಅಭಿಪ್ರಾಯ ಅವರು ಮಂಡಿಸಿದ್ದಾರೆ. ಮಂತ್ರಿಗಳು ಪ್ರತಿಭಟಿಸದಿದ್ದರೇನಂತೆ ಅವರನ್ನು ಆರಿಸಿರುವ ಕನ್ನಡಿಗರಿಗಾದರೂ ಪ್ರತಿಭಟಿಸುವ ಅಧಿಕಾರವಿದೆಯಲ್ಲವೆ? ಫೆಬ್ರವರಿ 2ರಿಂದ ಆರಂಭವಾಗಲಿರುವ ಜಂಟಿ ಅಧಿವೇಶನದಲ್ಲಿ ವಾಲಾ ಹಿಂದಿಯಲ್ಲಿ ಭಾಷಣ ಮಾಡಬೇಕಾ ಮಾಡಬಾರದಾ? ನಿಮ್ಮ ಅಭಿಪ್ರಾಯ ತಿಳಿಸಿ. ನಿಮ್ಮ ಕೂಗು ವಿಧಾನಸಭೆ ಗೋಡೆಯನ್ನು ಅಪ್ಪಳಿಸಲಿ. ಅಂದಹಾಗೆ, ವಾಟಾಳ್ ನಾಗರಾಜ್ ಅವರೇ ಎಲ್ಲಿದ್ದೀರಿ? [ಸಂವಿಧಾನವೇ ಹುಳುಕನ್ನು ಪೊರೆದಿರುವಾಗ]
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications