ಅತ್ಯಾಚಾರ ಎಂಬುದೇ ನಾಚಿಕೆಗೇಡಿನ ಸಂಗತಿ : ಎಚ್ಡಿಡಿ
ಬೆಂಗಳೂರು, ಏ.11: ರೇಪ್ ಹುಡುಗರು ಮಾಡುವ ಮಿಸ್ಟೇಕ್ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಿರಾಕರಿಸಿದ್ದಾರೆ.
ಮುಲಾಯಂ ಸಿಂಗ್ ಅವರು ಅತ್ಯಾಚಾರಿಗಳ ಪರ ನೀಡಿದ ಹೇಳಿಕೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಚುನಾವಣಾ ಆಯೋಗ ಏಕೆ ಮುಲಾಯಂ ಅವರ ಮೇಲೆ ಸ್ವಯಂ ದೂರು ದಾಖಲಿಸಿಕೊಳ್ಳಬಾರದು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ. ಆಯೋಗ ಈಗ ಮುಲಾಯಂಗೆ ಈ ಬಗ್ಗೆ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿದೆ. ಆದರೆ, ದೇವೇಗೌಡರು ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಪ್ರತಿ ರಾಜಕೀಯ ಪಕ್ಷ ತನ್ನದೇ ಆದ ನಿಲುವು ಹೊಂದಿರುತ್ತದೆ. ಅವರು(ಮುಲಾಯಂ) ವೈಯಕ್ತಿಕ ನಿಲುವು ಪ್ರಕಟಿಸುವ ಹಕ್ಕು ಹೊಂದಿದ್ದಾರೆ. ನಾನು ಏಕೆ ಬೇರೆಯವರನ್ನು ಖಂಡಿಸಬೇಕು? ಅಂತಿಮವಾಗಿ ಸುಪ್ರೀಂಕೋರ್ಟ್ , ರಾಷ್ಟ್ರಪತಿಗಳು ಈ ಬಗ್ಗೆ ನಿರ್ಣಯ ಕೈಗೊಳ್ಳಲಿದೆ ಎಂದು ದೇವೇಗೌಡರು ಹೇಳಿದ್ದಾರೆ. ಜೆಡಿಎಸ್ ಲೋಕಸಭೆ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ದೇವೇಗೌಡರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಈ ರೀತಿ ಉತ್ತರಿಸಿದರು.
ಅತ್ಯಾಚಾರ ಎಂಬುದೇ ನಾಚಿಕೆಗೇಡಿನ ಸಂಗತಿ. ಇದರ ಬಗ್ಗೆ ಮಾತನಾಡಲು ನಾನು ಬಯಸುವುದಿಲ್ಲ ಎಂದರು. ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುವ ಸ್ವತಂತ್ರ್ಯ ಒಬ್ಬ ಪಕ್ಷದ ನಾಯಕನಿಗೆ ಇರುತ್ತದೆ ಇದು ಮುಲಾಯಂ ಅವರ ವೈಯಕ್ತಿಕ ಹೇಳಿಕೆ ಇದನ್ನು ನಾನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
ಯಾವುದೋ ಕಾರಣಕ್ಕೆ ಸಂಬಂಧ ಮುರಿದು ಬಿದ್ದಾಗ ಹುಡುಗಿಯರು ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಅತ್ಯಾಚಾರಕ್ಕೆ ಸಂಬಂಧಿಸಿದ ಕಾನೂನನ್ನು ಬದಲಾಯಿಸುವ ಅಗತ್ಯ ಇದೆ. ಈ ಕಾನೂನನ್ನು ದುರುಪಯೋಗಪಡಿಸಿಕೊಳ್ಳುವವರನ್ನು ಶಿಕ್ಷಿಸುವ ಅಗತ್ಯ ಇದೆ. ಅತ್ಯಾಚಾರಕ್ಕೆ ಸಂಬಂಧಿಸಿ ಸುಳ್ಳು ಪ್ರಕರಣ ದಾಖಲಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕಿದೆ ಎಂದು ಮುಲಾಯಂ ಮೊರಾದಾಬಾದಿನಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಹೇಳಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications