ಬಿಎಂಟಿಸಿ ಸಿಗದೆ ಹೆಸರಘಟ್ಟ ವಿದ್ಯಾರ್ಥಿಗಳಿಗೆ ನಡಿಗೆಯೇ ಗತಿ
ಬೆಂಗಳೂರು, ಮಾರ್ಚ್ 16: ನಗರದ ಜನಸಂಖ್ಯೆ ಸಾವಿರ ಪಟ್ಟು ಹೆಚ್ಚಾಗಿದೆ ಆದರೂ ಸಹ ಆರುವರೆ ಸಾವಿರದಷ್ಟು ಬಸ್ಗಳನ್ನು ಬಿಎಂಟಿಸಿ ಹೊಂದಿದೆ. ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ ಎಂದು ಆಮ್ ಆದ್ಮಿ ಪಕ್ಷ ಖಂಡಿಸಿದೆ.
ಸಕಾಲದಲ್ಲಿ ಬಸ್ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ ಇರುವ ಹೆಸರಘಟ್ಟ ಗ್ರಾಮದಿಂದ ವಿದ್ಯಾರ್ಥಿಗಳು ಪ್ರೌಢಶಾಲೆಗೆ ಹೋಗಿಬರಲು ನಿತ್ಯ 4 ಕಿ.ಮೀ ನಡೆಯಬೇಕಾದ ಅನಿವಾರ್ಯತೆಯನ್ನು ವ್ಯವಸ್ಥೆ ಸೃಷ್ಟಿಸಿರುವುದು ಖಂಡನೀಯ.
ಬೆಂಗಳೂರು ನಗರ ಬೆಳೆಯುತ್ತಲೇ ಇದೆ. ಕೆಲವು ವರ್ಷಗಳ ಹಿಂದೆ ಸುಮಾರು 110 ಹಳ್ಳಿಗಳು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಲಾಗಿದೆ ಆದರೆ ಅಲ್ಲಿನ ಮೂಲ ಸೌಕರ್ಯಗಳ ಅಭಿವೃದ್ಧಿಯತ್ತ ಗಮನ ಹರಿಸಿದೆಯೆ ಎಂದು ನೋಡಿದರೆ ಸಾಧನೆ ಶೂನ್ಯ.

21 ವರ್ಷಗಳ ಹಿಂದೆ ಬಿಟಿಎಸ್ ಹೆಸರಿನ ಮೂಲಕ ಬಸ್ ಸೇವೆ ನೀಡಲಾಗುತ್ತಿತ್ತು, ಆಗ ಸುಮಾರು 2 ಸಾವಿರದಷ್ಟು ಬಸ್ಗಳು ಇದ್ದವು. ಇಂದು ನಗರದ ಜನಸಂಖ್ಯೆ ಸಾವಿರ ಪಟ್ಟು ಹೆಚ್ಚಾಗಿದೆ ಆದರೂ ಸಹ ಆರುವರೆ ಸಾವಿರದಷ್ಟು ಬಸ್ಗಳನ್ನು ಬಿಎಂಟಿಸಿ ಹೊಂದಿದೆ. ಇದು ಬೆಂಗಳೂರಿನ ಜನ ಸಾಗರಕ್ಕೆ ಏನೇನೂ ಅಲ್ಲದ ಸೌಲಭ್ಯ ಇದಾಗಿದೆ. ಅಧ್ಯಯನದ ಪ್ರಕಾರ ನಗರದ ಇಂದಿನ ಜನಸಂಖ್ಯೆಗೆ ಅನುಗುಣವಾಗಿ ಸುಮಾರು 10 ಸಾವಿರ ಬಸ್ಗಳ ಅವಶ್ಯಕತೆ ಇದೆ. ಆದರೆ ಈ ಅವ್ಯವಸ್ಥೆಯನ್ನು ಸರಿ ಪಡಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು ''ಬಿಎಂಟಿಸಿ'' ಎನ್ನುವ ಬಿಳಿಯಾನೆಯಿಂದ ತಮ್ಮ ಜೇಬುಗಳನ್ನು ತುಂಬಿಸಿಕೊಳ್ಳುತ್ತಿದ್ದಾರೆ.
70- 80 ರ ದಶಕದಲ್ಲಿ ಹಳ್ಳಿಯ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದರು ಎನ್ನುವ ಕಥೆ ಕೇಳಲು ಖುಷಿಯಾಗುತ್ತದೆ. ಈ ಹಳೆಯ ಪರಂಪರೆಯನ್ನು ಬಿಡಬಾರದು, ಬಡವರ, ಕೂಲಿಕಾರರ ಮಕ್ಕಳು ಇನ್ನೂ ಕಷ್ಟದಲ್ಲೆ ವಿದ್ಯೆ ಪಡೆಯಬೇಕು ಎನ್ನುವುದು ಅಧಿಕಾರಶಾಯಿಯ, ಸರ್ಕಾರದ ನೂತನ ಯೋಜನೆ ಎಂದು ಇದನ್ನು ಕರೆಯಬಹುದೇ!!...
ಐವರಕಂಡಪುರದ ಪ್ರೌಢಶಾಲೆಗೆ ಸುತ್ತಮುತ್ತಲ ಹಳ್ಳಿಗಳಿಂದ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೂಕ್ತ ಬಸ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು ಹಾಗೂ ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಸರಘಟ್ಟದಲ್ಲಿ ಮತ್ತೊಂದು ಪ್ರೌಢಶಾಲೆಯನ್ನು ತೆರೆಯಬೇಕು ಎಂದು ಆಮ್ ಆದ್ಮಿ ಪಕ್ಷ ಈ ಮೂಲಕ ಆಗ್ರಹಿಸುತ್ತದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications