Vijay - Bengaluru: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೆ ತಮಿಳುನಾಡಿನ ವಿಜಯ್, ಟಿವಿಕೆ ಪಕ್ಷದ ಕಣ್ಣು
Vijay - Bengaluru: ನಟ ಹಾಗೂ ರಾಜಕಾರಣಿ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷವು ತಮಿಳುನಾಡಿನ ನಂತರ ಬೆಂಗಳೂರು - ಕರ್ನಾಟಕ ಚುನಾವಣೆಯ ಮೇಲೆ ಕಣ್ಣಿರಿಸಿದೆ. ಹೌದು ಬೆಂಗಳೂರಿನ ಆಡಳಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯ ಮೇಲೆ ಕಣ್ಣಿಟ್ಟಿದೆ. 2026ನೇ ಸಾಲಿನ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಗೆಲುವು ಸಾಧಿಸಿದ ಮೇಲೆ ಇದೀಗ ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಸದ್ದಿಲ್ಲದೆ ಬೆಂಗಳೂರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಹೇಳಲಾಗಿದೆ.
ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿರುವ ಹಾಗೂ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಗಳಿಸಿರುವ ಟಿವಿಕೆ ಪಕ್ಷವು ಬೆಂಗಳೂರು - ಕರ್ನಾಟಕ ರಾಜಕೀಯ ಪ್ರವೇಶ ಮಾಡುವುದಕ್ಕೂ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ತಮಿಳುನಾಡು ಮತ್ತು ಪುದುಚೇರಿಯ ನಂತರ, ಬೆಂಗಳೂರಿನ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷವು ತನ್ನ ಅದೃಷ್ಟ ಪರೀಕ್ಷೆಗೆ ಸಿದ್ಧವಾಗುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ.

ಇದಕ್ಕೆ ಮುಖ್ಯ ಕಾರಣ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ನಟ, ರಾಜಕಾರಣಿ ವಿಜಯ್ ಅವರ ಅಭಿಮಾನಿಗಳು ಹಾಗೂ ವಿಜಯ್ ಅವರ ಅಭಿಮಾನಿ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯಲ್ಲಿ ಟಿವಿಕೆಯಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಕ್ಕೆ ಟಿವಿಕೆ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗಿದೆ.
Vijay - Bengaluru: ಬೆಂಗಳೂರು ರಾಜಕೀಯದ ಮೇಲೆ ಟಿವಿಕೆ ಕಣ್ಣು
ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗಳನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆ ಇದೆ. ಹೀಗಾಗಿ, ಟಿವಿಕೆ ಪಕ್ಷವು ನಗರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅಡಿಪಾಯ ಹಾಕಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಬೆಂಗಳೂರಿನ 369 ವಾರ್ಡ್ಗಳಲ್ಲಿ ಕನಿಷ್ಠ 50 ವಾರ್ಡ್ಗಳಲ್ಲಿ ಅಸ್ತಿತ್ವವನ್ನು ಸ್ಥಾಪಿಸುವ ಗುರಿಯನ್ನು ಪಕ್ಷ ಹೊಂದಿದೆ ಎಂದು ಹೇಳಲಾಗಿದೆ.
ಟಿವಿಕೆ ಕಾರ್ಯತಂತ್ರವು ಗಮನಾರ್ಹ ತಮಿಳು ಮಾತನಾಡುವ ಜನಸಂಖ್ಯೆಯನ್ನು ಹೊಂದಿರುವ ವಾರ್ಡ್ಗಳ ಸುತ್ತ ಕೇಂದ್ರೀಕೃತವಾಗಿದೆ. ಶ್ರೀರಾಂಪುರ, ಹಲಸೂರು, ಶಿವಾಜಿನಗರ, ವಿವೇಕ್ ನಗರ, ಈಜೀಪುರ, ಮಡಿವಾಳ ಮತ್ತು ಶಾಂತಿನಗರ ಸೇರಿದಂತೆ ಬೆಂಗಳೂರಿನ ಪ್ರಮುಖ ವಾರ್ಡ್ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಪ್ರದೇಶಗಳಲ್ಲಿ ಹಲವು ವಿಜಯ್ ಅಭಿಮಾನಿಗಳು ಮತ್ತು ಸ್ಥಳೀಯ ಬೆಂಬಲಿಗರು ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಮತ್ತು ಪಕ್ಷದ ನಾಯಕತ್ವದ ಅನುಮೋದನೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ. ಸಿನಿಮಾವನ್ನು ಮೀರಿ, ಬೆಂಗಳೂರಿನಲ್ಲಿ ವಿಜಯ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅನೇಕ ಅಭಿಮಾನಿ ಕ್ಲಬ್ಗಳು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಹಾಗೂ ಅಭಿಮಾನಿ ಸಂಘಟನೆಗಳು ಇರುವುದು ನಟ - ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಅಂದಾಜಿಸಲಾಗಿದೆ.













Click it and Unblock the Notifications