ಬೆಂಗಳೂರು: ಚಾಕುವಿನಿಂದ ಪತಿ ಮೇಲೆ ಪತ್ನಿ ಹಲ್ಲೆ, ಪತಿಯ ದೂರು ಸ್ವೀಕರಿಸಿದ ಪ್ರಧಾನಿ ಕಚೇರಿ
ಬೆಂಗಳೂರು, ಡಿಸೆಂಬರ್ 04: ತನ್ನ ಪತ್ನಿ ದಿನವೂ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಸಹಾಯ ಹಾಗೂ ರಕ್ಷಣೆ ಕೋರಿದ್ದ ಬೆಂಗಳೂರಿನ ವ್ಯಕ್ತಿಗೆ ಪ್ರಧಾನಮಂತ್ರಿ ಕಾರ್ಯಾಲಯ ಸ್ಪಂದಿಸಿ ದೂರನ್ನು ಸ್ವೀಕರಿಸಿದೆ.
ಬೆಂಗಳೂರಿನ ಯದುನಂದನ್ ಆಚಾರ್ಯ ಎಂಬುವವರು ಸಾಮಾಜಿಕ ಮಾಧ್ಯಮಗಳ ತಮಗೆ ಆಗುತ್ತಿದ್ದ ಕಿರುಕುಳ ಬೆದರಿಕೆ ಕುರಿತು ಹಂಚಿಕೊಂಡಿದ್ದರು. ಈ ಕುರಿತು ಟ್ವಿಟ್ ಮಾಡಿದ್ದ ಅವರು, ಪ್ರಧಾನಿ ಕಾರ್ಯಾಲಯ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಕೇಂದ್ರ ಕಾನೂನು ಸಚಿವ ಮತ್ತು ನ್ಯಾಯಮೂರ್ತಿ ಕಿರಣ್ ರಿಜಿಜು ಅವರಿಗೆ ಟ್ಯಾಗ್ ಮಾಡಿದ್ದರು.
ಈ ರೀತಿ ಪತ್ನಿಯಿಂದ ಕಿರುಕುಳ, ದೈಹಿಕ ಹಲ್ಲೆಯಾದಾಗ ಯಾರೊಬ್ಬರು ನನ್ನ ಸಹಾಯಕ್ಕೆ ಬರಲಿಲ್ಲ. ನಾನು ಪುರಷನಾಗಿದ್ದರಿಂದ ಯಾರು ನನ್ನ ಸಹಾಯಕ್ಕೆ ಧಾವಿಸಿಲ್ಲ ಎಂದು ಬರೆದುಕೊಂಡಿದ್ದಾರೆ. ಇಂತಹ ಕೆಲಸಗಳಿಂದ ನಾರಿಶಕ್ತಿ ಹೆಚ್ಚುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಇತ್ತೀಚೆಗೆ ಚಾಕುವಿನಿಂದ ನನ್ನ ಮೇಲೆ ಹಲ್ಲೆ ಮಾಡಿದ್ದಾಳೆ. ಅದರಿಂದ ನನ್ನ ಕೈ ಗಾಯವಾಗಿದ್ದು, ರಕ್ತಸ್ರಾವವಾಗಿತ್ತು. ತಮಗೆ ಪತ್ನಿಯಿಂದ ಜೀವ ಬೆದರಿಕೆಯು ಇದೆ ಎಂದು ಫೋಟೊ ಪೋಸ್ಟ್ ಮಾಡಿದ್ದಾರೆ.

ಈ ಘಟನೆ ಸಂಬಂಧ ಪತ್ನಿ ವಿರುದ್ಧ ಅವಳ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ಹಾಕಬಹುದೇ? ಇಲ್ಲ ಎಂದು ಯದುನಂದನ್ ಆಚಾರ್ಯ ಅಳಲು ತೋಡಿಕೊಂಡಿದ್ದಾರೆ.
ಪೊಲೀಸರ ಕಾನೂನು ಕ್ರಮದ ಭರವಸೆ
ಘಟನೆ ಹಾಗೂ ತಮ್ಮ ಪತ್ನಿಯ ದೌರ್ಜನ್ಯ, ಹಲ್ಲೆ ಕುರಿತು ಎಂಜಿನಿಯರ್ ಆಗಿರುವ ಯದುನಂದನ್ ಆಚಾರ್ಯ ಅಕ್ಟೋಬರ್ ನಲ್ಲೇ ಟ್ವಿಟ್ನಲ್ಲಿ ಬರೆದುಕೊಂಡಿದ್ದರು. ರಕ್ತಸ್ರಾವದ ಗಾಯಗೊಂಡ ಕೈ ಪೋಟೊ ಹಂಚಿಕೊಂಡಿದ್ದರು. ಈ ಸಂಬಂಧ ಇತ್ತೀಚೆಗಷ್ಟೇ ಆಚಾರ್ಯ ಅವರಿಗೆ ಪ್ರಧಾನಿ ಕಾರ್ಯಾಲಯ ಸ್ಪಂದಿಸಿ, ದೂರು ಸ್ವೀಕರಿಸಿದೆ.
ಇತ್ತ ಟ್ವೀಟ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಕುಂದುಕೊರತೆಗಳನ್ನು ಪರಿಹರಿಸುವಂತೆ ಕೇಳಿಕೊಂಡಿದ್ದಾರೆ. ಘಟನೆ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಈ ಘಟನೆ ಮೂಲಕ ಯದುನಂದನ್ ಆಚಾರ್ಯ ಅವರು ವಿವಿಧ ರೀತಿಯಲ್ಲಿ ಹಲವರ ಬೆಂಬಲ ಪಡೆದಿದ್ದಾರೆ. ಅದಲ್ಲದೇ ಕಿರುಕುಳಕ್ಕೊಳಗಾದ ಗಂಡಂದಿರ ಸಮಸ್ಯೆಯನ್ನು ಪರಿಹರಿಸುವ ಅಗತ್ಯವನ್ನು ಸಮಾಜಕ್ಕೆ ಎತ್ತಿ ತೋರಿಸಿದ್ದಾರೆ ಎಂದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೂದು ಸ್ವೀಕರಿಸಿರುವ ಪ್ರಧಾನಿ ಕಾರ್ಯಾಲಯ ಪರಿಹಾರ ಕ್ರಮ ಏನು ಸೂಚಿಸಲಿದೆ ಕಾಯು ನೋಡಬೇಕಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications