ಬರಗೂರು ರಾಮಚಂದ್ರಪ್ಪ ಪತ್ನಿ ರಾಜಲಕ್ಷ್ಮಿ ನಿಧನ
ಬೆಂಗಳೂರು, ಏಪ್ರಿಲ್ 08: ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಪತ್ನಿ ಎಸ್. ರಾಜಲಕ್ಷ್ಮಿ ಅವರು ( 66) ಭಾನುವಾರ ನಿಧನರಾದರು.
ಮೂತ್ರಪಿಂಡ ವೈಫಲ್ಯಕ್ಕೆ ಒಳಗಾಗಿದ್ದ ರಾಜಲಕ್ಷ್ಮಿ ಅವರು ಸುಮಾರು 50 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಕಣ್ಣುಗಳನ್ನು ದಾನ ಮಾಡಿದ ರಾಜಲಕ್ಷ್ಮಿ
ಸಾವಿನ ಸಂದರ್ಭದಲ್ಲಿ ಮಾನವೀಯತೆ ಮೆರೆದ ರಾಜಲಕ್ಷ್ಮಿ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ನಟ ಡಾ. ರಾಜಕುಮಾರ್ ಅವರಿಂದ ಸ್ಫೂರ್ತಿ ಪಡೆದಿದ್ದ ರಾಜಲಕ್ಷ್ಮಿ ಅವರು ನೇತ್ರದಾನ ಮಾಡಲು ನಿರ್ಧರಿಸಿದ್ದರು. ಮೂತ್ರಪಿಂಡ ವೈಫಲ್ಯದ ಚಿಕಿತ್ಸೆ ಪಡೆಯುತ್ತಿದ್ದ ಅವರು ನಾಲ್ಕು ಬಾರಿ ಹೃದಯ ಸ್ತಂಭನಕ್ಕೆ ಒಳಗಿದ್ದರು.

ಅಂತರ್ ಜಾತಿ ವಿವಾಹ
ರಾಜಲಕ್ಷ್ಮಿ ಅವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದನಹಳ್ಳಿ ಗ್ರಾಮದಲ್ಲಿ ಜನಿಸಿದ್ದರು, ಬಿ.ಎ. ಪದವಿ ಮತ್ತು ಹಿಂದಿ ವಿದ್ವಾನ್ ಪದವೀಧರರಾಗಿದ್ದರು. ಬರಗೂರು ರಾಮಚಂದ್ರಪ್ಪ ಅವರೊಂದಿಗೆ ಅವರದು ನಾಲ್ಕು ದಶಕಗಳ ದಾಂಪತ್ಯ. ಆಗಿನ ಕಾಲದಲ್ಲಿಯೇ ಅಂತರ್ಜಾತಿ ವಿವಾಹವಾಗಿ ದಿಟ್ಟತನ ಮೆರೆದಿದ್ದರು.
ಕನ್ನಡ ಸಾಹಿತ್ಯ ಪ್ರೇಮಿಯಾಗಿದ್ದ ರಾಜಲಕ್ಷ್ಮಿ, ಜೀವನದುದ್ದಕ್ಕೂ ಬರಗೂರು ರಾಮಚಂದ್ರಪ್ಪ ಅವರ ಸಾಹಿತ್ಯ ಚಟುಚಟಿಕೆಗಳು, ಸಿನಿಮಾ ಮತ್ತು ಸಾಮಾಜಿಕ ಚಳವಳಿಗಳಿಗೆ ಬೆಂಬಲವಾಗಿದ್ದರು.
ಅವರು ಬರಗೂರು ರಾಮಚಂದ್ರಪ್ಪ, ಮಕ್ಕಳಾದ ಮೈತ್ರಿ ಬರಗೂರು, ಸ್ಫೂರ್ತಿ ಬರಗೂರು, ಸೊಸೆ ಪದ್ಮಶ್ರೀ ಮತ್ತು ಮೊಮ್ಮಗ ಆಕಾಂಕ್ಷ್ ಅವರನ್ನು ಅಗಲಿದ್ದಾರೆ.
ಬೆಂಗಳೂರಿನ ಜೆ.ಪಿ. ನಗರದ 2ನೇ ಹಂತದ 11 ಬಿ ಅಡ್ಡರಸ್ತೆಯಲ್ಲಿರುವ ಮನೆ ಸಂಖ್ಯೆ 27ರಲ್ಲಿ ಮೃತದೇಹವನ್ನು ಸೋಮವಾರ ಬೆಳಿಗ್ಗೆಯಿಂದ ಮಧ್ಯಾಹ್ನ 1ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು. ಅಂತ್ಯಕ್ರಿಯೆ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಮಾಹಿತಿಗೆ 9964640890, 9448454872 ಸಂಪರ್ಕಿಸಬಹುದು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications