ಬೆಂಗಳೂರಿನಲ್ಲಿ ಮದ್ಯರಾತ್ರಿ ವಿಸ್ತರಣೆ ಆಗುತ್ತಾ?
ಬೆಂಗಳೂರು, ಏ. 23 : ಪರ ವಿರೋಧ ಚರ್ಚೆಯ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಮೂರು ತಿಂಗಳು ನೈಟ್ ಲೈಫ್ ಗೆ ಸರ್ಕಾರ ಅವಕಾಶ ನೀಡಿತ್ತು. ಸದ್ಯ ಅವಧಿ ಪೂರ್ಣಗೊಳ್ಳುತ್ತ ಬಂದಿದ್ದು, ಈ ಅವಧಿಯನ್ನು ಸರ್ಕಾರ ಕಾಯಂಗೊಳಿಸುವ ಸಾಧ್ಯತೆ ಇದೆ.
ಸದ್ಯ ಉದ್ಯಾನಗರಿ ಬೆಂಗಳೂರಿನಲ್ಲಿ ಸೋಮವಾರದಿಂದ ಗುರುವಾರದ ವರೆಗೆ ರಾತ್ರಿ 11ಗಂಟೆಯವರೆಗೆ ಹೋಟೆಲ್ ಮತ್ತು ಬಾರ್ ತೆರೆದಿರುತ್ತವೆ. ಶುಕ್ರವಾರ ಮತ್ತು ಶನಿವಾರ ರಾತ್ರಿ 1 ಗಂಟೆಯವರೆಗೆ ನಗರದಲ್ಲಿ ಬಾರ್, ರೆಸ್ಟೋರೆಂಟ್ ತೆರೆದಿರಲು ಅನುಮತಿ ನೀಡಲಾಗಿದೆ. ಮಾರ್ಚ್ ನಿಂದ ಈ ವ್ಯವಸ್ಥೆ ಮೂರು ತಿಂಗಳು ಪ್ರಾಯೋಗಿಕವಾಗಿ ಜಾರಿಗೆ ಬಂದಿದೆ.

ಮೂರು ತಿಂಗಳ ನಂತರ ನೈಟ್ ಲೈಫ್ ಅವಧಿ ವಿಸ್ತರಣೆಯ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ಅದನ್ನು ವಿಸ್ತರಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಗೃಹ ಸಚಿವ ಕೆಜೆ ಜಾರ್ಜ್ ಹೇಳಿದ್ದರು. ಸದ್ಯ ನೈಟ್ ಲೈಫ್ ಮೂರು ತಿಂಗಳ ಅವಧಿ ಮೇ 4ರಂದು ಅಂತ್ಯಗೊಳ್ಳಲಿದೆ. [ನೈಟ್ ಲೈಫ್ ವಿಸ್ತರಣೆಗೆ ಬಿಜೆಪಿ ವಿರೋಧ]
ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಗೃಹ ಸಚಿವ ಕೆಜೆ ಜಾರ್ಜ್, ನೈಟ್ ಲೈಫ್ ಜಾರಿಯಾಗಿ ಎರಡು ತಿಂಗಳು ಕಳೆದಿದೆ. ಮೂರು ತಿಂಗಳು ಕಳೆದ ಬಳಿಕ ಪ್ರಗತಿ ಪರಿಶೀಲನೆ ನಡೆಸಲಾಗುವುದು. ನೈಟ್ಲೈಫ್ಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ. ಮೂರು ತಿಂಗಳು ಪ್ರಾಯೋಗಿಕ ಅವಧಿ ಮುಗಿದ ಬಳಿಕ ಬಂದ ದೂರು-ಬೇಡಿಕೆ ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. [ಮದ್ಯರಾತ್ರಿ ವಿಸ್ತರಣೆಗೆ ಸಲಹೆ ನೀಡಿದ್ದು ಯಾರು?]
ಗೃಹ ಸಚಿವರ ಹೇಳಿಕೆಯಂತೆ ಕಳೆದ ಮಾ.4ರಂದು ನೈಟ್ ಲೈಫ್ ವಿಸ್ತರಣೆ ಅವಕಾಶ ನೀಡಿದ ನಂತರ ಬೆಂಗಳೂರಿನಲ್ಲಿ ಅವಘಡಗಳು, ತೊಂದರೆಗಳು ಕಾಣಿಸಿಕೊಂಡಿಲ್ಲ. ಆದ್ದರಿಂದ ಮೇ 4ರ ನಂತರ ಇದನ್ನು ಕಾಯಂಗೊಳಿಸುವ ಸಾಧ್ಯತೆ ಇದೆ. ಮದ್ಯರಾತ್ರಿ ವಿಸ್ತರಣೆ ಮಾಡಿದ ನಂತರ ವಿರೋಧ ವ್ಯಕ್ತಪಡಿಸಿದ್ದ ಪ್ರತಿಪಕ್ಷ ಬಿಜೆಪಿ ಮತ್ತು ವಿವಿಧ ಸಂಘಟನೆಗಳು ಇದಕ್ಕೆ ಅವಕಾಶ ನೀಡುತ್ತವೆಯೇ ಎಂದು ಕಾದು ನೋಡಬೇಕು.
ಹೊಸ ಪ್ರವಾಸೋದ್ಯಮ ನೀತಿಯನ್ನು ರಚಿಸಲು ರಾಜ್ಯ ಸರಕಾರ ಐಟಿ ಉದ್ಯಮಿ ಟಿ ವಿ ಮೋಹನದಾಸ್ ಪೈ ನೇತೃತ್ವದಲ್ಲಿ ರಚಿಸಿದ್ದ ಸಮಿತಿ, ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಾದರೆ ರಾಜಧಾನಿಯಲ್ಲಿ ಪ್ರವಾಸಿಗರಿಗೆ ತಡರಾತ್ರಿಯವರೆಗೂ ಊಟೋಪಚಾರ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಲಾಗಿತ್ತು.
ಸಿಎಂ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮದ್ಯ ರಾತ್ರಿ ವಿಸ್ತರಣೆ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು. ಮಾ.4ರಿಂದ ಮೂರು ತಿಂಗಳ ಅವಧಿಗೆ ಬೆಂಗಳೂರಿನ ನೈಟ್ ಲೈಫ್ ಅನ್ನು ವಿಸ್ತರಣೆ ಮಾಡಲಾಗಿತ್ತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications