ಎನ್.ಆರ್. ರಮೇಶ್ ಮನವೊಲಿಕೆ: ಬಿಎಸ್ವೈ ಹೇಳಿಕೆ
ಬೆಂಗಳೂರು, ಏಪ್ರಿಲ್ 09: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಎನ್.ಆರ್. ರಮೇಶ್ ಅವರ ಮನವೊಲಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೋಮವಾರ ಹೇಳಿದರು.
ಟಿಕೆಟ್ ಕೈತಪ್ಪಿದಾಗ ಆಕಾಂಕ್ಷಿಗಳಲ್ಲಿ ಅಸಮಾಧಾನ ಉಂಟಾಗುವುದು ಸಹಜ. ಈ ಸಂಬಂಧ ಅವರೊಂದಿಗೆ ಚರ್ಚೆ ನಡೆಸಿ ಅವರ ಮನವೊಲಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಟಿಕೆಟ್ ಕೈತಪ್ಪಲು ಸಚಿವ ಅನಂತಕುಮಾರ್ ಕಾರಣ: ಎನ್,ಆರ್. ರಮೇಶ್
ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎನ್.ಆರ್. ರಮೇಶ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದಾಗಿ ಅವರು ಭರವಸೆ ನೀಡಿದರು. ಎಲ್ಲವನ್ನೂ ಸರಿಪಡಿಸಿಕೊಂಡು ಮುಂದೆ ಹೋಗುತ್ತೇವೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಉದ್ಯಮಿ ಉದಯ್ ಗರುಡಾಚಾರ್ ಅವರಿಗೆ ಟಿಕೆಟ್ ನೀಡಲು ಸಚಿವ ಅನಂತಕುಮಾರ್ 2 ಕೋಟಿ ರೂಪಾಯಿ ಹಣ ಪಡೆದುಕೊಂಡಿದ್ದಾರೆ ಎಂದು ಎನ್.ಆರ್. ರಮೇಶ್ ಆರೋಪಿಸಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎನ್.ಆರ್. ರಮೇಶ್ ಹಾಗೆಲ್ಲ ಮಾತನಾಡುವುದಿಲ್ಲ. ಹಾಗೆ ತಪ್ಪು ಗ್ರಹಿಕೆ ಆಗಿದ್ದರೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ತಿಳಿಸಿದರು.