ಬೆಂಗಳೂರು ಮಹಿಳೆಯ ವಾಟ್ಸಪ್ ತಲಾಖ್ ಹೋರಾಟಕ್ಕೆ ಸದಾನಂದಗೌಡ ಸಾಥ್
ಬೆಂಗಳೂರು, ಡಿಸೆಂಬರ್ 10: ಬೆಂಗಳೂರು ಮಹಿಳೆಯ ವಾಟ್ಸಪ್ ತಲಾಖ್ ಹೋರಾಟಕ್ಕೆ ಕೇಂದ್ರ ಸಚಿವ ಡಿವಿ ಸದಾನಂದಗೌಡ ಬೆಂಬಲ ನೀಡಿದ್ದಾರೆ.
ಪತಿಯೊಬ್ಬ ವಾಟ್ಸಪ್ನಲ್ಲಿಯೇ ತಲಾಖ್ ಹೇಳಿ ವಿದೇಶಕ್ಕೆ ಹಾರಿದ್ದ, ಬಳಿಕ ಮಹಿಳೆ ಕೇಂದ್ರ ಸಚಿವ ಡಿವಿ ಸದಾನಂದಗೌಡ , ಹಾಗೆಯೇ ಉತ್ತರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೂ ದೂರು ನೀಡಿದ್ದಾಳೆ. ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದಳು.
ಪತಿಯೊಬ್ಬ ತನ್ನ ಪತ್ನಿಗೆ ವಾಟ್ಸಪ್ನಲ್ಲೇ ತಲಾಖ್ ಹೇಳಿದ್ದಲ್ಲದೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲೇ ಹೆಂಡತಿಯನ್ನು ಬಿಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು.

ಅಮೆರಿಕಾದಲ್ಲಿ ವೈದ್ಯನಾಗಿರುವ ಡಾ. ಜಾವೀದ್ ಖಾನ್ ಪರಾರಿಯಾಗಿರುವ ಪತಿಯಾಗಿದ್ದು ಇವರು ವಾಟ್ಸಪ್ನ ಮೂಲಕ ತಮ್ಮ ಪತ್ನಿ ರೇಷ್ಮಾ ಅಜೀಜ್ ಎಂಬಾಕೆಗೆ ತಲಾಖ್ (ವಿಚ್ಚೇದನ) ನೀಡಿದ್ದನು.
ಬಳಿಕ ಆಕೆಯನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಜಾವೀದ್ ಹಾಗೂ ರೇಷ್ಮಾ 2003ರಲ್ಲಿ ವಿವಾಹವಾಗಿದ್ದರು.ಕೆಲ ಕಾಲ ಇಂಗ್ಲೆಂಡ್ ನಲ್ಲಿ ನೆಲೆಸಿದ್ದ ದಂಪತಿ ಬಳಿಕ ಕುಟುಂಬ ಸಮೇತವಾಗಿ ಅಮೆರಿಕಾಗೆ ಶಿಫ್ಟ್ ಆಗಿದ್ದರು.ದಂಪರ್ತಿಗಳಿಗೆ 13 ವರ್ಷದ ಹೆಣ್ಣುಮಗು, 10 ವರ್ಷದ ಗಂಡು ಮಗುವೂ ಇದೆ.
ಸಂಸಾರ ಚೆನ್ನಾಗಿಯೇ ಸಾಗಿಸುತ್ತಿದ್ದ ಇವರಲ್ಲಿ ಇತ್ತೀಚಿನ ವರ್ಷದಲ್ಲಿ ಜಗಳ, ಅಸಮಾಧಾನ ಮೂಡಿತ್ತು. ಈ ಸಂಬಂಧ ಹಿರಿಯರೊಡನೆ ಚರ್ಚಿಸಿ ಸಮಸ್ಯೆ ಪರಿಹಾರ ಮಾಡಿಕೊಳ್ಳಲು ಮಕ್ಕಳನ್ನು ಅಮೆರಿಕಾದಲ್ಲೇ ಬಿಟ್ಟು ದಂಪತಿಗಳು ಮಾತ್ರ ಬೆಂಗಳೂರಿಗೆ ಆಗಮಿಸಿದ್ದರು.
ಎಮಿರೇಟ್ಸ್ ವಿಮಾನದ ಮೂಲಕ ನವೆಂಬರ್ 30ರಂದು ಬೆಂಗಳೂರಿಗೆ ಇವರು ಆಗಮಿಸಿದ್ದರು. ಈ ನಡುವೆ ಪತಿ ಜಾವೀದ್ ಹೆಂಡತಿ ರೇಷ್ಮಾಳ ಫಾಸ್ ಪೋರ್ಟ್, ಡೆಬಿಟ್, ಕ್ರೆಡಿಟ್ ಕಾರ್ಡ್ ಗಳನ್ನು ತೆಗೆದುಕೊಂಡಿದ್ದಾನೆ.
ಹಾಗೂ ಏರ್ಪೋರ್ಟ್ಗೆ ಆಗಮಿಸಿದ ಬೆನ್ನಿಗೇ ಬೌನ್ಸರ್ಗಳ ಭದ್ರತೆಯಲ್ಲಿ ರೇಷ್ಮಾಳನ್ನು ಬಿಟ್ಟು ತಾನೊಬ್ಬನೇ ಅಮೆರಿಕಾಗೆ ಹಿಂತಿರುಗಿದ್ದಾನೆ. ಅಲ್ಲದೆ ಅಮೆರಿಕಾಗೆ ತೆರಳಿದ ಜಾವೀದ್ ವಾಯ್ಸ್ ಮೆಸೇಜ್ ಮತ್ತು ಟೆಕ್ಸ್ಟ್ ಮೂಲಕ ತಲಾಖ್ ಸಂದೇಶ ರವಾನಿಸಿದ್ದಾನೆ.
ಈ ಕುರಿತು ಸಚಿವರ ಬಳಿ ಅಳಲು ತೋಡಿಕೊಂಡಿದ್ದು ಮಹಿಳೆಯ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಸದಾನಂದಗೌಡ ಭರವಸೆ ನೀಡಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications