ನೈಸ್ ವಿಚಾರದಲ್ಲಿ ಯಾವ ರಾಜಿಯೂ ಇಲ್ಲ ಎಂದ ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 17: ನೈಸ್ ವಿಚಾರದಲ್ಲಿ ಕೆಲವರು ಕುಮಾರಸ್ವಾಮಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ ಆದರೆ ಯಾವ ರಾಜಿಯೂ ಇಲ್ಲ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಸ್ ವಿಚಾರವನ್ನು ಸದನ ಸಮಿತಿ ಇನ್ನೂ ಕೂಡ ಸ್ವೀಕಾರ ಮಾಡಿಲ್ಲ, ವರದಿ ಸ್ವೀಕಾರವಾದ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಆದರೆ ನಮ್ಮ ಮಧ್ಯೆ ಯಾವುದೇ ಹೊಂದಾಣಿಕೆಗೂ ಅವಕಾಶವಿಲ್ಲ ಸುಮ್ಮನೇ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ ಎಂದರು.
ಮೈತ್ರಿ ಸರ್ಕಾರ ಬಂದು ಕೆಲವೇ ತಿಂಗಳುಗಳು ಕಳೆದಿವೆ ಎಲ್ಲವನ್ನೂ ಒಟ್ಟಿಗೆ ಅನುಷ್ಠಾನ ಮಾಡಲು ಸಾಧ್ಯವಿಲ್ಲ ಸ್ವಲ್ಪ ಸಮಯ ಹಿಡಿಯುತ್ತದೆ. ಒಂದೊಂದೇ ಕೆಲಸವನ್ನು ಮಾಡಿಕೊಂಡು ಬರು್ತಿದ್ದೇವೆ, ನೈಸ್ ವಿಚಾರವನ್ನೂ ಗಮನಿಸಿದ್ದೇವೆ, ನೈಸ್ ವಿಚಾರ ಕುರಿತು ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ಅದನ್ನು ನನಗೆ ಕಲಿಸಿದ್ದೇ ಬಿಜೆಪಿ ಎಂದು ಟೀಕಿಸಿದರು.

2006ರಲ್ಲಿ ನೈಸ್ ವಿಚಾರವಾಗಿ ಯೋಜನೆ ರದ್ದುಗೊಳಿಸುವ ಸಂಬಂಧ ಸಂಪುಟ ಸಭೆ ಮುಂದಿಟ್ಟಾಗ, ಆಗಿನ ಡಿಸಿಎಂ ಆದಿಯಾಗಿ 16 ಮಂತ್ರಿಗಳು ಸಭೆಯಿಂದ ದೂರ ಉಳಿದಿದ್ದರು. ಈ ವಿಚಾರದಲ್ಲಿ ಅವರ ಬದ್ಧತೆ ಏನು ಎಂಬುದು ತೋರಿಸುತ್ತದೆ ಎಂದರು. ಮುಂದಿನ ದಿನಗಳಲ್ಲಿನ ನಮ್ಮ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಉತ್ತರ ಕೊಡುತ್ತೇನೆ. ನನಗೆ ಹೊಂದಾಣಿಕೆ ರಾಜಕಾರಣ ಮಾಡುವ ಅಗತ್ಯ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದರು.
ನೈಸ್ ಸದನ ಸಮಿತಿ ವರದಿಯನ್ನು ಸದನ ಇನ್ನೂ ಸ್ವೀಕರಿಸಿಲ್ಲ. ವರದಿ ಸ್ವೀಕಾರವಾದ ಕೂಡಲೇ ಸಮಯಕ್ಕೆ ಸರಿಯಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications