ನೈಸ್ ವಿಚಾರದಲ್ಲಿ ಯಾವ ರಾಜಿಯೂ ಇಲ್ಲ ಎಂದ ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 17: ನೈಸ್ ವಿಚಾರದಲ್ಲಿ ಕೆಲವರು ಕುಮಾರಸ್ವಾಮಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ ಆದರೆ ಯಾವ ರಾಜಿಯೂ ಇಲ್ಲ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಸ್ ವಿಚಾರವನ್ನು ಸದನ ಸಮಿತಿ ಇನ್ನೂ ಕೂಡ ಸ್ವೀಕಾರ ಮಾಡಿಲ್ಲ, ವರದಿ ಸ್ವೀಕಾರವಾದ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಆದರೆ ನಮ್ಮ ಮಧ್ಯೆ ಯಾವುದೇ ಹೊಂದಾಣಿಕೆಗೂ ಅವಕಾಶವಿಲ್ಲ ಸುಮ್ಮನೇ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ ಎಂದರು.
ಮೈತ್ರಿ ಸರ್ಕಾರ ಬಂದು ಕೆಲವೇ ತಿಂಗಳುಗಳು ಕಳೆದಿವೆ ಎಲ್ಲವನ್ನೂ ಒಟ್ಟಿಗೆ ಅನುಷ್ಠಾನ ಮಾಡಲು ಸಾಧ್ಯವಿಲ್ಲ ಸ್ವಲ್ಪ ಸಮಯ ಹಿಡಿಯುತ್ತದೆ. ಒಂದೊಂದೇ ಕೆಲಸವನ್ನು ಮಾಡಿಕೊಂಡು ಬರು್ತಿದ್ದೇವೆ, ನೈಸ್ ವಿಚಾರವನ್ನೂ ಗಮನಿಸಿದ್ದೇವೆ, ನೈಸ್ ವಿಚಾರ ಕುರಿತು ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ಅದನ್ನು ನನಗೆ ಕಲಿಸಿದ್ದೇ ಬಿಜೆಪಿ ಎಂದು ಟೀಕಿಸಿದರು.

2006ರಲ್ಲಿ ನೈಸ್ ವಿಚಾರವಾಗಿ ಯೋಜನೆ ರದ್ದುಗೊಳಿಸುವ ಸಂಬಂಧ ಸಂಪುಟ ಸಭೆ ಮುಂದಿಟ್ಟಾಗ, ಆಗಿನ ಡಿಸಿಎಂ ಆದಿಯಾಗಿ 16 ಮಂತ್ರಿಗಳು ಸಭೆಯಿಂದ ದೂರ ಉಳಿದಿದ್ದರು. ಈ ವಿಚಾರದಲ್ಲಿ ಅವರ ಬದ್ಧತೆ ಏನು ಎಂಬುದು ತೋರಿಸುತ್ತದೆ ಎಂದರು. ಮುಂದಿನ ದಿನಗಳಲ್ಲಿನ ನಮ್ಮ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಉತ್ತರ ಕೊಡುತ್ತೇನೆ. ನನಗೆ ಹೊಂದಾಣಿಕೆ ರಾಜಕಾರಣ ಮಾಡುವ ಅಗತ್ಯ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದರು.
ನೈಸ್ ಸದನ ಸಮಿತಿ ವರದಿಯನ್ನು ಸದನ ಇನ್ನೂ ಸ್ವೀಕರಿಸಿಲ್ಲ. ವರದಿ ಸ್ವೀಕಾರವಾದ ಕೂಡಲೇ ಸಮಯಕ್ಕೆ ಸರಿಯಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications