ಕಳೆದ ವರ್ಷ ಇದೇ ದಿನ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿತ್ತು!
ಈ ಬೇಸಿಗೆಯಲ್ಲಿ ಕಲಬುರಗಿಯನ್ನು ಹಿಂದಕ್ಕೆ ಹಾಕುವುದಕ್ಕೆ ಯಾವ ನಗರ, ಹಳ್ಳಿಗೂ ಸಾಧ್ಯವಿಲ್ಲ ಅಂತ ಕಾಣತ್ತೆ. ಪ್ರತಿದಿನ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಮೇ 5ರಂದು ಅಲ್ಲಿ 41.4 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ದಾಖಲಾಗಿದೆ.
ಬೆಂಗಳೂರು, ಮೇ 06 : ಸರಿಯಾಗಿ 1 ವರ್ಷದ ಹಿಂದೆ ಇದೇ ದಿನ, ಮೇ 6ರಂದು ಬೆಂಗಳೂರಿನಲ್ಲಿ ಧೋಧೋ ಎಂದು ಮಳೆ ಸುರಿದಿತ್ತು. ಬುಕ್ಕನ್ನು ಎದೆಗೆ ಅವಚಿಕೊಳ್ಳುವ ಕಾಲೇಜು ಹುಡುಗಿಯರು ತೊಯ್ದು ತೊಪ್ಪೆಯಾಗಿದ್ದರು. ಇವತ್ತೂ ಮಳೆ ಬರುತ್ತದೆಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಮಳೆ ಬರುತ್ತಾ?
ಏನ್ ಕಥೇನೋ ಗೊತ್ತಿಲ್ಲ. ಆದರೆ, ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಸೂರ್ಯ ನೆತ್ತಿಯನ್ನು ಸುಡುತ್ತಿದ್ದಾನೆ. ಟೆಂಪರೇಚರ್ 34 ಡಿಗ್ರಿ ಸೆಂಟಿಗ್ರೇಡ್. ರಸ್ತೆಯಲ್ಲಿ ಅಡ್ಡಾಡುವ ಜನರು ಅಲ್ಲಲ್ಲಿ ಸಿಗುವ ಗಿಡಮರಗಳ ನೆರಳುಗಳನ್ನು ಹುಡುಕಿಕೊಂಡು ನಿಂತು ದಣಿವಾರಿಸಿಕೊಳ್ಳುತ್ತಿದ್ದಾರೆ. ಜ್ಯೂಸ್, ಎಳನೀರು ವ್ಯಾಪಾರಿಗಳು ಭರ್ಜರಿ ವ್ಯಾಪಾರ ನಡೆಸಿದ್ದಾರೆ. [ಇನ್ನೊಂದು ದಿನದಲ್ಲೇ ಮುಂಗಾರು; ನಲಿದಾಡಲಿ ಬೆಂಗಳೂರು]
ಈ ನಡುವೆ ಕೇಂದ್ರ ಹವಾಮಾನ ಇಲಾಖೆ ನೆತ್ತಿಯ ಮೇಲೆ ಐಸ್ ಇಟ್ಟುಕೊಂಡ ಹಾಗೆ ಸಂತಸದ ಸುದ್ದಿಯೊಂದನ್ನು ಕೊಟ್ಟಿದೆ. ಭಾರತಕ್ಕೆ ಜೂನ್ ಮೊದಲ ವಾರದಲ್ಲೇ ಮುಂಗಾರು ಕಾಲಿಡಲಿದ್ದು, ದಕ್ಷಿಣ ಭಾರತದಲ್ಲಿ ವಾಡಿಕೆಯಂತೆ ಮಳೆಯಾಗಲಿದೆಯಂತೆ. ಈ ಭವಿಷ್ಯ ಹೇಳಿದವರ ಹೊಟ್ಟೆಯೂ ತಣ್ಣಗಿರಲಿ.

ಈ ಬೇಸಿಗೆಯಲ್ಲಿ ಕಲಬುರಗಿಯನ್ನು ಹಿಂದಕ್ಕೆ ಹಾಕುವುದಕ್ಕೆ ಯಾವ ನಗರ, ಹಳ್ಳಿಗೂ ಸಾಧ್ಯವಿಲ್ಲ ಅಂತ ಕಾಣತ್ತೆ. ಪ್ರತಿದಿನ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಮೇ 5ರಂದು ಅಲ್ಲಿ 41.4 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ದಾಖಲಾಗಿದೆ. ಅಲ್ಲಿಯೂ ಮಳೆಯಾಗಲಿದೆ ಎಂದು ಶುಕ್ರವಾರವೇ ಸ್ಕೈಮೆಟ್ ವೆದರ್ ಶುಭನುಡಿದಿದೆ. [ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ]
ಕಲಬುರಗಿಯಲ್ಲಿ ಮಾತ್ರವಲ್ಲ, ದಾವಣಗೆರೆ, ಹಾಸನ, ಉಡುಪಿ, ಕೊಡಗು, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಬೀದರ್, ಚಾಮರಾಜನಗರ, ಬಿಜಾಪುರ, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ರಾಜ್ಯಾದ್ಯಂತ ಮುಂಗಾರುಪೂರ್ವ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ನುಡಿದಿದ್ದಾರೆ.
ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 2 ಸೆಂ.ಮೀ, ಕಲಬುರಗಿಯ ಚಿತ್ತಾಪುರದಲ್ಲಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಜಯಾಪುರದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ವರದಿ ಮಾಡಿದೆ. ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿಸಿದೆ. [ಆಲಿಕಲ್ಲು ಮಳೆಯಲ್ಲಿ ಮಿಂದು ತಂಪಾದ ಬೆಂಗಳೂರು]
ಹವಾಮಾನ ತಜ್ಞರ ಮಾತುಗಳು ನಿಜವಾಗಲಿ ಎಂದು ರಾಜ್ಯದ ಜನರು ಆಸೆಯಿಂದ ನೋಡುತ್ತಿದ್ದಾರೆ. ರಾಜ್ಯ ನೀರಾವರಿ ಸಚಿವರಾಗಿರುವ ಎಂಬಿ ಪಾಟೀಲ್ ಅವರು ಕೂಡ, ಕರ್ನಾಟಕಕ್ಕೆ ವರುಣನ ಕೃಪೆಯಾಗಬೇಕು. ಸತತ ಮೂರು ವರ್ಷಗಳಿಂದ ರಾಜ್ಯ ಬರಗಾರ ಎದುರಿಸುತ್ತಿದೆ. ಈ ವರ್ಷವಾದರೂ ಉತ್ತಮ ಮಳೆಯಾಗಲಿ ಎಂದು ಆಶಿಸಿದ್ದಾರೆ.
ಮುಂಗಾರು ಮಾತ್ರವಲ್ಲ, ಮುಂಗಾರುಪೂರ್ವದಲ್ಲೂ ರಾಜ್ಯದಲ್ಲಿ ಉತ್ತಮ ಮಳೆಯಾಗಬೇಕಾಗಿದೆ. ಜಾನುವಾರುಗಳು ಕುಡಿಯಲು ನೀರಿಲ್ಲದೆ, ಮೇವಿಲ್ಲದೆ ಸಾಯುವ ಸ್ಥಿತಿಗೆ ತಲುಪಿವೆ. ಅಣೆಕಟ್ಟೆಗಳು ನೀರಿಲ್ಲದೆ ಭಣಗುಟ್ಟುತ್ತಿವೆ, ಕೆಲವು ಡೆಡ್ ಸ್ಟೋರೇಜ್ ತಲುಪಿವೆ. ಅಂತರ್ಜಲ ಪಾತಾಳಕ್ಕಿಳಿದಿದೆ. ಕಪ್ಪೆಗಳನ್ನು ಹಿಡಿದು ಮದುವೆ ಮಾಡುವುದೊಂದು ಬಾಕಿಯಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications