ಲಾರಿ ಮುಷ್ಕರ: ಪೆಟ್ರೋಲ್-ಅಡುಗೆ ಅನಿಲಕ್ಕೂ ತಟ್ಟಲಿದೆಯೇ ಬಿಸಿ?
ದಕ್ಷಿಣ ಭಾರತದ ರಾಜ್ಯಗಳ ಲಾರಿ ಮುಷ್ಕರ ಸೋಮವಾರ (ಏಪ್ರಿಲ್ 4) ಐದನೇ ದಿನಕ್ಕೆ ಕಾಲಿರಿಸಿದೆ. ಈ ಮುಷ್ಕರಕ್ಕೆ ಕ್ಯಾಂಟರ್ ಮಾಲೀಕರು ಬೆಂಬಲ ಸೂಚಿಸುವ ಸಾಧ್ಯತೆ ಇದ್ದು, ಪೆಟ್ರೋಲ್-ಡೀಸೆಲ್-ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ
ಬೆಂಗಳೂರು, ಏಪ್ರಿಲ್ 4: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ದಕ್ಷಿಣ ಭಾರತದ ರಾಜ್ಯಗಳ ಲಾರಿ ಮುಷ್ಕರಕ್ಕೆ ಕರೆ ನೀಡಿದ್ದು, ಸೋಮವಾರ (ಏಪ್ರಿಲ್ 4) ಐದನೇ ದಿನಕ್ಕೆ ಕಾಲಿರಿಸಿದೆ. ಥರ್ಡ್ ಪಾರ್ಟಿ ಇನ್ಷೂರೆನ್ಸ್ ಪ್ರೀಮಿಯಂ ಬೆಲೆ ಏರಿಕೆ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವುದಕ್ಕೆ ವಿರೋಧವೂ ಸೇರಿದಂತೆ ಆಯಾ ರಾಜ್ಯಗಳಲ್ಲಿ ಸಮಸ್ಯೆಗಳನ್ನು ನಿವಾರಿಸಬೇಕು ಎಂಬುದು ಒತ್ತಾಯವಾಗಿದೆ. ಕರ್ನಾಟಕದಲ್ಲಿ ಹೊಸದಾಗಿ ಟೋಲ್ ಸಂಗ್ರಹಕ್ಕೆ ಮುಂದಾಗಿರುವುದು ಸರಿಯಲ್ಲ. ಈಗಾಗಲೇ ಟೋಲ್ ಸಂಗ್ರಹಿಸುತ್ತಿರುವುದನ್ನು ಸಹ ನಿಲ್ಲಿಸಬೇಕು ಎಂದು ಮನವಿ ಮಾಡಲಾಗಿದೆ.[ಮರಳು ಮಾಫಿಯಾ ಅಡ್ಡೆ ಮೇಲೆ ದಾಳಿ, ಉಡುಪಿ ಡಿಸಿ ಕೊಲೆ ಯತ್ನ]

ಕರ್ನಾಟಕ, ಆಂಧ್ರ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ ರಾಜ್ಯಗಳ ಲಾರಿ ಮಾಲೀಕರು ಈ ಬಂದ್ ಗೆ ಕರೆ ನೀಡಿದ್ದಾರೆ. ಅಡುಗೆ ಅನಿಲ ಹಾಗೂ ಪೆಟ್ರೋಲ್-ಡೀಸೆಲ್ ಸರಬರಾಜು ಮಾಡುವ ಟ್ಯಾಂಕರ್ ಗಳ ಮಾಲೀಕರನ್ನೂ ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿದ್ದೇವೆ. ಸೋಮವಾರ ಈ ಬಗ್ಗೆ ನಿರ್ಧಾರ ಘೋಷಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘದ ಮೂಲಗಳು ತಿಳಿಸಿವೆ.
ಒಂದು ವೇಳೆ ಟ್ಯಾಂಕರ್ ಗಳ ಮಾಲೀಕರೂ ಮುಷ್ಕರಕ್ಕೆ ಬೆಂಬಲ ಸೂಚಿಸಿದರೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಲಿದೆ. ಇನ್ನು ದಿನ ಬಳಕೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಎಂದೇನೂ ಆಗದಿದ್ದರೂ ತರಕಾರಿ-ಹಣ್ಣುಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಇದು ಗ್ರಾಹಕರಿಗೆ ಹೊರೆಯಾಗಿದೆ.[ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ]
ಈ ಬಗ್ಗೆ ಒನ್ಇಂಡಿಯಾ ಕನ್ನಡದ ಜತೆ ಮಾತನಾಡಿದ ದಿನಸಿ ಮಳಿಗೆ ಮಾಲೀಕರಾದ ಬಿ.ಎಸ್.ವಿಶ್ವನಾಥ್, ಹೌದು ದಿನ ಬಳಕೆ ವಸ್ತುಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ. ಈ ಹಿಂದೆ ನಮಗೆ ಬಾಳೆಹಣ್ಣು ಸಗಟು ದರ 52ಕ್ಕೆ ಸಿಗುತಿತ್ತು. ಅದನ್ನು 56ಕ್ಕೆ ಏರಿಸಲಾಗಿದೆ. ಬಾಳೆಹಣ್ಣನ್ನು ಬೊಲೆರೋ ವಾಹನದಲ್ಲಿ ಸರಬರಾಜು ಮಾಡಲಾಗುತ್ತಿದೆಯಂತೆ. ಅಗತ್ಯ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿಲ್ಲ ಎಂದು ಬೆಲೆ ಹೆಚ್ಚಿಸಿರುವುದಾಗಿ ಹೇಳಿತ್ತಾರೆ ಎಂದು ಅವರು ತಿಳಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications