ಡಿ. 5ರ ಕರ್ನಾಟಕ ಬಂದ್; ಬಿಬಿಎಂಪಿ ಆಯುಕ್ತರಿಂದ ಎಚ್ಚರಿಕೆ
ಬೆಂಗಳೂರು, ಡಿಸೆಂಬರ್ 01: " ಕರ್ನಾಟಕ ಬಂದ್ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿನ ಮಳಿಗೆಗಳನ್ನು ಮುಚ್ಚಿಸುವಂತಿಲ್ಲ. ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚನೆಗೆ ನೀಡಿರುವ ಆದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಡಿಸೆಂಬರ್ 5ರ ಶನಿವಾರ ಕರ್ನಾಟಕ ಬಂದ್ಗೆ ಕನ್ನಡ ಒಕ್ಕೂಟ ಕರೆ ನೀಡಿದೆ.
ಡಿ.5ರ ಕರ್ನಾಟಕ ಬಂದ್; ಮಹತ್ವದ ಸೂಚನೆ ಕೊಟ್ಟ ಹೈಕೋರ್ಟ್
"ಪಾಲಿಕೆ ವ್ಯಾಪ್ತಿಯಲ್ಲಿ ಯಾರೂ ಸಹ ಬಲವಂತದಿಂದ ಬಂದ್ ಮಾಡಿಸುವಂತಿಲ್ಲ. ವ್ಯಾಪಾರಿಗಳಿಗೆ ಕಿರಿಕಿರಿ ನೀಡುವಂತಿಲ್ಲ. ತೊಂದರೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.
ಕರ್ನಾಟಕ ಬಂದ್: ಕರವೇ ನಿಲುವು ಸ್ಪಷ್ಟ ಪಡಿಸಿದ ನಾರಾಯಣ ಗೌಡ್ರು
ಕನ್ನಡ ಪರ ಸಂಘಟನೆಗಳು ಈಗಾಗಲೇ ಬಂದ್ ಮಾಡಲು ಯೋಜನೆ ರೂಪಿಸಿವೆ. ಶನಿವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ. ವಿವಿಧ ಸಂಘಟನೆಗಳು ಈಗಾಗಲೇ ಬಂದ್ಗೆ ಬೆಂಬಲ ನೀಡಿವೆ.
ಡಿ.5ರ ಕರ್ನಾಟಕ ಬಂದ್ ಕರೆ ವಾಪಸ್ ಇಲ್ಲ; ವಾಟಾಳ್ ನಾಗರಾಜ್
ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬಂದ್ ಬಗ್ಗೆ ಮಾಹಿತಿ ನೀಡಿದ್ದಾರೆ. "ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ಮಾಡುತ್ತೇವೆ. ವಿಜಯಪುರದಲ್ಲಿಯೂ ಬಂದ್ ಮಾಡಲಾಗುತ್ತದೆ. ಅದನ್ನು ತಡೆಯಲಿ ನೋಡೋಣ" ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸವಾಲು ಹಾಕಿದ್ದಾರೆ.
Recommended Video
"ಶನಿವಾರ ಓಲಾ, ಊಬರ್ ಸೇವೆ ಇರುವುದಿಲ್ಲ. ಟ್ಯಾಕ್ಸಿ ಸೇವೆ ರದ್ದುಗೊಳ್ಳಲಿದೆ. ಆಟೋಗಳು ಸಹ ಸಂಚಾರ ನಡೆಸುವುದಿಲ್ಲ. ಬಂದ್ಗೆ ಹಲವಾರು ಸಂಘಟನೆಗಳು ಬೆಂಬಲ ನೀಡಿವೆ" ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.