ನರೇಂದ್ರ ಮೋದಿ ಸ್ವಾಗತಿಸಲಿದ್ದಾನೆ ವರುಣ ದೇವ!
ಬೆಂಗಳೂರು, ನ. 16 : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಬೆಂಗಳೂರಿನಲ್ಲಿ ಸ್ವಾಗತಿಸಲು ಬಿಜೆಪಿಯ ಸಾವಿರಾರು ಕಾರ್ಯಕರ್ತರು ಸಜ್ಜಾಗಿದ್ದಾರೆ. ಹಾಗೆಯೇ, ವರುಣ ದೇವ ಸಹ ಮೋದಿ ಸ್ವಾಗತಕ್ಕೆ ಸಜ್ಜಾಗಿದ್ದಾನೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾಗ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಭಾನುವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮರುಣ ದೇವ ಮೋದಿಗೆ ಮಳೆಯ ಸಿಂಚನ ನೀಡುವ ಸಾಧ್ಯತೆ ಇದೆ.

ಶನಿವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವ ಭಾನುವಾರ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಭಾನುವಾರ ನರೇಂದ್ರ ಮೋದಿ ಸಮಾವೇಶದ ಸಮಯದಲ್ಲೇ ಮಳೆ ಬಂದರೆ, ಕಾರ್ಯಕ್ರಮಕ್ಕೂ ತೊಂದರೆ ಆಗುವುದು ಖಚಿತ.
ಭಾನುವಾರ ಮುಂಜಾನೆಯಿಂದಲೇ ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ತುಂತುರು ಮಳೆಯಾಗಲಿದೆ. ಮಧ್ಯಾಹ್ನದ ವೇಳೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. 10 ರಿಂದ 30 ಮಿ.ಮೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ನರೇಂದ್ರ ಮೋದಿ ಸಮಾವೇಶ ನಡೆಯಲಿರುವ ಅರಮನೆ ಮೈದಾನದಲ್ಲಿ ಮೋದಿ ಭಾಷಣ ಮಾಡುವ ವೇದಿಕೆಗೆ ಮಳೆ ಬಂದರೆ ರಕ್ಷಣೆ ದೊರೆಯುತ್ತದೆ. ಆದರೆ, ಸಮಾವೇಶಕ್ಕೆ ಆಗಮಿಸುವ ಮೂರು ಲಕ್ಷಕ್ಕೂ ಅಧಿಕ ಜನರು ಕುಳಿತುಕೊಳ್ಳುವ ಪ್ರದೇಶದಲ್ಲಿ ಯಾವುದೇ ರಕ್ಷಣಾ ವ್ಯವಸ್ಥೆ ಮಾಡಿಲ್ಲ. ಆದ್ದರಿಂದ ಮಳೆ ಸುರಿದರೆ, ಜನರು ಒದ್ದೆಯಾಗಬೇಕಾಗುತ್ತದೆ. (ಮೋದಿ ಅಭಿಮಾನಿಗಳಿಗೆ ಉಪ್ಪಿಟ್ಟು, ಮೈಸೂರ್ ಪಾಕ್)
ಬಂಗಾಳಕೊಲ್ಲಿಯ ಚಂಡಮಾರುತದ ಪ್ರಭಾವ ತಮಿಳುನಾಡು, ಆಂಧ್ರಪ್ರದೇಶದ ದಕ್ಷಿಣ ಭಾಗ, ಕರ್ನಾಟಕದ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದ್ದರಿಂದ ಭಾನುವಾರ ಮೋದಿಗೆ ವರುಣ ಸ್ವಾಗತ ಕೋರುತ್ತಾನೆಯೇ ಎಂದು ಕಾದು ನೋಡಬೇಕು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications