ಬಿಜೆಪಿಗೆ ಬಂದ್ರೆ, ಅಂಬರೀಶ್ ಗೆ ಮಂಡ್ಯದಿಂದ ಸ್ಪರ್ಧಿಸಲು ಟಿಕೆಟ್
ಬೆಂಗಳೂರು, ಜೂನ್ 21: ನಟ ಕಮ್ ರಾಜಕಾರಣಿ ಅಂಬರೀಶ್ ಅವರಿಂದ ವಸತಿ ಸಚಿವ ಸ್ಥಾನವನ್ನು ಕಿತ್ತುಕೊಂಡ ಬಳಿಕ, ಅಂಬರೀಶ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಎಲ್ಲರಿಗೂ ತಿಳಿದಿರಬಹುದು.
ಸಿದ್ದರಾಮಯ್ಯ ಅವರಿಂದ ಕಡೆಗಣಿಸಲ್ಪಟ್ಟ ಪ್ರಮುಖ ನಾಯಕರತ್ತ ಬಿಜೆಪಿ ಹಾಗೂ ಜೆಡಿಎಸ್ ಕಣ್ಣು ಹಾಕಿದೆ. ಅಂಬರೀಶ್ ಅವರು ಒಂದು ವೇಳೆ ಪಕ್ಷಕ್ಕೆ ಬಂದರೆ ಅವರಿಗೆ ಮಂಡ್ಯದಿಂದ ಸ್ಪರ್ಧಿಸಲು ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ.[ಕೈ ವಿರುದ್ಧ ಹಳೇ ಮೈಸೂರಿನಲ್ಲಿ ಬಂಡಾಯದ ಕಹಳೆ]
ಬೆಂಗಳೂರಿನ ಕ್ವೀನ್ಸ್ ವೃತ್ತದ ಬಳಿ ಇರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಚೇರಿ ಇರಬಹುದು ಅಥವಾ ಮಂಡ್ಯದ ಸಂಜಯ್ ವೃತ್ತ ಇರಬಹುದು ಅಂಬರೀಶ್ ಅವರ ಅಭಿಮಾನಿಗಳ ಆಕ್ರೋಶ ಮುಗಿಲು ಮುಟ್ಟಿದೆ. ರೆಬೆಲ್ ಸ್ಟಾರ್ ಅಂಬರೀಶ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಂಡ್ಯದಲ್ಲಿ ಮತ್ತೊಮ್ಮೆ ಚುನಾವಣೆ ನಡೆಯಬೇಕಾಗುತ್ತದೆ. [ರಮ್ಯಾಳನ್ನು ದೂಷಿಸಬೇಡಿ ಎಂದ ಅಂಬರೀಶ್]
ಬಿಜೆಪಿ ಹಾಗೂ ಜೆಡಿಎಸ್ ಈಗಾಗಲೇ ಒಂದು ಸುತ್ತು ಅಂಬರೀಶ್ ಅವರ ಮನೆ ಸುತ್ತಾ ಪ್ರದಕ್ಷಿಣೆ ಹಾಕಿವೆ. ಅಂಬರೀಶ್ ಹಾಗೂ ಶ್ರೀನಿವಾಸ್ ಪ್ರಸಾದ್ ರನ್ನು ಸೆಳೆಯಲು ದೊಡ್ಡ ಮಟ್ಟದ ಪ್ರಯತ್ನಗಳು ನಡೆದಿವೆ. ಇಬ್ಬರು ಕೂಡಾ ಜನಪ್ರಿಯ ನಾಯಕರಾಗಿದ್ದು, ಪಕ್ಷಾತೀತ ಬೆಂಬಲ ಹೊಂದಿರುವುದು ವಿಶೇಷ. ಜೊತೆಗೆ ಇಬ್ಬರು ಕೂಡಾ ಮೂಲ ಕಾಂಗ್ರೆಸ್ಸಿಗರಲ್ಲ.

ಅಂಬರೀಶ್ -ಮುಂದಿನ ನಡೆ ಬಗ್ಗೆ ಏನು ಹೇಳಿಲ್ಲ
ಆದರೆ, ಇಬ್ಬರು ಕೂಡಾ ಕಾಂಗ್ರೆಸ್ ತೊರೆಯುವ ಮಾತನಾಡಿಲ್ಲ, ಅಂಬರೀಶ್ ಅವರು ಸದ್ಯಕ್ಕೆ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವ ಮಾತ್ರ ಉಳಿಸಿಕೊಂಡಿದ್ದರೆ, ಶ್ರೀನಿವಾಸ ಪ್ರಸಾದ್ ಅವರು ನಂಜನಗೂಡಿನ ಶಾಸಕರಾಗಿ ಉಳಿದಿದ್ದಾರೆ. ಅಂಬರೀಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸ್ವೀಕಾರವಾದರೆ, ಮರು ಚುನಾವಣೆ ನಡೆಸಬೇಕಾಗುತ್ತದೆ, ಇದಕ್ಕೆ ಆರು ತಿಂಗಳ ಅವಕಾಶವಿರುತ್ತದೆ.

ಅಂಬರೀಶ್ ರಿಂದ ಒಕ್ಕಲಿಗ ಮತ ಸೆಳೆಯಲು ಯತ್ನ
ಎಂಎಚ್ ಅಂಬರೀಶ್ ಅವರು ಒಕ್ಕಲಿಗ ಸಮುದಾಯದ ನಾಯಕರಾಗಿದ್ದು, ಅವರ ಮಾತಿಗೆ ಬೆಲೆ ಇದೆ. ಹೀಗಾಗಿ ಅವರನ್ನು ಸೆಳೆದರೆ ಮಂಡ್ಯ, ಮೈಸೂರು ಪ್ರದೇಶದ ಒಕ್ಕಲಿಗರ ಮತಗಳು ಸುಲಭವಾಗಿ ದಕ್ಕುವುದು ಎಂಬ ಆಲೋಚನೆಯೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಂದಿನ ಹೆಜ್ಜೆ ಇಟ್ಟಿದ್ದಾರೆ.

ಹಳೆ ಮೈಸೂರು, ಮಂಡ್ಯ ಕ್ಷೇತ್ರಗಳ ಮೇಲೆ ವಿಪಕ್ಷಗಳ ಕಣ್ಣು
ಲಿಂಗಾಯತ ಮತಗಳು, ನಾಯಕ ಜನಾಂಗದ ಮತಗಳ ಮೇಲೆ ನಂಬಿಕೆ ಉಳಿಸಿಕೊಂಡಿರುವ ಬಿಜೆಪಿ, ಜೆಡಿಎಸ್ ನ ಭದ್ರಕೋಟೆಗೆ ಲಗ್ಗೆ ಇಡಲು ಸಜ್ಜಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಸ್ತಿತ್ವ ಸ್ಥಾಪಿಸಲು ಈ ಕಾರ್ಯತಂತ್ರ ಅನಿವಾರ್ಯವಾಗಿದೆ.

ಜೆಡಿಎಸ್ ತನ್ನ ಭದ್ರಕೋಟೆ ಒಡೆಯಲು ಬಿಡುವುದೇ?
ಇನ್ನೊಂದೆಡೆ ಜೆಡಿಎಸ್ ಕೂಡಾ ಪ್ರತಿತಂತ್ರ ಹೂಡುತ್ತಿದ್ದು, ಜೆಡಿಎಸ್ ಗೆ ಮರಳುವಂತೆ ಅಂಬರೀಶ್ ಗೆ ಆಹ್ವಾನ ನೀಡಿದೆ. ಎಲ್ಲವೂ ಫೋನ್ ಮೂಲಕ ಮಾತುಕತೆ ನಡೆದಿದ್ದರೂ ಮುಂದಿನ ದಿನಗಳಲ್ಲಿ ಅಧಿಕೃತ ಆಹ್ವಾನ ಅಂಬರೀಶ್ ಅವರನ್ನು ಹುಡುಕಿಕೊಂಡು ಬರುವ ನಿರೀಕ್ಷೆಯಿದೆ. ಹಳೆ ಮೈಸೂರಿನಿಂದ ಬೆಂಗಳೂರು ತನಕ ಜೆಡಿಎಸ್ ಈಗಾಗಲೇ ತಕ್ಕಮಟ್ಟಿನ ಹೊಡೆತ ಅನುಭವಿಸಿದೆ. ಚೆಲುವರಾಯಸ್ವಾಮಿ ಬಂಡಾಯದ ನಂತರ ಮಂಡ್ಯದಲ್ಲಿ ಸಮಾವೇಶ ನಡೆಸಲು ಮುಂದಾಗಿದೆ.

ಸಿದ್ದರಾಮಯ್ಯ ಅವರ ನಡೆಗೆ ತಂತ್ರ ರೂಪಿಸಬೇಕಿದೆ
ಸಚಿವ ಸಂಪುಟ ವಿಸ್ತರಣೆಯಲ್ಲಿ ಲಿಂಗಾಯತ ನಾಯಕರಿಗೆ ಪ್ರಾಶಸ್ತ್ಯ ನೀಡುವ ಮೂಲಕ ಸಿದ್ದರಾಮಯ್ಯ ಅವರು ಈಗಾಗಲೆ ಪ್ರತಿಪಕ್ಷಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಇದಕ್ಕೆ ತಕ್ಕ ಉತ್ತರ ನೀಡಲು ಒಕ್ಕಲಿಗರ ನಾಯಕ ಅಂಬರೀಶ್ ಹಾಗೂ ದಲಿತ ಸಮುದಾಯದ ಶ್ರೀನಿವಾಸ್ ಪ್ರಸಾದ್ ರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ. ಸಿದ್ದರಾಮಯ್ಯ ಅವರ ನಡೆಗೆ ಈಗ ತಕ್ಕ ಉತ್ತರ ನೀಡಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಬೇಕ್ದಿಎ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications