ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್ಡಿಕೆಗೆ ಮೈತ್ರಿ ಧರ್ಮ ಕಲಿಸುತ್ತೇನೆ ಎಂದು ಗುಡುಗಿದ ಸಿದ್ದರಾಮಯ್ಯ

By Nayana
|
Google Oneindia Kannada News

ಬೆಂಗಳೂರು, ಜು.19: ವಿವಿ ಸಿಂಡಿಕೇಟ್‌ ನಾಮನಿರ್ದೇಶಿತ ಸದಸ್ಯರ ವಾಪಸ್‌ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಈ ಕುರಿತು ಕೆಲವು ಸಿಂಡಿಕೇಟ್‌ ಸದಸ್ಯರಿಗೆ ಕರೆ ಮಾಡಿ ಮಾತನಾಡಿದ್ದು, ಸಮ್ಮಿಶ್ರ ಸರ್ಕಾರ ಧರ್ಮ ಪಾಲಿಸುತ್ತಿಲ್ಲ, ಎಚ್‌ಡಿಕೆಗೆ ಸಮ್ಮಿಶ್ರ ಸರ್ಕಾರದ ಧರ್ಮವನ್ನು ಹೇಳಿಕೊಡುತ್ತೇನೆ ಎಂದು ಹೇಳಿದ್ದಾರೆ, ಜತೆಗೆ ಇದರಲ್ಲಿ ನಮ್ಮ ಪಕ್ಷದ ಬೆಂಬಲವಿದೆ, ನನಗೆ ಗೊತ್ತಿದೆ ಈ ವಿಚಾರವನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಿದ್ದರಾಮಯ್ಯ ಆರ್ಥಿಕ ನೆರವುಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಿದ್ದರಾಮಯ್ಯ ಆರ್ಥಿಕ ನೆರವು

ಕಾಂಗ್ರೆಸ್‌ ಪಕ್ಷದ ಇಬ್ಬರು ನಾಯಕರೇ ಇದಕ್ಕೆ ಹೊಣೆ ಎಂದು ಡಿಸಿಎಂ ಜಿ ಪರಮೇಶ್ವರ್‌ ಹಾಗೂ ಸಚಿವ ಡಿಕೆ ಶಿವಕುಮಾರ್‌ ವಿರುದ್ಧ ಹರಿಹಾಯ್ದಿದ್ದಾರೆ. ಎಲ್ಲರಿಗೂ ಅಧಿಕಾರ ಮುಖ್ಯವಾಗಿದೆ ಆದರೆ ಅಧಿಕಾರ ಒಂದೇ ಅಲ್ಲ ಪಕ್ಷವೂ ಕೂಡ ಮುಖ್ಯವಾದದ್ದು, ಅಧಿಕಾರದಾಸೆಗೆ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಕುಮಾರಸ್ವಾಮಿ ಹೇಳಿದಂತೆ ಕುಣಿಯುತ್ತಿದ್ದಾರೆ, ಸಮನ್ವಯ ಸಮಿತಿ ಸಭೆಯಲ್ಲಿ ಮೈತ್ರಿ ಪಾಲನೆ ಬಗ್ಗೆ ತಿಳಿಸುತ್ತೇನೆ ಎಂದಿದ್ದಾರೆ.

Will teach coalition Dharma: Siddaramaiah warns HDK

ಸಿಂಡಿಕೇಟ್‌ ಸದಸ್ಯರನ್ನು ಹಿಂಪಡೆಯದಂತೆ ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಪತ್ರ ಬರೆದಿದ್ದರು ಆದರೆ ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ, ಸದಸ್ಯರನ್ನು ಹಿಂಪಡೆಯಲಾಗಿದ್ದು ಈ ಕುರಿತು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

English summary
Former chief minister siddaramaiah is very upset with the govt regarding new syndicate members. He warns the chief minister that will teach coalition dharma in next coordination meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X