ಧರಣಿ ವೇದಿಕೆಯಲ್ಲಿ ಕುಗ್ಗುತ್ತಿರುವ ಯಡಿಯೂರಪ್ಪ ಬಲ
ಬೆಂಗಳೂರು, ನ.15: ಶಾದಿ ಭಾಗ್ಯ ವಿಸ್ತರಣೆ, ಎಪಿಎಲ್ ಗೂ ಪಡಿತರ ವಿಸ್ತರಣೆ ಜತೆಗೆ ತಾಜಾ ಆಗಿ ಅಹಿಂದ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಸರ್ಕಾರ ಪ್ರವಾಸ ಭಾಗ್ಯ ನೀಡುವುದನ್ನು ವಿರೋಧಿಸಿ ವೀರಾವೇಶದಿಂದ ಹೋರಾಡುತ್ತಿರುವ ಕೆಜೆಪಿಯ ಅದ್ವಿತೀಯ ನಾಯಕ/ ಮಾಜಿ ಸಿಎಂ ಯಡಿಯೂರಪ್ಪ ಅವರ ಬಲ ಕುಗ್ಗುತ್ತಿದೆಯೇ?
ಸಿದ್ದರಾಮಯ್ಯನವರ ರಾಜಕೀಯ-ಪ್ರೇರಿತ ಅಗ್ಗದ ಯೋಜನೆಗಳಿಗೆ ಅವರದೇ ಪಕ್ಷದಿಂದ ವಿರೋಧ ವ್ಯಕ್ತವಾಗುತ್ತಿರುವುದರ ಜತೆಗೆ ಯಡಿಯೂರಪ್ಪ ಅವರೂ ಮಗ್ಗಲು ಮುಳ್ಳಾಗಿ ಪರಿಣಮಿಸಿದ್ದರಿಂದ ಪೊಲೀಸ್ ಬಲ ಪ್ರಯೋಗಿಸಿ ಯಡಿಯೂರಪ್ಪ ಅವರನ್ನು ಮಣಿಸುವ ಯತ್ನ ಜಾರಿಯಟ್ಟಿಲ್ಲಿರುವ ಸಂದರ್ಭದಲ್ಲೇ ಯಡಿಯೂರಪ್ಪ ಅವರೊಗೆ ಅವರದ್ದೇ ಪಕ್ಷದ ನಾಯಕರು ಒಬ್ಬೊಬ್ಬರಾಗಿ ಕೈಕೊಡುತ್ತಿದ್ದಾರೆ.

ಶೇಷಾದ್ರಿ ರಸ್ತೆಯ ಗಾಂಧಿ ಪ್ರತಿಮೆ ಎದುರು ಯಡಿಯೂರಪ್ಪ ಅವರ ಧರಣಿ ವೇದಿಕೆಯಲ್ಲಿ ಬೆರಳೆಣಿಕೆಯೆ ಅತ್ಯಾಪ್ತರನ್ನು ಬಿಟ್ಟರೆ ಬೇರೆ ಯಾರೂ ಸುಳಿಯುತ್ತಿಲ್ಲ. ಇದನ್ನು ಮರೆಮಾಚಲು ಎಂಬಂತೆ ಯಡಿಯೂರಪ್ಪನವರೂ ತಮ್ಮ ಲೊಕೇಶನ್ ಅನ್ನು ಬೆಳಗಾವಿಗೆ ಶಿಫ್ಟ್ ಮಾಡಲು ನಿರ್ಧರಿಸಿದ್ದಾರೆ. ನ. 24ರವರೆಗೆ ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದು, ನ. 25ರಿಂದ ವಿಧಾನಸಭೆ ಅಧಿವೇಶನದಲ್ಲಿ ಧರಣಿ ನಡೆಸುತ್ತೇನೆ. ಬೇಡಿಕೆ ಈಡೇರುವವರೆಗೂ ಧರಣಿ ಕೈಬಿಡುವುದಿಲ್ಲ ಎಂದಿದ್ದಾರೆ.
ಇರುವ ನಾಲ್ಕು ಕೆಜೆಪಿ ಶಾಸಕರ ಪೈಕಿ ಮೂವರು ತೋರಿಕೆಗಷ್ಟೇ ಧರಣಿ ಜಾಗಕ್ಕೆ ಬಂದು ಅಟೆಂಡೆನ್ಸ್ ಹಾಕಿಹೋಗಿದ್ದಾರೆ. ಹಿರೇಕೆರೂರು ಶಾಸಕ ಯುಬಿ ಬಣಕಾರ್ ಅವರನ್ನು ಹೊರತುಪಡಿಸಿ ಉಳಿದವರು ತಮ್ಮ ಕ್ಷೇತ್ರಗಳತ್ತ ಅದಾಗಲೇ ಮರಳಿದ್ದಾರೆ. ಅಳಂದ ಶಾಸಕ ಬಿಆರ್ ಪಾಟೀಲ್ ಅವರಂತೂ ಧರಣಿಯತ್ತ ಸುಳಿದೇ ಇಲ್ಲ.
ಇನ್ನು, ಬೀದರ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ, ಶಹಾಪುರ ಶಾಸಕ ಗುರುಪಾಟೀಲ್ ಹಾಗೂ ಬೈಲಹೊಂಗಲ ಶಾಸಕ ಡಾ ವಿಶ್ವನಾಥ ಪಾಟೀಲ್ ಅವರು ಅಪರೂಪಕ್ಕೊಮ್ಮೆ ಯಡಿಯೂರಪ್ಪ ಜತೆ ಧರಣಿ ಕುಳಿತು ಸಹಮತ ವ್ಯಕ್ತಪಡಿಸಿದ್ದಾರೆ.
ಹಾಗಾಗಿ ಕೆಜೆಪಿ ವತಿಯಿಂದ ಹೋರಾಟ ನಡೆಸುತ್ತಿರುವ ಯಡಿಯೂರಪ್ಪನವರಿಗೆ ಅವರದೇ ಪಕ್ಷದಿಂದ ಹೆಚ್ಚು ಬೆಂಬಲ ವ್ಯಕ್ತವಾಗುತ್ತಿಲ್ಲ ಎಂಬುದು ಎದ್ದುಕಾಣುತ್ತಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications