ಮಹಿಳೆ ಮೇಲೆ ದೌರ್ಜನ್ಯ: ಬೆಂಗಳೂರಿನಲ್ಲಿ ಯೆಮೆನ್ ಪ್ರಜೆಯ ಬಂಧನ
ಬೆಂಗಳೂರು, ಜನವರಿ 18: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಯೆಮೆನ್ ದೇಶದ ಪ್ರಜೆಯೂ ಸೇರಿದ್ದಾರೆ. ಮಹಿಳೆ ನೀಡಿದ ದೂರಿನ ಹಿನ್ನಲೆಯಲ್ಲಿ ಪೊಲೀಸರು ಈ ಬಂಧನ ನಡೆಸಿದ್ದಾರೆ.
ಈ ಹಿಂದೆ ಹೊಸ ವರ್ಷದ ದಿನ ಬೆಂಗಳೂರಿನ ಬ್ರಿಗೇಡ್ ಮತ್ತು ಎಂ.ಜಿ ರಸ್ತೆಯಲ್ಲಿ ಸಮೂಹಿಕ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನುವ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿತ್ತು.[ಒಂದು ಹಗ್, ಕಿಸ್ ಗಾಗಿ ನಡೆದಿತ್ತಾ ಕಮ್ಮನಹಳ್ಳಿ ಕಿರುಕುಳ?]
ಬಾಣಸವಾಡಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಮಹಿಳೆಯೊಬ್ಬರು ಜನವರಿ 15 ರಂದು ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.

ಮಹಿಳೆಯು ತನ್ನ ದೂರಿನಲ್ಲಿ, "ತಾನು ಜನವರಿ 13ರಂದು ರಾತ್ರಿ ಪಬ್ಬಿಗೆ ಹೋಗಿದ್ದೆ. ಅಲ್ಲಿ ನಾನು ಕುಡಿದಿದ್ದರಿಂದ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ನಾನು ಮರುದಿನ ಬೆಳಿಗ್ಗೆ ಏಳುವಾಗ ಮಹಿಳೆಯೊಬ್ಬರಿದ್ದ ಅಪಾರ್ಟ್ಮೆಂಟಿನಲ್ಲಿದ್ದೆ. ಆಕೆ ನನಗೆ, ನಿನ್ನನ್ನು ಇಬ್ಬರು ವ್ಯಕ್ತಿಗಳು ಮಧ್ಯರಾತ್ರಿ ರಸ್ತೆಯಲ್ಲಿ ಬಿಟ್ಟು ಹೋಗಿದ್ದಾಗಿ ತಿಳಿಸಿದರು," ಎಂಬುದಾಗಿ ಬರೆದಿದ್ದಾರೆ.[ಕಮ್ಮನಹಳ್ಳಿ ಕಾಮುಕರ ವಿರುದ್ಧ ಸಂತ್ರಸ್ತೆ ನುಡಿದಿದ್ದೇನು?]
ಘಟನೆ ನಡೆದ ಒಂದು ದಿನದ ಬಳಿಕ ತನ್ನ ದೇಹದಲ್ಲಿ ಗಾಯವಾಗಿರುವುದು ಮತ್ತು ನೋವಾಗುತ್ತಿರುವುದನ್ನು ಗಮನಿಸಿದ ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಮಹಿಳೆಯನ್ನು ರಕ್ಷಿಸಿದಾಕೆ ನೀಡಿದ ಮಾಹಿತಿ ಮೇರೆಗೆ ಇಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಮಹಿಳೆ ಶಂಕಿಸಿ ಪೊಲೀಸರಿಗೆ ದೂರು ನೀಡಿದ್ದರು.
ದೂರುದಾರ ಮಹಿಳೆಯ ಹೇಳಿಕೆ ಮತ್ತು ಸ್ಥಳೀಯ ಗುಪ್ತಚರ ಮಾಹಿತಿಯ ಮೇರೆಗೆ ಇಬ್ಬರನ್ನು ಪೊಲೀಸರು ಬೆನ್ನತ್ತಿ ಬಂಧಿಸಿದ್ದಾರೆ. ಬಂಧಿತರನ್ನು ರಿಕ್ಕಿ ಮತ್ತು ಅಯುಬ್ ಎಂದು ಗುರುತಿಸಲಾಗಿದೆ.[ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ ಮೈದುನ ನಾದಿನಿ ಜೋಡಿ]
ಬಂಧಿತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ತಾವು ಮಹಿಳೆಯನ್ನು ಕರೆದುಕೊಂಡು ಬಂದುದಾಗಿಯೂ, ಮಹಿಳೆ ಕಿರುಚಿಕೊಂಡ ಹಿನ್ನಲೆಯಲ್ಲಿ ಆಕೆಯನ್ನು ಕಮ್ಮನಹಳ್ಳಿಯಲ್ಲಿ ಕಾರಿನಿಂದ ಕೆಳಕ್ಕೆ ತಳ್ಳಿರುವುದಾಗಿಯೂ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆರೋಪಿಗಳು ಮಹಿಳೆಯನ್ನು ವಾಪಸ್ ಮನೆಗೆ ಬಿಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.[ಎಸಿ ಪತ್ನಿ ಜೊತೆ 15 ಜನರ ದುರ್ವರ್ತನೆ, ಒಬ್ಬ ಬಂಧನ]
ಇಬ್ಬರೂ ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 354 ಮತ್ತು 273ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳೆಯನ್ನು ಕರೆದೊಯ್ಯಲು ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications