ಸಭ್ಯವಾದ ಬಟ್ಟೆ ಹಾಕಮ್ಮ ಎಂದು ಸಲಹೆ ನೀಡಿದ ಹೋಂಗಾರ್ಡ್ ಮೇಲೆ ಹಲ್ಲೆ, ಯುವತಿ ಬಂಧನ
ಬೆಂಗಳೂರು: ಸಭ್ಯ ಉಡುಪು ಧರಿಸುವಂತೆ ಸಲಹೆ ನೀಡಿದ್ದ ಮಹಿಳಾ ಹೋಂಗಾರ್ಡ್ ಮೇಲೆ ಯುವತಿ ನಡುರಸ್ತೆಯಲ್ಲೇ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಆರೋಪದಡಿ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವತಿಯನ್ನು ದಾಮಿನಿ ಅಲಿಯಾಸ್ ಮೋಹಿನಿ ಎಂದು ಗುರುತಿಸಲಾಗಿದ್ದು, ಅವರು ಮಹದೇವಪುರದ ನಾರಾಯಣಪುರ ನಿವಾಸಿ ಎಂದು ತಿಳಿದುಬಂದಿದೆ.
ದಾಮಿನಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ನಿಯೋಜಿತ ಹೋಂಗಾರ್ಡ್ ಲಕ್ಷ್ಮೀನರಸಮ್ಮ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡ ಲಕ್ಷ್ಮೀನರಸಮ್ಮ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಯುವತಿಗೆ ಚುಡಾಯಿಸಿದ್ದ ಕಿಡಿಗೇಡಿಗಳು
ಪೊಲೀಸರ ಮಾಹಿತಿ ಪ್ರಕಾರ, ನಗರದ ಕೆ.ಆರ್.ಪುರ ರೈಲು ನಿಲ್ದಾಣದ ಸಮೀಪ ದಾಮಿನಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಕೆಲ ಕಿಡಿಗೇಡಿಗಳು ಅವರ ಉಡುಪಿನ ಕುರಿತು ಅಸಭ್ಯ ಟೀಕೆಗಳನ್ನು ಮಾಡಿದ್ದರು. ಆಗ ಹತ್ತಿರದಲ್ಲೇ ಸಮೀಪದಲ್ಲೇ ಸಂಚಾರ ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಲಕ್ಷ್ಮೀನರಸಮ್ಮ ಅವರು ಮಧ್ಯಪ್ರವೇಶಿಸಿ, ಕಿಡಿಗೇಡಿಗಳನ್ನು ಅಲ್ಲಿಂದ ಓಡಿಸಿದ್ದರು.
ನಂತರ, ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಸಭ್ಯವಾದ ಬಟ್ಟೆ ಧರಿಸುವಂತೆ ಹಾಗೂ ಭಾರಿ ವಾಹನ ಸಂಚಾರ ಇರುವ ಕಾರಣ ರಸ್ತೆಯಲ್ಲಿ ನಡೆದು ಹೋಗಬೇಡಿ ಎಂದು ದಾಮಿನಿಗೆ ಸಲಹೆ ನೀಡಿದ್ದರು. ಈ ಮಾತುಗಳಿಂದ ಕೋಪಗೊಂಡ ದಾಮಿನಿ, ಏಕಾಏಕಿ ಲಕ್ಷ್ಮೀನರಸಮ್ಮ ಮೇಲೆ ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ.
ಹಲ್ಲೆ ತೀವ್ರವಾಗಿದ್ದರಿಂದ ಲಕ್ಷ್ಮೀನರಸಮ್ಮ ಅವರ ಮುಖ ಮತ್ತು ಮೂಗಿನ ಭಾಗದಲ್ಲಿ ರಕ್ತಸ್ರಾವಾಗಿ ಗಾಯಗಳಾಗಿವೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ದಾಮಿನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲಕ್ಷ್ಮೀನರಸಮ್ಮ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದಾಮಿನಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ನ್ಯಾಯಾಲಯವು ಆರೋಪಿಯನ್ನು ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸರ ಹೇಳಿಕೆಯಂತೆ, ದಾಮಿನಿ ತಾವು ಮಾಲ್ಡೀವ್ಸ್ನಲ್ಲಿ ಶಾಲಾ ಶಿಕ್ಷಣ ಪಡೆದು, ಬಳಿಕ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎಂ ಪದವಿ ಪೂರ್ಣಗೊಳಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈ ಘಟನೆ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ. ಈ ಹಲ್ಲೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಸಭ್ಯ ಟೀಕೆಗಳು ಮತ್ತು ಕಿರುಕುಳ ಇನ್ನೂ ಕಡಿಮೆಯಾಗಿಲ್ಲ ಎಂಬುದು ಈ ಘಟನೆಯಿಂದ ಗೊತ್ತಾಗುತ್ತದೆ. ರಸ್ತೆ ಮೇಲೆ ನಡೆಯುವ ಮಹಿಳೆಗೆ ಉಡುಪಿನ ನೆಪದಲ್ಲಿ ಟೀಕೆ ಮಾಡುವ ಮನೋಭಾವನೆ, ಮಹಾನಗರವಾಗಿರುವ ಬೆಂಗಳೂರಿಗೂ ಇನ್ನೂ ದೊಡ್ಡ ಸವಾಲಾಗಿಯೇ ಉಳಿದಿದೆ. ಇನ್ನೊಂದೆಡೆ, ಕರ್ತವ್ಯ ನಿರ್ವಹಿಸುತ್ತಿದ್ದ ಹೋಂಗಾರ್ಡ್ ಮೇಲೆ ಹಲ್ಲೆ ನಡೆದಿರುವುದು ಕಾನೂನು ಮತ್ತು ಶಿಸ್ತಿಗೆ ಗೌರವ ಕಡಿಮೆಯಾಗುತ್ತಿರುವ ಸಂಕೇತವಾಗಿದೆ. ಸಾರ್ವಜನಿಕ ಶಾಂತಿ ಕಾಪಾಡಲು ಮುಂದಾದ ಸಿಬ್ಬಂದಿಯೇ ಹಲ್ಲೆಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.
-
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications