ರಾಮನಗರ ಮಹಿಳೆ ಕಿಡ್ನಿಯನ್ನೇ ಕಿತ್ತುಕೊಂಡ ಸಾಲದ ಹೊರೆ
ಬೆಂಗಳೂರು, ಜುಲೈ, 10 : ಸಾಲದ ಶೂಲ ತಲೆ ಮೇಲೆ ಹತ್ತಿ ಕುಳಿತು ತೀರಸಲಾಗದಿದ್ದರೆ ನಾವೇನು ಮಾಡುತ್ತೇವೆ? ಒಂದು ಮನೆ ಮಾರುತ್ತೇವೆ, ಇಲ್ಲಾ ಅಂದ್ರೆ ಬೆಲೆಬಾಳುವ ಒಡವೆ ಇದ್ರೆ ಅದನ್ನು ಒತ್ತೆ ಇಡುತ್ತೇವೆ..ಆದರೆ ಇಲ್ಲೊಬ್ಬ ಮಹಿಳೆ 3 ಲಕ್ಷ ಸಾಲ ತೀರಿಸಲಿಕ್ಕೆ ತನ್ನ ಮೂತ್ರಪಿಂಡವನ್ನೇ ಮಾರಾಟ ಮಾಡಿದ್ದಾಳೆ! ಅದು ಮನೆ ಕಟ್ಟಲೋ ಅಥವಾ ಮಗಳ ಮದುವೆ ಮಾಡಲೋ ಮಾಡಿಕೊಂಡಿದ್ದ ಸಾಲವಲ್ಲ. ಗ್ರಾಮಪಂಚಾಯಿತಿ ಎಲೆಕ್ಷನ್ ಗೆ ಮಾಡಿಕೊಂಡಿದ್ದ ಸಾಲ.
ಸಾಲ ತೀರಿಸಲು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶಶಿಕಲಾ ತನ್ನ ಕಿಡ್ನಿಯನ್ನೇ ಮಾರಿದ್ದಾಳೆ. ಈಕೆ 3 ವರ್ಷಗಳ ಹಿಂದೆ ತಗ್ಗಿ ಕೊಪ್ಪೆ ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಳು. ಆದರೆ 2 ಮತಗಳ ಅಂತರದಲ್ಲಿ ಸೋಲುಂಡ ಆಕೆ ಚುನಾವಣೆಗೆ ಖರ್ಚು ಮಾಡಿದ್ದು ಬರೋಬ್ಬರಿ 7 ಲಕ್ಷ. ಈ ಸಾಲ ತೀರಿಸಲು ಸ್ನೇಹಿತನನ್ನೇ ಗಂಡನೆಂದು ಬಿಂಬಿಸಿ ಒಂದು ಮೂತ್ರಪಿಂಡ ಮಾರಿಕೊಂಡಿದ್ದಳು.[ಹೆತ್ತ ಮಗನಿಗೆ ಪುನರ್ಜನ್ಮ ನೀಡಿದ ಮಹಾತಾಯಿ]

ಸಾಲದ ಸುಳಿಯಲ್ಲಿ ಸಿಲುಕಿದ್ದ ಶಶಿಕಲಾ ಅವರಿಗೆ ಬೆಂಗಳೂರಿನ ಶ್ರೀನಿವಾಸ್ ಎಂಬುವವರ ಪರಿಚಯವಿತ್ತು. ಈತನ ತಾಯಿಯ ಮೂತ್ರಪಿಂಡ ವಿಫಲವಾಗಿರುವ ವಿಚಾರ ತಿಳಿದ ಈಕೆ ಸ್ವಯಂ ಪ್ರೇರಣೆಯಿಂದ ಮೂತ್ರಪಿಂಡ ಮಾರುವ ನಿರ್ಧಾರ ತೆಗೆದುಕೊಂಡಳು. ಶಶಿಕಲಾ ತನ್ನ ಪತ್ನಿ ಎಂದು ನಕಲಿ ದಾಖಲೆ ಸೃಷ್ಟಿಸಿದ ಶ್ರೀನಿವಾಸ್ ಮೈಸೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮೂತ್ರಪಿಂಡವನ್ನು ತನ್ನ ತಾಯಿಗೆ ಕಸಿ ಮಾಡಿಸಿದ್ದಾರೆ.[ಹಿಂದೂ ಕಿಡ್ನಿ ಮುಸ್ಲಿಂಗೆ, ಮುಸ್ಲಿಂ ಕಿಡ್ನಿ ಹಿಂದೂಗೆ!]
ನಾಗಶೆಟ್ಟಿಹಳ್ಳಿ ಕಾಲೋನಿಯ ಮಹಿಳೆ ಮೂತ್ರಪಿಂಡ ಮಾರಾಟ ಪ್ರಕರಣದ ತನಿಖೆ ನಡೆಸಲು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದ್ದೇನೆ' ಎಂದು ರಾಮನಗರ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದ್ದಾರೆ
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications