ಬಾಯ್ಫ್ರೆಂಡ್ ಬೆಂಗಳೂರು ಬಿಟ್ಟು ಹೋಗದಂತೆ ತಡೆಯಲು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ಯುವತಿ; ಮುಂದೇನಾಯ್ತು?
ಬೆಂಗಳೂರು, ಜುಲೈ. 07: ಬಾಯ್ಫ್ರೆಂಡ್ ತನ್ನನ್ನು, ತಾನಿರುವ ಊರನ್ನು ಬಿಟ್ಟು ಹೋಗದಂತೆ ತಡೆಯಲು ಪ್ರಿಯತಮೆ ಹಲವು ಪ್ಲ್ಯಾನ್ಗಳನ್ನು ಮಾಡುತ್ತಾರೆ ಎಂಬುದನ್ನು ಕೇಳಿದ್ದೇವೆ. ನೋಡಿದ್ದೇವೆ. ಆದರೆ, ಸಿಲಿಕಾನ್ ಸಿಟಿಯ ಪ್ರೇಮಿಯೊಬ್ಬರು ತನ್ನ ಬಾಯ್ಫ್ರೆಂಡ್ ಊರು ಬಿಟ್ಟು ಹೋಗುವುದನ್ನು ತಡೆಯಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ!.
ಹೌದು... ಪುಣೆಯ 29 ವರ್ಷದ ಯುವತಿಯೊಬ್ಬರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಸಹಾಯವಾಣಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ. ಆ ವ್ಯಕ್ತಿಯ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಆರೋಪಿಸಿದ್ದಾರೆ. ಈ ಮೂಲಕ ತನ್ನ ಗೆಳೆಯ ಮುಂಬೈಗೆ ವಿಮಾನ ಹತ್ತುವುದನ್ನು ತಡೆಯುವುದು ಆಕೆಯ ಉದ್ದೇಶವಾಗಿತ್ತು. ಆದರೆ, ಅದು ಉಲ್ಟಾ ಹೊಡೆದಿದೆ.

ಹುಸಿ ಬಾಂಬ್ ಕರೆ ಮಾಡಿದ ಕಾರಣ ಕಾನೂನು ತೊಂದರೆಗೆ ಸಿಲುಕಿದ್ದು, ಪ್ರಕರಣ ದಾಖಲಾಗಿದೆ. ಜೂನ್ 26 ರಂದು ನಡೆದ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಐಪಿಸಿ ಸೆಕ್ಷನ್ 505 (1) (ಬಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ವರದಿಯ ಪ್ರಕಾರ, ಆರೋಪಿ ಯುವತಿಯನ್ನು ಇಂದ್ರ ರಾಜ್ವರ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮುಂಬೈಗೆ ಹೋಗಲು ಉದ್ದೇಶಿಸಿರುವ ತನ್ನ ಗೆಳೆಯ ಮಿರ್ ರಜಾ ಮೆಹದಿ ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆತ ತನ್ನ ಲಗೇಜ್ನಲ್ಲಿ ಬಾಂಬ್ ಅನ್ನು ಹೊತ್ತೊಯ್ಯುತ್ತಿದ್ದ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತನಿಖೆಯ ನಂತರ, ಮಿರ್ ರಜಾ ಮೆಹದಿಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ ಆದರೆ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಕರೆ ನಿರ್ದಿಷ್ಟವಾಗಿಲ್ಲ ಎಂದು ಪರಿಗಣಿಸಲಾಗಿದೆ. ಹೆಚ್ಚಿನ ವಿಚಾರಣೆ ಬಳಿಕ ಇಂದ್ರ ರಾಜ್ವರ್ ಮತ್ತು ಮಿರ್ ರಜಾ ಮೆಹದಿ ಇಬ್ಬರೂ ಆ ಸಂಜೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು. ಮುಂಬೈಗೆ ಪ್ರತ್ಯೇಕ ವಿಮಾನಗಳನ್ನು ಕಾಯ್ದಿರಿಸಿದ್ದರೂ ಸಹ, ಹುಸಿ ಬಾಂಬ್ ಕರೆ ಮಾಡುವ ಮೊದಲು ಅವರು ನಿರ್ಗಮನ ಲಾಂಜ್ನಲ್ಲಿ ಮಾತುಕತೆ ನಡೆಸಿದ್ದಾರೆ.

ಹುಸಿ ಬಾಂಬ್ ಕರೆ ಬಳಿಕ ಇಂದ್ರ ರಾಜ್ವರ್ ಅವರನ್ನು ಬಂಧಿಸಲಾಯಿತು ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ತನ್ನ ಗೆಳೆಯ ಮಿರ್ ರಜಾ ಮೆಹದಿ ಅವರೊಂದಿಗಿನ ವೈಯಕ್ತಿಕ ಭಿನ್ನಾಭಿಪ್ರಾಯಗಳು ಮತ್ತು ಅವರು ಮುಂಬೈಗೆ ಹೋಗುವುದನ್ನು ತಡೆಯಲು ಇಂತಹ ಕೃತ್ಯ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಈ ವಿಷಯದ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications