Bengaluru:ಪುಣೆಯಿಂದ ಬೆಂಗಳೂರಿಗೆ ವಿಮಾನದಲ್ಲಿ ₹ 3,500 ಟಿಕೆಟ್ ; ವಿಮಾನ ನಿಲ್ದಾಣದಿಂದ ಮನೆಗೆ ಟ್ಯಾಕ್ಸಿ ₹2,000
ಮಹಾನಗರ ಬೆಂಗಳೂರಿನಲ್ಲಿ ದಿನನಿತ್ಯ ಒಂದಿಲ್ಲೊಂದು ವಿಶಿಷ್ಟವಾದ ಘಟನೆಗಳು ನಡೆಯುತ್ತಲೇ ಇರುತ್ತವೆ. ಈ ಬಾರಿ ಎಕ್ಸ್ ಬಳಕೆದಾರರೊಬ್ಬರು ನಗರದ ಉಬರ್ ಟ್ಯಾಕ್ಟಿ ಎಷ್ಟು ದುಬಾರಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ಸದ್ಯ ವೈರಲ್ ಆಗಿದೆ.
ಬೆಂಗಳೂರಿನಿಂದ ಪುಣೆಗೆ ವಿಮಾನ ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ತನ್ನ ಮನೆಗೆ ತನ್ನ ಉಬರ್ ನಡುವಿನ ದರದ ವ್ಯತ್ಯಾಸ ಕೇವಲ ₹1,500 ಎಂದು ಹೇಳಿಕೊಂಡಿದ್ದಾರೆ. ಮನಸ್ವಿ ಶರ್ಮಾ ಎನ್ನುವವರು ಎಕ್ಸ್ ಖಾತೆಯಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದು, ಉಬರ್ ಎಷ್ಟು ದುಬಾರಿ ಎನ್ನುವುದನ್ನು ಹೇಳಿದ್ದಾರೆ.

ಮನಸ್ವಿ ಶರ್ಮಾ ಹಂಚಿಕೊಂಡಿರುವ ಪೋಸ್ಟ್ನಲ್ಲಿ, "ನಾನು ಪುಣೆಯಿಂದ ಬೆಂಗಳೂರಿಗೆ ₹ 3.5 ಸಾವಿರಕ್ಕೆ ವಿಮಾನವನ್ನು ಬುಕ್ ಮಾಡಿದ್ದೇನೆ. ಆದರೆ, ಬೆಂಗಳೂರು ವಿಮಾನ ನಿಲ್ದಾಣದಿಂದ ನನ್ನ ಮನೆಗೆ ₹ 2 ಸಾವಿರಕ್ಕೆ ಕ್ಯಾಬ್ ಬುಕ್ ಮಾಡಬೇಕಾಯಿತು" ಎಂದು ಅವರು ಬರೆದಿದ್ದಾರೆ.
ಅವರು ತಮ್ಮ ಪೋಸ್ಟ್ನಲ್ಲಿ ಉಬರ್ ಇಂಡಿಯಾವನ್ನು ಟ್ಯಾಗ್ ಮಾಡಿದ್ದಾರೆ. ಅವರು ತನ್ನ ಟ್ವೀಟ್ ಅನ್ನು ಸ್ಕ್ರೀನ್ಶಾಟ್ನೊಂದಿಗೆ ಹಂಚಿಕೊಂಡಿದ್ದು ಅದರಲ್ಲಿ ಹಲವು ಉಬರ್ ಸೇವೆಗಳ ದರವನ್ನು ನೋಡಬಹುದು.
ಬಸ್ನಲ್ಲಿ ಪ್ರಯಾಣಿಸಲು ಸಲಹೆ
ಏಪ್ರಿಲ್ 1ರಂದು ಪೋಸ್ಟ್ ಅನ್ನು ಹಂಚಿಕೊಳ್ಳಲಾಗಿದೆ. ಈ ಪೋಸ್ಟ್ 6.9 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಕಂಡಿದ್ದು, 5,900 ಮೆಚ್ಚುಗೆಗಳನ್ನು ಸಂಗ್ರಹಿಸಿದೆ. ಈ ಪೋಸ್ಟ್ಗೆ ಎಕ್ಸ್ ಬಳಕೆದಾರರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
"ಉಬರ್ ಗೋ (Uber Go) ಚಾಲಕರು ಎಸಿ ಯನ್ನು ಆನ್ ಮಾಡುವುದಿಲ್ಲ, ಪ್ರೀಮಿಯರ್ಗೆ ಮಾತ್ರ ಎಸಿ ಇರುತ್ತದೆ ಎಂದು ಚಾಲಕರು ಹೇಳುತ್ತಾರೆ." ಎಂದು ಬಳಕೆದಾರರೊಬ್ಬರು ತಮ್ಮ ಅಸಮಾಧಾನವನ್ನು ಹಂಚಿಕೊಂಡಿದ್ದಾರೆ.
"ನಿಮಗೆ ಸಾಧ್ಯವಾದರೆ ಬಸ್ಸುಗಳನ್ನು ಬಳಸಿ," ಎಂದು ಮತ್ತೊಬ್ಬ ಬಳಕೆದಾರರು ಪ್ರತಿಕ್ರಿಯೆ ನೀಡಿದ್ದಾರೆ.
"ಏನೀಗ? ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಪುಣೆ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲು ಕಡಿಮೆ ಸಮಯ ತೆಗೆದುಕೊಳ್ಳುತ್ತದೆ" ಎಂದು ಮತ್ತೊಬ್ಬರು ವಿಶಿಷ್ಟವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
"ಬಸ್ಗಳನ್ನು ಬಳಸಿ. ಇಲ್ಲದಿದ್ದರೆ, ಏರ್ಪೋರ್ಟ್ ಪಿಕ್-ಅಪ್ಗಳು ಮತ್ತು ಡ್ರಾಪ್-ಆಫ್ಗಳಿಗಾಗಿ ಅವರು ವಿಶ್ವಾಸಾರ್ಹ ಚಾಲಕನನ್ನು ತಿಳಿದಿದ್ದಾರೆಯೇ ಎಂದು ಸ್ನೇಹಿತರನ್ನು ವಿಚಾರಿಸಿ. ಅವರು ₹2000 ಕ್ಕಿಂತ ಕಡಿಮೆ ಶುಲ್ಕ ವಿಧಿಸುತ್ತಾರೆ" ಎಂದು ಸಲಹೆ ನೀಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ











Click it and Unblock the Notifications