ಮಹಿಳಾ ಟೆಕ್ಕಿಗೆ ಕಿರುಕುಳ : ಹಾಸ್ಯ ನಟನ ವಿರುದ್ಧ ಆರೋಪ
ಬೆಂಗಳೂರು, ಜನವರಿ 07: ಮಜಾ ಟಾಕೀಸ್ ಖ್ಯಾತಿಯ ಹಾಸ್ಯ ನಟ ತರಂಗ ವಿಶ್ವ ಅವರ ವಿರುದ್ಧ ಕಿರುಕುಳ ಆರೋಪ ಹೊರೆಸಿ ಮಹಿಳಾ ಟೆಕ್ಕಿ ನಂದಾ ಎಂ.ಕೆ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಆದರೆ, ಆರೋಪವನ್ನು ವಿಶ್ವ ಅವರು ತಳ್ಳಿಹಾಕಿದ್ದಾರೆ.
ಹಲವಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿರುವ ಹಾಸ್ಯನಟ ತರಂಗ ವಿಶ್ವ ಅಲಿಯಾಸ್ ವಿಶ್ವನಾಥ್ ಅವರ ದೂರು ನೀಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಗೂ ದೂರು ಸಲ್ಲಿಕೆಯಾಗಿದ್ದು, ಆಯುಕ್ತರ ನಿರ್ದೇಶನದ ಮೇಲೆ ಆರೋಪಿಗಳ ವಿರುದ್ಧ ಎಫ್ ಐ ಆರ್ ಹಾಕಲಾಗಿದೆ ಎಂದು ತಿಳಿದು ಬಂದಿದೆ.
ಉತ್ತರಹಳ್ಳಿಯ ಪ್ಯಾಷನ್ ಹೌಸ್ ಅಪಾರ್ಟ್ ಮೆಂಟ್ ನಲ್ಲಿ ತನ್ನ ಮಗಳ ಜೊತೆ ಟೆಕ್ಕಿ ವಾಸವಾಗಿದ್ದಾರೆ. 2013-14ರಲ್ಲಿ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಪುಟ್ಟಸ್ವಾಮಿ(ಆರೋಪಿ ನಂ 01)ಅವರು ಆಗಾಗ್ಗೆ ಮಹಿಳೆಯನ್ನು ಹಿಂಬಾಲಿಸಿ, ಅಶ್ಲೀಲವಾಗಿ ಮಾತನಾಡಿದ್ದಲ್ಲದೆ, ಅನುಚಿತವಾಗಿ ವರ್ತಿಸಿರುತ್ತಾರೆ.

ನಂತರ 2015ರಲ್ಲಿ ಕನಕ ಲೇಔಟ್ ಗೆ ಬಂದ ಮೇಲೂ ಪುಟ್ಟಸ್ವಾಮಿ ಹಾಗೂ ಅಳಿಯ ನಾಗೇಶ್ ಅವರು ಅಸಭ್ಯವಾಗಿ ವರ್ತಿಸಿದ್ದಾರೆ. ನಂತರ ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ವಾಸವಾಗಿದ್ದು, ಅಲ್ಲಿ ಕೂಡಾ ನನಗೆ ಪುಟ್ಟಸ್ವಾಮಿ, ನಾಗೇಶ್, ವಿಶ್ವನಾಥ್(ತರಂಗ ವಿಶ್ವ), ಪಾಪಣ್ಣ ಎಂಬುವರು ಕಾಟ ಕೊಟ್ಟಿದ್ದಾರೆ. ಈ ಬಾರಿ ಈ ಹಿಂದೆ ಕೂಡಾ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೆಕ್ಕಿ ನಂದಾ ತಮ್ಮ ದೂರಿನಲ್ಲಿ ಹೇಳಿದ್ದಾರೆ.
"ಪೊಲೀಸರೇ ಇದೊಂದು ಸುಳ್ಳು ಸುದ್ದಿ ಎಂದು ನನಗೆ ಸ್ಪಷ್ಟ ಪಡಿಸಿದ್ದಾರೆ. ನನಗೆ ಆ ಮಹಿಳೆಯ ಪರಿಚಯವೇ ಇಲ್ಲ. ಅದಷ್ಟೇ ಅಲ್ಲದೆ ಅಲ್ಲಿ ತರಂಗ ವಿಶ್ವ ಅನ್ನುವ ಹೆಸರಿನಲ್ಲಿ ದೂರನ್ನ ದಾಖಲು ಮಾಡಿದ್ದಾರೆ ಅಷ್ಟೇ ಅದೂ ನಾನಲ್ಲ" ಎಂದು ನಟ ವಿಶ್ವ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications