ತಂತ್ರಜ್ಞಾನ ಸದುಪಯೋಗದಿಂದ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು; ಉಮಾ ರೆಡ್ಡಿ
ಬೆಂಗಳೂರು, ಮಾರ್ಚ್ 30: ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು ಎಂದು ಹೈಟೆಕ್ ಮ್ಯಾಗ್ನಟಿಕ್ ಸಲ್ಯೂಶನ್ಸ್ ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ ಅಭಿಪ್ರಾಯಪಟ್ಟರು.
ಕರ್ನಾಟಕ ಪತ್ರಕರ್ತೆಯರ ಸಂಘ, ಎಫ್ಕೆಸಿಸಿಐ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಬುಧವಾರ ಪತ್ರಕರ್ತೆಯರಿಗಾಗಿ ಆಯೋಜಿಸಿದ್ದ ಡಿಜಿಟಲ್ ಲಿಟರಸಿ ಕಾರ್ಯಾಗಾರದಲ್ಲಿ ತಂತ್ರಜ್ಞಾನ ಹಾಗೂ ಅವಕಾಶಗಳ ಕುರಿತು ಮಾತನಾಡಿದರು.
ಪ್ರಸ್ತುತ ಡಿಜಿಟಲ್ ಲಿಟರಸಿ ಮುಖ್ಯವಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾಯಿತು. ಹೆಚ್ಚು ಜನರನ್ನು ತಲುಪಲು ಸಾಧ್ಯವಾಯಿತು. ಪ್ರತಿದಿನ ತಂತ್ರಜ್ಞಾನ ಅಪ್ ಗ್ರೇಡ್ ಆಗುತ್ತಿರುತ್ತದೆ. ಅದನ್ನು ಹೇಗೆ ಬಳಸಿಕೊಳ್ಳಬೇಕು, ಪ್ರಯೋಜನಗಳು ಮತ್ತು ನೆಟ್ವರ್ಕಿಂಗ್ ಕುರಿತು ಅರಿವು ಇರಲೇಬೇಕು. ಅಗತ್ಯವಿರುವ ಮತ್ತು ಸೂಕ್ತವಾದ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಮಹಿಳಾ ಉದ್ಯಮಿಯಾಗಬಹುದು ಎಂದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ರಜಿನಿ ರಮೇಶ್ ಮಾತನಾಡಿ, ಪ್ರತಿಯೊಬ್ಬರು ತಮ್ಮನ್ನು ತಾವು ತೆರೆದುಕೊಳ್ಳಲು ಸಾಮಾಜಿಕ ಜಾಲತಾಣ ಉತ್ತಮ ವೇದಿಕೆ. ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆದರೂ, ಅವುಗಳನ್ನು ವೈಯಕ್ತಿಕ ಸುರಕ್ಷತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯಿಂದ ಬಳಸಬೇಕು. ಈ ಅರಿವು ಅತ್ಯಗತ್ಯ ಎಂದು ತಿಳಿಸಿದರು. ಪತ್ರಕರ್ತೆಯರಿಗೆ ಅಗತ್ಯವಿರುವ ಸೋಷಿಯಲ್ ಮೀಡಿಯಾ, ಬಳಕೆ, ಉಪಯೋಗ ಕುರಿತು ಪ್ರಾತ್ಯಕ್ಷಿಕೆ ನೀಡುವ ಮೂಲಕ ವಿವರಿಸಿದರು.
ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಹಾಗೂ ಪತ್ರಕರ್ತೆಯರ ಮುಂದಿರುವ ಸವಾಲುಗಳ ಬಗ್ಗೆ ವಿವರಿಸಿದರು.

ಕಾರ್ಯಾಗಾರದಲ್ಲಿ ಸಂಘದ ಕಾರ್ಯದರ್ಶಿ ಮಾಲತಿ ಭಟ್, ಹಿರಿಯ ಪತ್ರಕರ್ತೆ ಕೆ.ಎಚ್.ಸಾವಿ ತ್ರಿ, ಆಕಾಶವಾಣಿ ನಿರ್ದೇಶಕಿ ನಿರ್ಮಲಾ ಎಲಿಗಾರ್, ಪಿಐಬಿ ಅಧಿಕಾರಿ ಜಯಂತಿ ಕೆ.ವೈ ಸೇರಿದಂತೆ ಹಿರಿಯ ಹಾಗೂ ಕಿರಿಯ ಪತ್ರಕರ್ತೆಯರು ಭಾಗವಹಿಸಿದ್ದರು. ಭಾಗ್ಯಲಕ್ಷ್ಮಿ ಪದಕಿ ಪ್ರಾರ್ಥನೆ, ಪದ್ಮಾ ಶಿವಮೊಗ್ಗ ಕಾರ್ಯಕ್ರಮ ನಿರೂಪಿಸಿದರು.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications