ತಂತ್ರಜ್ಞಾನ ಸದುಪಯೋಗದಿಂದ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು; ಉಮಾ ರೆಡ್ಡಿ
ಬೆಂಗಳೂರು, ಮಾರ್ಚ್ 30: ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು ಎಂದು ಹೈಟೆಕ್ ಮ್ಯಾಗ್ನಟಿಕ್ ಸಲ್ಯೂಶನ್ಸ್ ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ ಅಭಿಪ್ರಾಯಪಟ್ಟರು.
ಕರ್ನಾಟಕ ಪತ್ರಕರ್ತೆಯರ ಸಂಘ, ಎಫ್ಕೆಸಿಸಿಐ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಬುಧವಾರ ಪತ್ರಕರ್ತೆಯರಿಗಾಗಿ ಆಯೋಜಿಸಿದ್ದ ಡಿಜಿಟಲ್ ಲಿಟರಸಿ ಕಾರ್ಯಾಗಾರದಲ್ಲಿ ತಂತ್ರಜ್ಞಾನ ಹಾಗೂ ಅವಕಾಶಗಳ ಕುರಿತು ಮಾತನಾಡಿದರು.
ಪ್ರಸ್ತುತ ಡಿಜಿಟಲ್ ಲಿಟರಸಿ ಮುಖ್ಯವಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾಯಿತು. ಹೆಚ್ಚು ಜನರನ್ನು ತಲುಪಲು ಸಾಧ್ಯವಾಯಿತು. ಪ್ರತಿದಿನ ತಂತ್ರಜ್ಞಾನ ಅಪ್ ಗ್ರೇಡ್ ಆಗುತ್ತಿರುತ್ತದೆ. ಅದನ್ನು ಹೇಗೆ ಬಳಸಿಕೊಳ್ಳಬೇಕು, ಪ್ರಯೋಜನಗಳು ಮತ್ತು ನೆಟ್ವರ್ಕಿಂಗ್ ಕುರಿತು ಅರಿವು ಇರಲೇಬೇಕು. ಅಗತ್ಯವಿರುವ ಮತ್ತು ಸೂಕ್ತವಾದ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಮಹಿಳಾ ಉದ್ಯಮಿಯಾಗಬಹುದು ಎಂದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ರಜಿನಿ ರಮೇಶ್ ಮಾತನಾಡಿ, ಪ್ರತಿಯೊಬ್ಬರು ತಮ್ಮನ್ನು ತಾವು ತೆರೆದುಕೊಳ್ಳಲು ಸಾಮಾಜಿಕ ಜಾಲತಾಣ ಉತ್ತಮ ವೇದಿಕೆ. ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆದರೂ, ಅವುಗಳನ್ನು ವೈಯಕ್ತಿಕ ಸುರಕ್ಷತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯಿಂದ ಬಳಸಬೇಕು. ಈ ಅರಿವು ಅತ್ಯಗತ್ಯ ಎಂದು ತಿಳಿಸಿದರು. ಪತ್ರಕರ್ತೆಯರಿಗೆ ಅಗತ್ಯವಿರುವ ಸೋಷಿಯಲ್ ಮೀಡಿಯಾ, ಬಳಕೆ, ಉಪಯೋಗ ಕುರಿತು ಪ್ರಾತ್ಯಕ್ಷಿಕೆ ನೀಡುವ ಮೂಲಕ ವಿವರಿಸಿದರು.
ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಹಾಗೂ ಪತ್ರಕರ್ತೆಯರ ಮುಂದಿರುವ ಸವಾಲುಗಳ ಬಗ್ಗೆ ವಿವರಿಸಿದರು.

ಕಾರ್ಯಾಗಾರದಲ್ಲಿ ಸಂಘದ ಕಾರ್ಯದರ್ಶಿ ಮಾಲತಿ ಭಟ್, ಹಿರಿಯ ಪತ್ರಕರ್ತೆ ಕೆ.ಎಚ್.ಸಾವಿ ತ್ರಿ, ಆಕಾಶವಾಣಿ ನಿರ್ದೇಶಕಿ ನಿರ್ಮಲಾ ಎಲಿಗಾರ್, ಪಿಐಬಿ ಅಧಿಕಾರಿ ಜಯಂತಿ ಕೆ.ವೈ ಸೇರಿದಂತೆ ಹಿರಿಯ ಹಾಗೂ ಕಿರಿಯ ಪತ್ರಕರ್ತೆಯರು ಭಾಗವಹಿಸಿದ್ದರು. ಭಾಗ್ಯಲಕ್ಷ್ಮಿ ಪದಕಿ ಪ್ರಾರ್ಥನೆ, ಪದ್ಮಾ ಶಿವಮೊಗ್ಗ ಕಾರ್ಯಕ್ರಮ ನಿರೂಪಿಸಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಅವಳ ಮಾತಿನ ಭಯದಲ್ಲಿ ಬದುಕುವ ಗಂಡಸರು: ಹೇಳದಿರುವ ನೋವಿನ ಕಥೆಗಳು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications