ಬೆಂಗಳೂರು ಬಸ್ಸಿನಲ್ಲಿ ಬಡೆದಾಟ: ಬಿಡ್ರಿ ಬಿಡ್ರಿ ಅಂದ್ರ ಕೇಳಲಿಲ್ಲ ಮಹಿಳೆಯರು ಚಪ್ಪಲಿ ಹರಿಯೊಂಗ ಹೊಡೆದಾಡಿದ್ರು....
ಬೆಂಗಳೂರು ಫೆಬ್ರವರಿ 10: ರಾಜ್ಯ ಸರ್ಕಾರ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಆರಂಭಿಸಿ ಸುಮಾರು ದಿನಗಳು ಕಳೆದಿವೆ. ಹೀಗಾಗಿ ಕೆಎಸ್ಆರ್ಟಿಸಿ ಮಾತ್ರವಲ್ಲದೆ ಬಿಎಂಟಿಸಿ ಬಸ್ಗಳು ನಿತ್ಯ ಮಹಿಳೆಯರಿಂದಲೇ ತುಂಬಿ ಹೋಗಿರುತ್ತವೆ. ಸುಮಾರು 40 ಸೀಟುಗಳಿರುವ ಬಸ್ಗೆ ಸುಮಾರು ನೂರು ಜನ ಮಹಿಳೆಯರು ಕಾಯುವಂತ ದೃಶ್ಯಗಳು ನಿಲ್ದಾಣದಲ್ಲಿ ಸಾಮಾನ್ಯವಾಗಿವೆ. ಈ ನಡುವೆ ಬಸ್ವೊಂದರಲ್ಲಿ ಮಹಿಳೆಯರು ಚಪ್ಪಲಿಯಿಂದ ಹೊಡೆದಾಡಿಕೊಂಡ ದೃಶ್ಯವೊಂದು ವೈರಲ್ ಆಗಿದೆ.
ಫೆಬ್ರವರಿ 8 ರಂದು ಬೆಂಗಳೂರಿನಲ್ಲಿ ಕಿಕ್ಕಿರಿದ ಬಸ್ನೊಳಗೆ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಗಳಿಂದ ಹೊಡೆದಾಡುತ್ತಿರುವ ವೀಡಿಯೊ ಆನ್ಲೈನ್ನಲ್ಲಿ ಕಾಣಿಸಿಕೊಂಡಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಈ ಘಟನೆಯನ್ನು ತಮ್ಮ ಮೊಬೈಲ್ ಫೋನ್ಗಳಲ್ಲಿ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಕೇಶ್ ಪ್ರಕಾಶ್ ಎಂಬ ವ್ಯಕ್ತಿ ಎಕ್ಸ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಮುಂಬದಿ ಸೀಟ್ನಲ್ಲಿ ಕುಳಿತ ಮಹಿಳೆ ಹಿಂಬದಿ ಕುಳಿತ ಮಹಿಳೆಗೆ ಚಪ್ಪಲಿಯಿಂದ ಹೊಡೆಯುತ್ತಿರುವುದು ಕಂಡು ಬಂದಿದೆ. ಪ್ರತಿಯಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ದೃಶ್ಯ ಕಂಡು ಬಂದಿದೆ.
ಹಿಂಬದಿ ಕುಳಿತ ಮಹಿಳೆ ಕಿಟಕಿ ತೆರೆದ ಕಾರಣ ಇಬ್ಬರು ಮಹಿಳೆಯರು ವಾಗ್ವಾದ ನಂತರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ. ಬಸ್ ಕಂಡಕ್ಟರ್ ಕೂಡ ಜಗಳವನ್ನು ಬಿಡಿಸಿದ್ದಾರೆ. ಆದರೂ ಸುಮ್ಮನಾಗದ ಇಬ್ಬರು ಮಹಿಳೆಯರನ್ನು ಬಸ್ನಿಂದ ಇಳಿಸುವಂತೆ ಇತರ ಪ್ರಯಾಣಿಕರು ಒತ್ತಾಯಿಸುತ್ತಿದ್ದಂತೆ ಇಬ್ಬರು ಸುಮ್ಮನಾಗಿದ್ದಾರೆ.
ಈ ವಿಡಿಯೋ ಆನ್ಲೈನ್ನಲ್ಲಿ ಕಾಣಿಸಿಕೊಂಡ ತಕ್ಷಣ ಸಾಮಾಜಿಕ ಜಾಲತಾಣ ಬಳಕೆದಾರರ ಗಮನ ಸೆಳೆದಿದೆ. ಪೋಸ್ಟ್ನ ಕಾಮೆಂಟ್ಗಳ ವಿಭಾಗದಲ್ಲಿ ಜನರು ತಮ್ಮ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಆದರೆ ಇತರರು ಬಸ್ ಪ್ರಯಾಣದ ಸಮಯದಲ್ಲಿ ಇದೇ ರೀತಿಯ ಅಸ್ತವ್ಯಸ್ತವಾಗಿರುವ ಸಂದರ್ಭಗಳನ್ನು ಎದುರಿಸುವ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಬಸ್ನಲ್ಲಿ ಮಹಿಳೆಯರ ಜಗಳ
ಕಳೆದ ವರ್ಷ ಬಸ್ ಸೀಟಿಗಾಗಿ ಮಹಿಳೆಯರಿಬ್ಬರು ಬೀದರ್ ಜಿಲ್ಲೆಯಲ್ಲಿ ಜಗಳವಾಡಿಕೊಂಡ ದೃಶ್ಯ ಭಾರೀ ವೈರಲ್ ಆಗಿತ್ತು.
ಭಾಲ್ಕಿಯಿಂದ ಹಳ್ಳಿಖೇಡ(ಬಿ)ಗೆ ಹೊರಟಿದ್ದ ಬಸ್ನಲ್ಲಿ ಚಳಕಾಪುರ ಬಳಿ ಘಟನೆ ನಡೆದಿತ್ತು. ಮಹಿಳೆಯೊಬ್ಬರು ತನಗೂ ಕೂರಲು ಜಾಗ ಬಿಡುವಂತೆ ಕೇಳಿದಾಗ, ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಮಹಿಳೆಯರ ಜಗಳ ಬಿಡಿಸುವಷ್ಟರಲ್ಲಿ ಸಹ ಪ್ರಯಾಣಿಕರು ಸುಸ್ತಾಗಿದ್ದಾರೆ.
ಮಹಿಳೆಯರ ಜಗಳದ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶಕ್ತಿ ಯೋಜನೆ ಉಚಿತ ಪ್ರಯಾಣದ ವೇಳೆ ನಾರಿಯರು ಪರಸ್ಪರ ಶಕ್ತಿ ಪ್ರದರ್ಶನ ಮಾಡಿರುವುದು ಚರ್ಚೆಗೆ ಎಡೆಮಾಡಿಕೊಟ್ಟಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications