ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮನೆಯೊಳಗೆ ಮಹಿಳೆ ಹೆಣವಿತ್ತು, ಕತ್ತಿನಲ್ಲಿರುವ ಸರ ಇರಲಿಲ್ಲ

|
Google Oneindia Kannada News

ಬೆಂಗಳೂರು, ನವೆಂಬರ್ 21: ಬೆಂಗಳೂರಿನ ರಾಮಮೂರ್ತಿ ನಗರದ ಮನೆಯೊಂದರಲ್ಲಿ ಗೃಹಿಣಿ ಕೊಲೆಯಾಗಿದೆ, ಆಕೆಯ ಕತ್ತಿನಲ್ಲಿದ್ದ ಆಭರಣವನ್ನು ತೆಗೆದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಮೇಘಲ ದೇವಿ ಅವರನ್ನು ಕೊಲೆ ಮಾಡಿದ್ದಾರೆ. ಚಿನ್ನಾಭರಣ ದೋಚುವ ಉದ್ದೇಶದಿಂದಲೇ ಮನೆಗೆ ನುಗ್ಗಿದ್ದಾರೆ, ಇದು ಪರಿಚಿತರ ಕೆಲಸ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

 ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ತಮಿಳುನಾಡು ಮೂಲದ ಮೇಘಲ ದೇವಿ ಹಾಗೂ ಪತಿ ಕೃಷ್ಣಮೂರ್ತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು, ಕಳೆದ 30 ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದರು. ದಂಪತಿಗಳಿಬ್ಬರೇ ವಾಸಿಸುತ್ತಿದ್ದರು.

Women found dead, gold chain missing

ಮಂಗಳವಾರ ಎಂದಿನಂತೆ ಕೃಷ್ಣಮೂರ್ತಿ ಕೆಲಸಕ್ಕೆ ಹೋಗಿದ್ದು ಮೇಘಲ ದೇವಿ ಮನೆಯಲ್ಲಿದ್ದರು, ಮಧ್ಯಾಹ್ನ 2.30ರ ಸುಮಾರಿಗೆ ದುಷ್ಕರ್ಮಿಗಳು ಬಂದು ಬಾಗಿಲು ತಟ್ಟಿದ್ದಾರೆ.

ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ

ಪರಿಚಯಸ್ಥರು ಎಂದು ಬಾಗಿಲು ತೆಗೆಯುತ್ತಿದ್ದಂತೆ ಮನೆಗೆ ಪ್ರವೇಶಿಸಿದ ದುಷ್ಕರ್ಮಿಗಳು ಆಕೆಯ ಜೊತೆ ಮಾತನಾಡುತ್ತಲೇ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.ಆಕೆ ಕಿರುಚಿಕೊಳ್ಳುತ್ತಿದ್ದಂತೆ ಆಕೆಯ ಕತ್ತನ್ನು ಸೀಳಿ ಓಡಿಹೋಗಿದ್ದಾರೆ. ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

English summary
A women was found dead murdered inside the house at Ramamurthy nagar on Tuesday. The assailant slit her throat before fleeing with her gold chain
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X