ರೌಡಿ ಶಬರೀಶ್ ಗ್ಯಾಂಗ್ ನಿಂದ ಮಹಿಳೆ ಮೇಲೆ ಅತ್ಯಾಚಾರ !
ಬೆಂಗಳೂರು, ಫೆಬ್ರವರಿ 13 : ಆಕೆ ಮನೆ ಗೆಲಸ ಮಾಡಿ ಜೀವನ ಸಾಗಿಸುತ್ತಿದ್ದಳು. ಮನೆ ಕೆಲಸಕ್ಕೆ ಹೋಗುತ್ತಿದ್ದ ಅಕೆಯನ್ನು ಕಾರಿನಲ್ಲಿ ಅಪಹರಿಸಿ ಮೂರು ತಾಸು ಮೂರು ಕಾಮುಕರು ಅತ್ಯಾಚಾರ ಎಸಗಿದ್ದರು. ನಿತ್ರಾಣಗೊಂಡಿದ್ದ ಆಕೆಯನ್ನು ಬಿಟ್ಟು ಕಳುಹಿಸಿದ್ದರು !
ಇದು ಬೇರೆ ಯಾರೂ ಅಲ್ಲ. ಯಲಹಂಕ ಪೊಲೀಸರ ಗುಂಡೇಟು ತಿಂದು ಹಾಸಿಗೆ ಹಿಡಿದಿರುವ ರೌಡಿ ಶೀಟರ್ ಶಬರೀಶ್ ಮತ್ತು ಆತನ ಸಹಚರರಾದ ಇಮ್ರಾನ್, ಮುರಳಿ ಸಹಚರರು ಎಸಗಿರುವ ಕೃತ್ಯದ ವಿವರ. ಎರಡು ದಿನದ ಹಿಂದಷ್ಟೇ ಶಬರೀಶ್ ಯಲಹಂಕ ಪೊಲೀಸರ ಗುಂಡೇಟು ತಿಂದು ಸಿಕ್ಕಿಬಿದ್ದಿದ್ದ. ಆನಂತರ ಯಲಹಂಕ ಉಪ ನಗರ ಪೊಲೀಸರು ಶಬರೀಶ್ ಸಹಚರ ಇಮ್ರಾನ್ ಕಾಲಿಗ ಗುಂಡು ಹಾರಿಸಿದ್ದರು. ಅಂತೂ ಇವರು ಎಸಗಿರುವ ಪಾತಕ ಕೃತ್ಯಗಳು ಒಂದೊಂದಾಗಿ ಹೊರ ಬರುತ್ತಿವೆ.
ಶಬರೀಶ್ ಮತ್ತು ಆತನ ಸಹಚರರ ವಿರುದ್ಧ ವಿವಿಧ ಠಾಣೆಗಳಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಕಿರಾತಕರು ಎಣ್ಣೆಗಾಗಿ ಏನು ಕೃತ್ಯ ಬೇಕಾದರೂ ಮಾಡುತ್ತಿದ್ದರು. ಗುಂಡೇಟು ತಿನ್ನುವ ಮುನ್ನ ನಾಗರಾಜ್ ಎಂಬ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದಕ್ಕೂ ಮುನ್ನ ಅಟ್ಟೂರು ಲೇಔಟ್ ಸಮೀಪ ಮನೆ ಕೆಲಸ ಮಾಡುವ ಮಹಿಳೆಯನ್ನು ಕಾರಿನಲ್ಲಿ ಅಪಹರಿಸಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆ ನಿತ್ರಾಣಗೊಂಡ ಬಳಿಕ ಬಿಟ್ಟು ಹೋಗಿದ್ದು, ಯಲಹಂಕ ಪೊಲೀಸರ ತನಿಖೆ ವೇಳೆ ಈ ಸಂಗತಿ ಹೊರ ಬಿದ್ದಿದೆ.

ಬಿಬಿಎಂಪಿ ಕಸ ವಿಲೇವಾರಿ: ಪಾತಕಿ ಶಬರೀಶ್ ನ ಸಹಚರ ರಂಜಿತ್ ಎಂಬಾತ ಬೆಳಗ್ಗೆ ಬಿಬಿಎಂಪಿ ಕಸದ ಆಟೋ ಚಾಲನೆ ಮಾಡುತ್ತಿದ್ದ. ಅಡ್ಡ ಮಾರ್ಗದಲ್ಲಿ ಹಣ ಸಂಪಾದಿಸಲು ರಾತ್ರಿ ವೇಳೆ ಈ ಪಾತಕಿಗಳ ಜತೆ ಸೇರಿ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಪಾತಕಿಗಳ ಮತ್ತಷ್ಟು ಕೃತ್ಯಗಳ ಬಗ್ಗೆ ಪೊಲೀಸ್ ಇನ್ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಶೋಧ ನಡೆಸುತ್ತಿದ್ದಾರೆ.

Recommended Video
ಪಾತಕಿ ರಂಜಿತ್ ಕೆಲವು ವರ್ಷದಿಂದ ಬಿಬಿಎಂಪಿ ಕಸ ವಿಲೇವಾರಿ ಆಟೋ ಓಡಿಸುತ್ತಿದ್ದ. ರಾತ್ರಿ ವೇಳೆ ಕ್ರಿಮಿನಲ್ ಅಪರಾಧ ಕೃತ್ಯ ಎಸಗುತ್ತಿದ್ದ. ಮೂರು ದಿನದ ಹಿಂದೆ ವಾಹನ ಮತ್ತು ಮೊಬೈಲ್ ಕಸಿದಿದ್ದರು. ಈ ಕುರಿತು ಖಚಿತ ಮಾಹಿತಿ ಆಧರಿಸಿ ರಾತ್ರಿ ಗಸ್ತಿನಲ್ಲಿದ್ದ ಯಲಹಂಕ ಸಂಚಾರ ಪೊಲೀಸರು ಆರೋಪಿಗಳ ಬಂಧನಕ್ಕೆ ಯತ್ನಿಸಿದ್ದರು. ಮಂಗಳ ಮುಖಿಯರು ನೀಡಿದ ಮಾಹಿತಿ ಮೇರೆಗೆ ಮೊಬೈಲ್ ಕಸಿದಿದ್ದ ಕಿರಾತಕರನ್ನು ಸಂಚಾರ ಪೊಲೀಸರೇ ಬೆನ್ನಟ್ಟಿದ್ದರು. ಆದರೆ ಈ ವೇಳೆ ಅಪಘಾತ ಮಾಡಿಕೊಂಡಿದ್ದ ರಂಜಿತ್ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಆನಂತರ ಯಲಹಂಕ ಪೊಲೀಸರು ಆರೋಪಿಗಳನ್ನು ಬೆನ್ನಟ್ಟಿದ್ದರು. ಇದೀಗ ಶಬರೀಶ್ ಮತ್ತು ಇಮ್ರಾನ್ ಗೆ ಪೊಲೀಸರು ಬುದ್ಧಿ ಕಲಿಸಿದ್ದಾರೆ. ಮುರಳಿ ಮತ್ತು ರಂಜಿತ್ ಸಿಕ್ಕಿಬಿದ್ದಿದ್ದಾರೆ. ಇಷ್ಟಕ್ಕೆ ಈ ಪಾತಕಿಗಳು ಸುಮ್ಮನಾಗುತ್ತಾರಾ ಅನ್ನೋದು ಕಾದು ನೋಡಬೇಕು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications