Namma Metro: ರೈಲ್ವೆ, ಬಸ್, ಮೆಟ್ರೋ ನಿಲ್ದಾಣಗಳಲ್ಲಿ 'ಸ್ತನ್ಯಪಾನ ಕೇಂದ್ರ' ಸ್ಥಾಪನೆಗೆ ಹೆಚ್ಚಿದ ಆಗ್ರಹ
ಬೆಂಗಳೂರು, ಸೆಪ್ಟಂಬರ್ 22: ಬೆಂಗಳೂರು ನಮ್ಮ ಮಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಸ್ತನ್ಯಪಾನಕ್ಕೆ ಜಾಗವಿಲ್ಲದೆ ಪರದಾಡಿದ ಘಟನೆಯು ವರದಿ ಆಗುತ್ತಿದ್ದಂತೆ ವಿವಿಧ ನಿಲ್ದಾಣಗಳಲ್ಲಿ ಮಹಿಳಾ ಆರೈಕೆ ಕೇಂದ್ರ/ಶಿಶುಗಳಿಗೆ ಹಾಲುಣಿಸುವ ಕೇಂದ್ರ ಸ್ಥಾಪಿಸಬೇಕು ಎಂಬ ಕೂಗು ಹೆಚ್ಚಾಗಿದೆ. ಈ ಕುರಿತು ಸರ್ಕಾರ, ಸಂಬಂಧಿಸಿದ ಸಾರಿಗೆ ಸಂಸ್ಥೆಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಬೆಂಗಳೂರು ಮಟ್ರೋ ಟ್ರಿನಿಟಿ ನಿಲ್ದಾಣ (ನೇರಳೆ ಮಾರ್ಗ) ದಲ್ಲಿ ತನ್ನ ಮಗುವಿಗೆ ಹಾಲುಣಿಸಲು ಸೂಕ್ತ ಜಾಗ ಇಲ್ಲದೇ ತಾಯಿಯೊಬ್ಬರು ಒದ್ದಾಡಿದ್ದರು. ಬಳಿಕ ತಾಯಿ ಸರಿಯಾದ ಜಾಗ ಇಲ್ಲದ್ದು ಕಂಡು ಕೊನೆಗೆ ವಿಧಿ ಇಲ್ಲದೇ ಪ್ಲಾಟ್ಫಾರ್ಮ್ ಬಳಿ ಅಡಗಿಕೊಂಡು ಸ್ತನ್ಯಪಾನ ಮಾಡಿದರು. ಆಗ ಅವರ ಪತಿ ಅವರಿಗೆ ಕಾವಲಾಗಿ ನಿಂತಿದ್ದನ್ನು ಯಾರೋ ಪ್ರಯಾಣಿಕರು ಸೆರೆ ಹಿಡಿದಿದ್ದರು.

ಈ ಘಟನೆ ಬೆಳಕಿಗೆ ಬಂದ ನಂತರ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ KSRTC, BMTC ಹಾಗೂ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳಾ ಆರೈಕೆ ಕೇಂದ್ರ ಸ್ಥಾಪಿಸುವಂತೆ ಮಹಿಳೆಯರು ಆಗ್ರಹಿಸಿದ್ದಾರೆ.
ನಮ್ಮ ಮೆಟ್ರೋ ಅಧಿಕಾರಿಗಳು ಹೇಳಿದ್ದೇನು?
ಬೆಂಗಳೂರಿನಲ್ಲಿ 2017ರಿಂದಲೇ ಮಹಿಳಾ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ನಿಲ್ದಾಣಗಳಲ್ಲಿ ಸ್ತನ್ಯಪಾನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಹಾಗೂ ಯಶವಂತಪುರ ನಿಲ್ದಾಣದಲ್ಲಿ ತಾಯಂದಿರಿಗೆ ಹಾಲುಣಿಸುವ ಕೇಂದ್ರ ನಿರ್ಮಿಸಿದ್ದೇವೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಹಲವೆಡೆ ನಿರ್ಮಿಸಲಾಗುವುದು ಅಂತಲೂ ಮಾಹಿತಿ ಕೊಟ್ಟಿದ್ದಾರೆ.
ಹಾಗಾದರೆ ಸದ್ಯ ಬೆಂಗಳೂರಿನ ಯಾವ ನಿಲ್ದಾಣಗಳಲ್ಲಿ ಶಿಶುಗಳಿಗೆ ಹಾಲುಣಿಸುವ ಕೇಂದ್ರ ಸ್ಥಾಪನೆಗೆ ಆಗಿವೆ ಎಂದು ನೋಡುವುದಾದರೆ, ಯಶವಂತಪುರ, ಪೀಣ್ಯ ಮತ್ತು ಕೆಂಗೇರಿ ಉಪನಗರ ಮೆಟ್ರೋ ನಿಲ್ದಾಣಗಳಲ್ಲಿ ನಿರ್ಮಾಣ ಮಾಡಲಾಗಿದೆ.
ಇನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಎಂಟು ಬಸ್ ನಿಲ್ದಾಣಗಳಲ್ಲಿ ಮಹಿಳಾ ಆರೈಕೆ ಕೆಂದ್ರ ನಿರ್ಮಿಸಲಾಗಿದೆ. ಕೋರಮಂಗಲ, ವೈಟ್ಫೀಲ್ಡ್, ಯಲಹಂಕ, ಜಯನಗರ, ಶಾಂತಿ ನಗರ, ಮೆಜೆಸ್ಟಿಕ್, ಬನ್ನೇರುಘಟ್ಟ, ಬನಶಂಕರಿ ಮತ್ತು ದೊಮ್ಮಲೂರು ಸೇರಿದಂತೆ ಬಿಎಂಟಿಸಿ ಬಸ್ಗಳೂ ಒಂದೆಡೆ ಸೇರುವ ಬೃಹತ್ ನಿಲ್ದಾಣಗಳಲ್ಲಿ ಈ ಮಹಿಳಾ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ ಎಂದು ಈಟಿವಿ ಭಾರತ್ ವರದಿ ಮಾಡಿದೆ.
ಟಿಟಿಎಂಸಿ ಹೊರತು ಬೇರೆ ಕಡೆಗೂ ನಿರ್ಮಾಣವಾಗಲಿ
ಬೇಬಿ ಕೇರ್ ಸೆಂಟರ್ ಗಳನ್ನು ಕೇವಲ ದೊಡ್ಡ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಮಾತ್ರ ಮಾಡದೇ ಸಣ್ಣ ಸಣ್ಣ ಬಸ್ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಸ್ಥಾಪಿಸುವ ಮೂಲಕ ತಾಯಂದಿರಿಗೆ ಅನುಕೂಲ ಮಾಡಿಕೊಂಡುವಂತೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಮಾತನಾಡಿದರು.
ಬೆಂಗಳೂರು ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸುವ್ಯವಸ್ಥಿತವಾಗಿ ಮಹಿಳಾ ಆರೈಕೆ ಕೇಂದ್ರಗಳಿವೆ. ಇದು ಮಕ್ಕಳಿಗೆ ಹಾಲುಣಿಸಲು, ಆರೈಕೆಗೆ ಸಹಾಯಕ್ಕೆ ಬರಲಿವೆ. ರೈಲ್ವೆ ಅಧಿಕಾರಿಗಳು ಇದನ್ನು ಸುಸ್ಥಿತಿಯಲ್ಲಿ ಇಟ್ಟಿದ್ದಾರೆ. ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಊಟದ ಕೊಠಡಿ ಸ್ವಚ್ಛವಾಗಿದೆ ಎಂದು ಮಹಿಳೆಯೊಬ್ಬರು ಮಾಹಿತಿ ನೀಡಿದ್ದಾರೆ. ಇದೇ ರೀತಿ ಬೇರೆ ಬೇರೆ ಕಡೆಗಳಲ್ಲಿ ನಿರ್ಮಾಣವಾಗಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ..
ಇತ್ತೀಚೆಗೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳಾ ಆರೈಕೆ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿದ ಕರ್ನಾಟಕ ರಾಜ್ಯ ಮಹಿಳಾ ಆರೋಗದ ಅಧ್ಯಕ್ಷ ಡಾ.ನಾಗಲಕ್ಷ್ಮೀ ಚೌಧರಿ ಅವರು ಬಿಎಂಆರ್ಸಿಎಲ್ಗೆ ಪತ್ರ ಮುಖೇನ ಮನವಿ ಮಾಡಿಕೊಂಡಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications