ಈಜಿಪುರ-ಕೇಂದ್ರೀಯ ಸದನ ಜಂಕ್ಷನ್ ಫ್ಲೈಓವರ್ ನಿರ್ಮಾಣ ಆರಂಭ
ಬೆಂಗಳೂರು, ಡಿಸೆಂಬರ್ 15: ಈಜಿಪುರ ರಸ್ತೆ ಒಳವರ್ತುಲ ಜಂಕ್ಷನ್ ನಿಂದ ಕೇಂದ್ರೀಯ ಸದನ ಜಂಕ್ಷನ್ ವರೆಗೆ 'ಫ್ಲೈ ಓವರ್' ನಿರ್ಮಾಣ ಆರಂಭವಾಗಿದೆ. ಸದ್ಯ ಮಣ್ಣಿನ ಪರೀಕ್ಷೆ ನಡೆಸಲಾಗುತ್ತಿದೆ.
ಈ ಮೇಲ್ಸೇತುವೆ ನಿರ್ಮಾಣಕ್ಕೆ ಜುಲೈ 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಕಾಮಗಾರಿ ಆರಂಭಿಸಲಾಗಿದೆ.
ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಈ 2.4 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ರೂ. 203.20 ಕೋಟಿ ವೆಚ್ಚದಲ್ಲಿ ಮೆ.ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇದರ ನಿರ್ಮಾಣ ಮಾಡಲಿದೆ.

ಮೇಲು ಸೇತುವೆ ಲಾಭಗಳು
ಈ ಮೇಲು ಸೇತುವೆ ನಿರ್ಮಾಣದಿಂದ ಇಲ್ಲಿನ ಮೂರು ವೃತ್ತಗಳಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಯಲಿದೆ. ಈಜಿಪುರ ರಸ್ತೆ ಒಳವರ್ತುಲ ಜಂಕ್ಷನ್, ಸೋನಿ ವರ್ಲ್ಡ್ ಜಂಕ್ಷನ್ ಹಾಗೂ ಕೇಂದ್ರೀಯ ಸದನ ಜಂಕ್ಷನ್ ಗಳಲ್ಲಿ ಟ್ರಾಫಿಕ್ ದೊಟ್ಟ ಮಟ್ಟಕ್ಕೆ ತಗ್ಗಲಿದೆ. ಜತೆಗೆ ಇನ್ನೂ ನಾಲ್ಕು ಸಣ್ಣ ಜಂಕ್ಷನ್ ಗಳಲ್ಲೂ ವಾಹನದಟ್ಟಣೆ ಕಡಿಮೆಯಾಗಲಿದೆ.

ಪ್ರಯಾಣದ ಅವಧಿ ಉಳಿತಾಯ
ಇನ್ನು ಫ್ಲೈ ಓವರ್ ನಿರ್ಮಾಣವಾದರೆ ಪ್ರಯಾಣಿಕರು ಹೊಸೂರು ರಸ್ತೆಯಿಂದ ದೊಮ್ಮಲೂರಿಗೆ ನೇರವಾಗಿ ಮೇಲ್ಸೇತುವೆ ಮೂಲಕ ಪ್ರಯಾಣಿಸಬಹುದಾಗಿದೆ. ಇದರಿಂದ ಸುಮಾರು 30 ನಿಮಿಷಗಳಷ್ಟು ಪ್ರಯಾಣದ ಅವಧಿ ಪ್ರಯಾಣಿಕರಿಗೆ ಉಳಿತಾಯವಾಗಲಿದೆ.

ಮಣ್ಣಿನ ಪರೀಕ್ಷೆಗೆ ಚಾಲನೆ
ಮೇಲ್ಸೇತುವೆಗಾಗಿ ಒಟ್ಟು 62 ಕಂಬಗಳನ್ನು ನಿರ್ಮಿಸಲಾಗುತ್ತದೆ. ಇದಕ್ಕಾಗಿ ಕೇಂದ್ರೀಯ ಸದನ ಜಂಕ್ಷನ್ ಹಾಗೂ ಈಜೀಪುರ ಮುಖ್ಯರಸ್ತೆಯಲ್ಲಿ 20 ಮೀಟರ್ ಆಳದವರೆಗೆ ಮಣ್ಣಿನ ಪರೀಕ್ಷೆ ನಡೆಸಲಾಗುತ್ತಿದೆ. ತಿಂಗಳಲ್ಲಿ ಈ ಪರೀಕ್ಷೆ ಮುಗಿಯಲಿದ್ದು, ಕಂಬಗಳ ನಿರ್ಮಾಣ ಆರಮಭವಾಗಲಿದೆ.

ರ್ಯಾಂಪ್ಗಳು ಹೀಗಿರಲಿವೆ
ಸೇತುವೆಯಲ್ಲಿ ಒಟ್ಟು 4 ರ್ಯಾಂಪ್ ನಿರ್ಮಿಸಲಾಗುತ್ತದೆ. ಇದರಲ್ಲಿ ಹೊಸೂರು ರಸ್ತೆಯ ಕಡೆಗೆ 192.46 ಮೀ. ಉದ್ದದ ರ್ಯಾಂಪ್, ದೊಮ್ಮಲೂರು ಕಡೆಗೆ 118.62 ಮೀ., ಮಡಿವಾಳದ ಕಡೆಗೆ 169.21 ಮೀ., ಕೇಂದ್ರೀಯ ಸದನದ ಬಳಿ ಹೊಸೂರು ರಸ್ತೆಯಿಂದ ಮೇಲ್ಸೇತುವೆ ಕಡೆಗೆ 164.74 ಮೀಟರ್ ಉದ್ದದ ರ್ಯಾಂಪ್ ನಿರ್ಮಿಸಲಾಗುತ್ತದೆ.
2020ರ ಜನವರಿ 23ರೊಳಗೆ ಕಾಮಗಾರಿ ಪೂರ್ಣಗೊಳಿಸುವ ಷರತ್ತನ್ನು ವಿಧಿಸಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications