ಸಿರ್ಸಿ ವೃತ್ತ ಫ್ಲೈಓವರ್, 2ನೇ ಹಂತದ ಕಾಮಗಾರಿ: ವಾಹನ ಸವಾರರು ಹೈರಾಣು
ಬೆಂಗಳೂರು, ಜನವರಿ 10: ಸಿರ್ಸಿ ವೃತ್ತದ ಮೇಲ್ಸೇತುವೆಯ ಎರಡನೇ ಹಂತದ ಕಾಮಗಾರಿ ಆರಂಭವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.
ಸಿರ್ಸಿ ಸರ್ಕಲ್ ಮೇಲ್ಸೇತುವೆ ದುರಸ್ತಿಗೆ 4.30 ಕೋಟಿ ರೂ ಟೆಂಡರ್ ನೀಡಿದ್ದ ಬಿಬಿಎಂಪಿ , 2018ರ ಡಿಸೆಂಬರ್ನಲ್ಲಿ ಪುರಭವನದ ಮುಂಭಾಗದಿಂದ ಮೈಸೂರು ರಸ್ತೆ ಕಡೆಗೆ ಹೋಗುವ ಒಂದು ಮಾರ್ಗದ ದುರಸ್ತಿ ಕಾರ್ಯ ಆರಂಭಿಸಿ ಮಾರ್ಚ್ ವೇಳೆಗೆ ಮುಗಿಸಲಾಗಿತ್ತು.

ಫ್ಲೈಓವರ್ನಲ್ಲಿ ಒಂದು ಮಾರ್ಗ ಬಂದ್
ಟೌನ್ಹಾಲ್ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಸಾಗುವ ಒಂದು ಮಾರ್ಗವನ್ನು ಕಳೆದ ಮಾರ್ಚ್ ನಲ್ಲಿ ನೂತನ ತಂತ್ರಜ್ಞಾನ ಬಳಸಿಕೊಂಡು ಡಾಂಬರೀಕರಣ ಮಾಡಲಾಗಿತ್ತು. ಮತ್ತೊಂದು ಮಾರ್ಗದ ಡಾಂಬರೀಕರಣ ಕಾಮಗಾರಿಯನ್ನು ಮುಗಿಸಿತ್ತು.

ಜನವರಿ 8ರಿಂದ ಎರಡನೇ ಹಂತದ ಕಾಮಗಾರಿ ಆರಂಭ
ಬುಧವಾರ ರಾತ್ರಿಯಿಂದ ಎರಡನೇ ಹಂತದ ಕಾಮಗಾರಿ ಆರಂಭವಾಗಿದೆ. ಕೆಆರ್ ಮಾರುಕಟ್ಟೆಗೆ ಇಳಿಯುವ ಡೌನ್ ರಾಂಪ್ ನಿಂದ ಪುರಭವನ ಬಳಿಕ ಎನ್ಆರ್ ರಸ್ತೆಯವರೆಗೆ ಆರಂಭಿಸಲಾಗಿದೆ. ಕಾಮಗಾರಿಯಿಂದ ಚಾಮರಾಜಪೇಟೆ, ಕೆಆರ್ ಮಾರುಕಟ್ಟೆ, ಚಿಕ್ಕಪೇಟೆ ಸೇರಿದಂತೆ ಸಿರ್ಸಿ ಮೇಲ್ಸೇತುವೆಗೆ ಹೊಂದಿಕೊಂಡಿರುವ ಅಕ್ಕಪಕ್ಕದ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ.

ಎರಡೂ ಮಾರ್ಗದಲ್ಲಿ ವಾಹನ ದಟ್ಟಣೆ
ಪುರಭವನದ ಕಡೆಯಿಂದ ಹೋಗುವ ಮತ್ತು ಪುರಭವನಕ್ಕೆ ಬರುವ ಎರಡೂ ಮಾರ್ಗದಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಕಾಮಗಾರಿ ಮುಗಿಯುವುದಕ್ಕೆ ಇನ್ನೂ 15 ರಿಂದ 20 ದಿನ ಬೇಕಾಗಲಿದೆ. ಅಲ್ಲಿಯವರೆಗೆ ವಾಹನ ಸವಾರರು ಬದಲಿ ಮಾರ್ಗ ಹುಡುಕಿಕೊಳ್ಳುವುದು ಉತ್ತಮವಾಗಿದೆ.

ಹಗಲು-ರಾತ್ರಿ ಎರಡೂ ಅವಧಿಯಲ್ಲೂ ಕಾಮಗಾರಿ
ಹಗಲು ರಾತ್ರಿ ಎರಡೂ ಅವಧಿಯಲ್ಲಿಯೂ ಕಾಮಗಾರಿ ನಡೆಸಲಾಗುತ್ತಿದೆ. ಸಂಚಾರಿ ಪೊಲೀಸರು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ನಿಗದಿತ ಕಾಲಾವಧಿ ಒಳಗೆ ಕಾಮಗಾರಿ ಮುಗಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಎಂಜಿನಿಯರ್ ಸುರೇಶ್ ಮಾಹಿತಿ ನೀಡಿದ್ದಾರೆ .
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications