ಸಿರ್ಸಿ ವೃತ್ತ ಫ್ಲೈಓವರ್, 2ನೇ ಹಂತದ ಕಾಮಗಾರಿ: ವಾಹನ ಸವಾರರು ಹೈರಾಣು
ಬೆಂಗಳೂರು, ಜನವರಿ 10: ಸಿರ್ಸಿ ವೃತ್ತದ ಮೇಲ್ಸೇತುವೆಯ ಎರಡನೇ ಹಂತದ ಕಾಮಗಾರಿ ಆರಂಭವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.
ಸಿರ್ಸಿ ಸರ್ಕಲ್ ಮೇಲ್ಸೇತುವೆ ದುರಸ್ತಿಗೆ 4.30 ಕೋಟಿ ರೂ ಟೆಂಡರ್ ನೀಡಿದ್ದ ಬಿಬಿಎಂಪಿ , 2018ರ ಡಿಸೆಂಬರ್ನಲ್ಲಿ ಪುರಭವನದ ಮುಂಭಾಗದಿಂದ ಮೈಸೂರು ರಸ್ತೆ ಕಡೆಗೆ ಹೋಗುವ ಒಂದು ಮಾರ್ಗದ ದುರಸ್ತಿ ಕಾರ್ಯ ಆರಂಭಿಸಿ ಮಾರ್ಚ್ ವೇಳೆಗೆ ಮುಗಿಸಲಾಗಿತ್ತು.

ಫ್ಲೈಓವರ್ನಲ್ಲಿ ಒಂದು ಮಾರ್ಗ ಬಂದ್
ಟೌನ್ಹಾಲ್ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಸಾಗುವ ಒಂದು ಮಾರ್ಗವನ್ನು ಕಳೆದ ಮಾರ್ಚ್ ನಲ್ಲಿ ನೂತನ ತಂತ್ರಜ್ಞಾನ ಬಳಸಿಕೊಂಡು ಡಾಂಬರೀಕರಣ ಮಾಡಲಾಗಿತ್ತು. ಮತ್ತೊಂದು ಮಾರ್ಗದ ಡಾಂಬರೀಕರಣ ಕಾಮಗಾರಿಯನ್ನು ಮುಗಿಸಿತ್ತು.

ಜನವರಿ 8ರಿಂದ ಎರಡನೇ ಹಂತದ ಕಾಮಗಾರಿ ಆರಂಭ
ಬುಧವಾರ ರಾತ್ರಿಯಿಂದ ಎರಡನೇ ಹಂತದ ಕಾಮಗಾರಿ ಆರಂಭವಾಗಿದೆ. ಕೆಆರ್ ಮಾರುಕಟ್ಟೆಗೆ ಇಳಿಯುವ ಡೌನ್ ರಾಂಪ್ ನಿಂದ ಪುರಭವನ ಬಳಿಕ ಎನ್ಆರ್ ರಸ್ತೆಯವರೆಗೆ ಆರಂಭಿಸಲಾಗಿದೆ. ಕಾಮಗಾರಿಯಿಂದ ಚಾಮರಾಜಪೇಟೆ, ಕೆಆರ್ ಮಾರುಕಟ್ಟೆ, ಚಿಕ್ಕಪೇಟೆ ಸೇರಿದಂತೆ ಸಿರ್ಸಿ ಮೇಲ್ಸೇತುವೆಗೆ ಹೊಂದಿಕೊಂಡಿರುವ ಅಕ್ಕಪಕ್ಕದ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ.

ಎರಡೂ ಮಾರ್ಗದಲ್ಲಿ ವಾಹನ ದಟ್ಟಣೆ
ಪುರಭವನದ ಕಡೆಯಿಂದ ಹೋಗುವ ಮತ್ತು ಪುರಭವನಕ್ಕೆ ಬರುವ ಎರಡೂ ಮಾರ್ಗದಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಕಾಮಗಾರಿ ಮುಗಿಯುವುದಕ್ಕೆ ಇನ್ನೂ 15 ರಿಂದ 20 ದಿನ ಬೇಕಾಗಲಿದೆ. ಅಲ್ಲಿಯವರೆಗೆ ವಾಹನ ಸವಾರರು ಬದಲಿ ಮಾರ್ಗ ಹುಡುಕಿಕೊಳ್ಳುವುದು ಉತ್ತಮವಾಗಿದೆ.

ಹಗಲು-ರಾತ್ರಿ ಎರಡೂ ಅವಧಿಯಲ್ಲೂ ಕಾಮಗಾರಿ
ಹಗಲು ರಾತ್ರಿ ಎರಡೂ ಅವಧಿಯಲ್ಲಿಯೂ ಕಾಮಗಾರಿ ನಡೆಸಲಾಗುತ್ತಿದೆ. ಸಂಚಾರಿ ಪೊಲೀಸರು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ನಿಗದಿತ ಕಾಲಾವಧಿ ಒಳಗೆ ಕಾಮಗಾರಿ ಮುಗಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಎಂಜಿನಿಯರ್ ಸುರೇಶ್ ಮಾಹಿತಿ ನೀಡಿದ್ದಾರೆ .
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications