ಮುಂದಿನ 30 ವರ್ಷ ಗಮನದಲ್ಲಿಟ್ಟುಕೊಂಡು ಸ್ಮಾರ್ಟ್ ಮಲ್ಲೇಶ್ವರ ನಿರ್ಮಾಣ: ಅಶ್ವತ್ಥನಾರಾಯಣ
ಬೆಂಗಳೂರು, ಮಾ.6: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಳಚರಂಡಿ, ನೀರಿನ ಕೊಳವೆ, ಮ್ಯಾನ್ ಹೋಲ್, ಓ.ಎಫ್.ಸಿ. ಡಕ್ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ಮುಂದಿನ 30 ವರ್ಷಗಳ ಅಗತ್ಯವನ್ನು ಗಮನದಲ್ಲಿ ಇಟ್ಟುಕೊಂಡು, ಶಾಶ್ವತ ಕಾಮಗಾರಿಗಳನ್ನಾಗಿ ಮಾಡಲಾಗುತ್ತಿದೆ. ಇವುಗಳನ್ನೆಲ್ಲ ಇನ್ನು ಎರಡು-ಮೂರು ತಿಂಗಳುಗಳಲ್ಲಿ ಮುಗಿಸಲಾಗುವುದು ಎಂದು ಕ್ಷೇತದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರವನ್ನು ಸ್ಮಾರ್ಟ್ ಮಲ್ಲೇಶ್ವರ ಆಗಿ ಅಭಿವೃದ್ಧಿ ಪಡಿಸುವುದೇ ನಮ್ಮ ಆದ್ಯತೆಯಾಗಿದೆ. ಅಭಿವೃದ್ಧಿ ಕಾಮಗಾರಿಗಳ ನೆಪದಲ್ಲಿ ರಸ್ತೆ, ಒಳಚರಂಡಿ, ಕೊಳವೆ ಮಾರ್ಗ, ವಿದ್ಯುತ್ ಕಂಬ ಇತ್ಯಾದಿಗಳನ್ನು ಪದೇಪದೇ ಅಗೆದು, ಕಿತ್ತು ಮಾಡಬಾರದು ಎನ್ನುವುದು ತಮ್ಮ ಆಶಯವಾಗಿದೆ. ಇದರಿಂದಾಗಿ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತಾತ್ಕಾಲಿಕ ತೊಂದರೆಗೆ ಬೇಸರವಿದೆ. ಆದರೆ, ಇನ್ನೆರಡು ತಿಂಗಳಲ್ಲಿ ಇದೆಲ್ಲ ಪರಿಹಾರವಾಗಲಿದೆ' ಎಂದರು.
ಮಲ್ಲೇಶ್ವರ ಬೆಂಗಳೂರು ನಗರದ ಅತ್ಯಂತ ಹಳೆಯ ಬಡಾವಣೆಗಳಲ್ಲೊಂದಾಗಿದೆ. ಹೀಗಾಗಿ ಇಲ್ಲಿ ಒಳಚರಂಡಿ ಮಾರ್ಗ, ನೀರಿನ ಕೊಳವೆ, ಮ್ಯಾನ್ ಹೋಲ್ಗಳು ಎಲ್ಲವೂ ಶಿಥಿಲವಾಗಿ ಪದೇಪದೇ ತೊಂದರೆಯಾಗುತ್ತಿತ್ತು. ಇವುಗಳಿಗೆ ಒಂದು ದೀರ್ಘಾವಧಿ ಪರಿಹಾರ ರೂಪಿಸಬೇಕು ಎನ್ನುವುದೇ ನಮ್ಮ ಗುರಿಯಾಗಿದೆ. ಇದಕ್ಕೆ ತಕ್ಕಂತೆ ಈಗ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಿಗೆ ಹಣಕಾಸಿನ ಕೊರತೆಯೇನೂ ಇಲ್ಲ ಎಂದು ಅವರು ವಿವರಿಸಿದರು.

ಈಗ ಕಾಂಕ್ರೀಟ್ ಮ್ಯಾನ್ ಹೋಲುಗಳನ್ನು ಮೊದಲೇ ಸಿದ್ಧಪಡಿಸಿ, ವೈಜ್ಞಾನಿಕವಾಗಿ ಅಳವಡಿಸಲಾಗುತ್ತಿದೆ. ಹಾಗೆಯೇ, ಒಳಚರಂಡಿ ಕೊಳವೆಗಳಲ್ಲಿ ತ್ಯಾಜ್ಯವೂ ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಲಾಗಿದೆ. ಓ.ಎಫ್.ಸಿ. ಕೇಬಲ್ಲುಗಳನ್ನು ಹಾಕುವಾಗ ಮುಂದೆಂದೂ ತೊಂದರೆ ಬರದಂತೆ ಡಕ್ಟ್ ಗಳನ್ನು ಅಳವಡಿಸಲಾಗುತ್ತಿದೆ. ಇವು ಸ್ಮಾರ್ಟ್ ಮಲ್ಲೇಶ್ವರ ರೂಪಿಸಲು ಪೂರಕವಾಗಿವೆ ಎಂದು ಅವರು ನುಡಿದರು.
ಪದೇ ಪದೇರಸ್ತೆ ಅಗೆಯುವುದನ್ನು ತಪ್ಪಿಸುವ ಸಲುವಾಗಿ ಕಾಮಗಾರಿ ಮುಗಿದ ತಕ್ಷಣ ಡಾಂಬರು ಹಾಕಲಾಗುವುದು. ಇದಕ್ಕೆ ಹಣ ಕೂಡ ಬಿಡುಗಡೆ ಆಗಿದೆ. ಅಲ್ಲಿಯವರೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.
Recommended Video
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications