15 ವರ್ಷಗಳ ಹಿಂದೆ ಹಸಿರು ಬೆಂಗಳೂರು ಹೇಗಿತ್ತು?
ಬೆಂಗಳೂರು, ಜೂನ್ 04:ವಿಶ್ವ ಪರಿಸರ ದಿನ ಎದುರಾಗಿದೆ. ಹಿಂದಿನ ಬೆಂಗಳೂರು ಹೇಗಿತ್ತು? ಇಂದಿನ ಬೆಂಗಳೂರು ಹೇಗಿದೆ? ಹಸಿರು ಮಾಯವಾಗಿ ಕಾಂಕ್ರಿಟ್ ಕಾಡು ಹೇಗೆ ಮನೆ ಮಾಡಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು.
ಬಿಹಾರದಿಂದ ಬೆಂಗಳೂರಿಗೆ ನಾಲ್ಕು ದಶಕದ ಹಿಂದೆ ಬಂದು ನೆಲೆಸಿದ ನಿವೃತ್ತ ಸರ್ಕಾರಿ ನೌಕರ ನರೇಶ್ ಝಾ ಉದ್ಯಾನ ನಗರಿಯ ಅಂದಿನ ವಾತಾವಣ, ಪರಿಸರವನ್ನು ವಿವರಿಸಿದ್ದಾರೆ.[ಅನಂತ್ ಕುಮಾರ್ ಅವರ ಕನಸಿನ ಹಸಿರು ಬೆಂಗಳೂರು 1:1]

ದಶಕಗಳ ಕಾಲ ಬೆಂಗಳೂರಲ್ಲಿ ನೆಲಿಸಿದ ಝಾ ಕನ್ನಡವನ್ನು ಚೆನ್ನಾಗಿ ಮಾತನಾಡಲು ಕಲಿತಿದ್ದಾರೆ. ಬೆಂಗಳೂರು ಇಂದು ಕಾಂಕ್ರಿಟ್ ಕಾಡಾಗಿ ಪರಿವರ್ತನೆ ಆಗಿದೆ ಎಂದು ಝಾ ವಿಷಾದ ವ್ಯಕ್ತಪಡಿಸುತ್ತಾರೆ.
ಅವರ ಮಾತಿನಲ್ಲೇ ಬೆಂಗಳೂರ ವೈಭವ ಮತ್ತು ಇಂದಿನ ಸ್ಥಿತಿಯನ್ನು ಕೇಳಿಕೊಂಡು ಬರೋಣ....
ಅಭಿವೃದ್ಧಿ ಹೆಸರಲ್ಲಿ ಸಾವಿರಾರು ಮರಗಳನ್ನು ನಾವು ಕಳೆದುಕೊಂಡಿದ್ದೇವೆ. ಬೆಂಗಳೂರ ಕೆರೆಗಳು ಮಾಲಿನ್ಯದ ತಾಣವಾಗಿ ಬದಲಾಗಿವೆ. ವಾಯು ಮಾಲಿನ್ಯದ ಪ್ರಮಾಣವನ್ನು ಊಹಿಸಿಕೊಳ್ಳಲು ಅಸಾಧ್ಯ. ಟ್ರಾಫಿಕ್ ಸಮಸ್ಯೆಯಂತೂ ಕೇಳುವುದೇ ಬೇಡ. ಇದು ನಮ್ಮ ಇಂದಿನ ಬೆಂಗಳೂರು.[ನಾವು ಕೋಟಿ ಜನ, ಕೋಟಿ ಮರ ಬೇಕು]

15 ವರ್ಷಗಳ ಹಿಂದೆ ಹೀಗೆ ಇರಲಿಲ್ಲ. ಹಸಿರಿನ ತಾಣವಾಗಿದ್ದ ಅಂದಿನ ಬೆಂಗಳೂರನ್ನು ನಾವು ಕಳೆದುಕೊಂಡಿದ್ದೇವೆ. ಆದರೆ ನಾನು ಪರಿಸರ ಸಂರಕ್ಷಣೆಯಿಂದ ಎಂದಿಗೂ ವಿಮುಖನಾಗುವುದಿಲ್ಲ. ನಾನು ಮತ್ತು ನನ್ನ ಸ್ನೇಹಿತರು ಸೇರಿ ಹಳೆ ವಿಮಾನ ನಿಲ್ದಾಣ ರಸ್ತೆ ಪಕ್ಕ ಈ ಬಾರಿಯೂ ಗಿಡಗಳನ್ನು ನೆಡಲಿದ್ದೇವೆ ಎಂದು ಹೇಳುತ್ತಾರೆ.
ಪರಿಸರ ಮತ್ತು ಅರಣ್ಯ ಇಲಾಖೆ ಒಂದಾಗಿ ವಿಶ್ವ ಪರಿಸರ ದಿನದ ಅಂಗವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜೂನ್ 5, ಭಾನುವಾರ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ರಿಚ್ ಮಂಡ್ ಅಂಡ್ ಲ್ಯಾಂಗ್ ಫರ್ಡ್ ವೆಲ್ ಫೇರ್ ಅಸೋಸಸಿಯೇಶನ್ ಸದಸ್ಯರು ಜಾಗೃತಿ ಮೆರವಣಿಗೆ ಹೊರಡಲಿದ್ದಾರೆ. ಯುವ ಸೃಷ್ಟಿ ಸಂಘಟನೆ ಸಹ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
" ಗೋ ವೈಲ್ಡ್ ಫಾರ್ ಲೈಫ್" ಘೋಷ ವಾಕ್ಯದಡಿ ಈ ಬಾರಿಯ ಪರಿಸರ ದಿನಾಚರಣೆ ನಡೆಯಲಿದ್ದು ಜಾಗತಿಕ ತಾಪಮಾನ ಏರಿಕೆಯನ್ನು ಪ್ರಮುಖ ಅಂಶವನ್ನಾಗಿ ಇರಿಸಿಕೊಳ್ಳಲಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications