Get Updates
Get notified of breaking news, exclusive insights, and must-see stories!

ಬೆಂಗಳೂರಿನಲ್ಲಿ ಅದ್ಧೂರಿ 'ಕುಂದಾಪ್ರ ಕನ್ನಡ ಹಬ್ಬ': ಇಲ್ಲಿದೆ ಕಾರ್ಯಕ್ರಮದ ಸಂಪೂರ್ಣ ವಿವರ

ಬೆಂಗಳೂರು, ಆಗಸ್ಟ್‌ 13: ಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರು, ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ʼಕುಂದಾಪ್ರ ಕನ್ನಡ ಹಬ್ಬʼವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್‌17ರ ಸಂಜೆ 5ಗಂಟೆಗೆ ಉದ್ಘಾಟಿಸಲಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್‌ ಪೆಟಲ್ಸ್‌ನಲ್ಲಿ ಆ. 17 ಮತ್ತು 18ರಂದು ನಡೆಯಲಿರುವ ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಸಂಪೂರ್ಣ ಕಾರ್ಯಕ್ರಮದ ವಿವರ ನೀಡಿದ್ದಾರೆ.

ಈ ಬಾರಿಯ ಕುಂದಾಪ್ರ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಭಾಗಿಯಾಗಲಿದ್ದಾರೆ.

World Kundapura Kannada Day Celebration At Bengaluru On August 17 And 18th

ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಆ ದಿನ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಗ್ರೂಪ್‌ನ ಉಪೇಂದ್ರ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ ಭಾಗಿಯಾಗಲಿದ್ದಾರೆ ಎಂದು ಡಾ. ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದರು.

ಒಂದು ಲಕ್ಷ ಜನರು ಸೇರುವ ನಿರೀಕ್ಷೆ

ಇದು ಕುಂದಾಪ್ರ ಕನ್ನಡ ಹಬ್ಬವಾದರೂ ಸಮಸ್ತ ಕನ್ನಡಿಗರ ಸಂಭ್ರಮ. ಹೀಗಾಗಿ ಈ ಹಬ್ಬಕ್ಕೆ ನಾವು ಎಲ್ಲರನ್ನೂ ಆಹ್ವಾನಿಸುತ್ತಿದ್ದು, ಎರಡು ದಿನಗಳ ಹಬ್ಬದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಅನುಕೂಲದ ದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಮೂಲಕ ಆಗಮಿಸುವುದು ಉತ್ತಮ. ಶನಿವಾರ ಮಧ್ಯಾಹ್ನ 2ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಈ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ ಎಂದು ದೀಪಕ್ ಹೇಳಿದರು.

ಈ ಹಬ್ಬ ಕುಂದಾಪುರ ಸಂಸ್ಕೃತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತುತಿ ಪಡಿಸುವ ಪ್ರಯತ್ನ. ಆ ಪೈಕಿ ಪ್ರಮುಖ ಆಕರ್ಷಣೆ ಆಗಿ ಜೋಡಾಟ ಇರಲಿದೆ. ಇದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಒಂದೇ ಪ್ರಸಂಗ ಏಕಕಾಲದಲ್ಲಿ ಎರಡು ರಂಗಸ್ಥಳಗಳಲ್ಲಿ ಸ್ಪರ್ಧೆಯ ಮೇಲೆ ನಡೆಯುವ ಈ ಪ್ರದರ್ಶನವನ್ನು ನೋಡಲು ಊರಿನಿಂದಲೇ 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸುತ್ತಿದ್ದಾರೆ.

World Kundapura Kannada Day Celebration At Bengaluru On August 17 And 18th

ಮತ್ತೊಂದೆಡೆ ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ 'ರವಿ ಬಸ್ರೂರ್ ನೈಟ್ಸ್' ಎಂಬ ವಿಶೇಷ ಸಂಗೀತ ಕಾರ್ಯಕ್ರಮ ಇರಲಿದೆ. ಇದು ಕೂಡ ಇದೇ ಪ್ರಥಮ ಬಾರಿಗೆ ನಡೆಯುತ್ತಿರುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್ ಮಾಹಿತಿ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+