ಬೆಂಗಳೂರು ವಿವಿಯಲ್ಲಿ ವಿಶ್ವದರ್ಜೆಯ ಸೈನ್ಸ್ ಫೋರಂ ಸ್ಥಾಪನೆ: ಏನಿದರ ವಿಶೇಷತೆ
ಬೆಂಗಳೂರು, ಡಿಸೆಂಬರ್ 18: ವಿಶ್ವ ಮಟ್ಟದಲ್ಲಿ ಸಾಕಷ್ಟು ಹಿರಿಮೆ ಗರಿಮೆ ಸಾಧಿಸಿರುವ ಬೆಂಗಳೂರು ವಿಶ್ವ ವಿದ್ಯಾಲಯ ಈಗ ಮತ್ತೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ವಿಶ್ವವಿದ್ಯಾಲಯ ಸ್ಥಾಪನೆಯಾಗಿ 6 ದಶಕ ಕಳೆದರೂ ಅನುಷ್ಠಾನವಾಗದ ಕಾರ್ಯಕ್ರಮ ಈಗ ಕಾರ್ಯರೂಪಕ್ಕೆ ಬಂದಿದೆ. ಬೆಂಗಳೂರು ವಿಶ್ವವಿದ್ಯಾಲಯ ಸೈನ್ಸ್ ಫೋರಂ (BUSF) ಸ್ಥಾಪಿಸಿ ಒಂದೇ ಸೂರಿನಡಿ ವಿಜ್ಞಾನ ಕ್ಷೇತ್ರದ ಎಲ್ಲಾ ಸಂಶೋಧನೆ, ಅನ್ವೇಷಣೆಗಳಿಗೆ ದಾರಿ ಮಾಡಿಕೊಟ್ಟಿದೆ.
ಬೆಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಸೈನ್ಸ್ ಫೋರಂ ಲೋಗೊ' ಅನಾವರಣ ಮಾಡುವ ಮೂಲಕ ಸೈನ್ಸ್ ಫೋರಂ ಸ್ಥಾಪನೆಗೆ ಅಧಿಕೃತ ಮುದ್ರೆ ಹಾಕಲಾಯಿತು. ಈ ಮೂಲಕ ಭವಿಷ್ಯದಲ್ಲಿ ಒಂದೇ ಸೂರಿನಡಿ ವಿಜ್ಞಾನ ಸಂಶೋಧನೆಗೆ ಆದ್ಯತೆ ನೀಡಲಾಗುತ್ತಿದೆ.

ಈ ವಿಜ್ಞಾನ ವೇದಿಕೆ (ಸೈನ್ಸ್ ಫೋರಂ)ಯು ಕಲಿಕೆಗೂ ಉತ್ತೇಜಿಸುವ ಜೊತೆಗೆ ಒಂದು ವೇದಿಕೆಯಡಿ ಸಂಶೋಧನೆ, ಆವಿಷ್ಕಾರದಂತಹ ಕಾರ್ಯಗಳಿಗೆ ಪೂರಕವಾಗಿರಲಿದೆ. ಇದು ವಿಶ್ವಮಟ್ಟದ ಸೌಲಭ್ಯ, ಸೌಕರ್ಯಗಳನ್ನು ಹೊಂದಿರಲಿದೆ ಎನ್ನಲಾಗುತ್ತಿದೆ.
ಏನಿದು ಸೈನ್ಸ್ ಫೋರಂ?
ಬೆಂಗಳೂರು ವಿಶ್ವವಿದ್ಯಾಲಯವು ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಮುಂಚೂಣಿಯಲ್ಲಿದ್ದು, ಮುಂದಿನ ಎಲ್ಲಾ ಅನ್ವೇಷಣೆಗಳನ್ನು ಒಂದೇ ಸೂರಿನಡಿ ತರಲು ವೇದಿಕೆ ಸೈನ್ಸ್ ಫೋರಂ (BUSF) ನಿರ್ಮಿಸಲಾಗುತ್ತಿದೆ. ವಿಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ವಿಭಾಗಗಳನ್ನು ಒಟ್ಟುಗೂಡಿಸಿ ಸಮಗ್ರ ಚರ್ಚೆ, ವೈಜ್ಞಾನಿಕ ವಿಷಯ ವಿನಿಮಯ, ಜ್ಞಾನ ಸಂಪಾದನೆ ಮಾಡುವ ಉದ್ದೇಶವನ್ನು ಸೈನ್ಸ್ ಫೋರಂ ಹೊಂದಿದೆ.
ಈ ಸೈನ್ಸ್ ಪೋರಂ ಮೂಲಕ ವರ್ಷದ 365 ದಿನಗಳ ಕಾಲ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಳ್ಳುವ ಗುರಿಯನ್ನು ಹೊಂದಿದೆ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಸಂಶೋಧನೆ, ಅನ್ವೇಷಣೆಗೆ ಸೂಕ್ತ ಮಾರ್ಗದರ್ಶವನ್ನು ಈ ಫೋರಂ ಮೂಲಕ ನೀಡಲಾಗುವುದು.

ಏನೆಲ್ಲಾ ಮಾಡಲಿದೆ ಸೈನ್ಸ್ ಫೋರಂ?
* ವಿಶ್ವದ ಶ್ರೇಷ್ಠ ವಿಜ್ಞಾನಿಗಳಿಂದ ಉಪನ್ಯಾಸ ಮಾಲಿಕೆ ಆಯೋಜನೆ
* ಕೇಂದ್ರಿಕೃತ ಉಪಕರಣ ಕೇಂದ್ರ ಸ್ಥಾಪನೆ
* ಅಂತರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳೊಂದಿಗೆ ಒಡಂಬಡಿಕೆ
* ಉದ್ಯಮಶೀಲತೆ ಸಹಭಾಗಿತ್ವ ಇರಲಿದೆ.
* ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸುತ್ತದೆ.
* ವಿಜ್ಞಾನ ಕಾರ್ಯಗಾರಗಳ ಆಯೋಜನೆ.
* ಅಲ್ಯೂಮಿನಿಗಳಿಂದ ಮಾರ್ಗದರ್ಶನ ನೀಡಲಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಹೆಚ್ ಎ ರಂಗನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದೆ. ಕುಲಪತಿ ಡಾ.ಜಯಕರ ಎಸ್ ಎಂ, ಕುಲಸಚಿವ ಶೇಕ್ ಲತೀಫ್, ಕುಲಸಚಿವ ಮೌಲ್ಯಮಾಪನ ಶ್ರೀನಿವಾಸ್ ಸಿ, ಸೈನ್ಸ್ ಡೀನ್ ಅಶೋಕ್ ಹಂಜಗಿ ಅವರು ಕಾರ್ಯಕ್ರಮದಲ್ಲಿದ್ದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications